ಚಿರು ಈಗ “ಕ್ಷತ್ರಿಯ’; ಅಣ್ಣನ ಸಿನ್ಮಾಗೆ ಧ್ರುವ ಕ್ಲಾಪ್‌


Team Udayavani, May 30, 2019, 3:25 PM IST

kashatriya

ಚಿರಂಜೀವಿ ಸರ್ಜಾ ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿ. ಈಗ ಅವರ ಮತ್ತೂಂದು ಹೊಸ ಚಿತ್ರ ಸೆಟ್ಟೇರಿದೆ. ಹೌದು, ಚಿರಂಜೀವಿ ಸರ್ಜಾ ಅಭಿನಯದ ಹೊಸ ಚಿತ್ರಕ್ಕೆ “ಕ್ಷತ್ರಿಯ’ ಎಂದು ಹೆಸರಿಡಲಾಗಿದ್ದು, ಬುಧವಾರ ಮಲ್ಲೇಶ್ವರಂನ ಆಂಜನೇಯ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿದೆ. ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ನಿರ್ದೇಶಕ ಸಂತೋಷ್‌ ಆನಂದರಾಮ್‌ ಕ್ಯಾಮರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಸಮಾಜದ ಒಳಿತಿಗೆ ಹೋರಾಡುವ ಒಬ್ಬ ಆಧುನಿಕ “ಕ್ಷತ್ರಿಯ’ನ ಪಾತ್ರದಲ್ಲಿ ಚಿರು ಕಾಣಿಸಿಕೊಳ್ಳುತ್ತಿದ್ದು, ಚಿತ್ರದಲ್ಲಿ ಅವರ ಪಾತ್ರಕ್ಕೆ ಎರಡು ವಿಭಿನ್ನ ಶೇಡ್‌ಗಳಿವೆಯಂತೆ. ಈ ಹಿಂದೆ ಪಿ.ವಾಸು, ದಿನಕರ್‌ ತೂಗುದೀಪ, ತರುಣ್‌ ಸುಧೀರ್‌, ಸಂತೋಷ್‌ ಆನಂದರಾಮ್‌ ಸೇರಿದಂತೆ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವವಿರುವ ಅನಿಲ್‌ ಮಂಡ್ಯ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಚಿತ್ರದ ಬಗ್ಗೆ ಹೇಳಿಕೊಳ್ಳುವ ಚಿರಂಜೀವಿ ಸರ್ಜಾ, “ನಿರ್ದೇಶಕ ಅನಿಲ್‌ ಒನ್‌ ಲೈನ್‌ ಸ್ಟೋರಿ ಹೇಳುತ್ತಿದ್ದಂತೆಯೇ ಕಥೆ ಇಷ್ಟವಾಯ್ತು. ಕೂಡಲೇ ಅವರನ್ನು ಕರೆಸಿಕೊಂಡು ಪೂರ್ಣ ಕಥೆ ಕೇಳಿದೆ. ಸಿನಿಮಾದಲ್ಲಿ ನಟಿಸಲೇಬೇಕು ಎಂದು ಒಪ್ಪಿಕೊಂಡೆ. ಈ ಸಿನಿಮಾಗೆ ಎಲ್ಲರೂ ಎಲ್ಲವನ್ನೂ ತಯಾರಿ ಮಾಡಿಕೊಂಡಿದ್ದಾರೆ.

ಚಿತ್ರದ ಕಥೆ, ಪಾತ್ರ ಪ್ರೇಕ್ಷಕರಿಗೂ ಇಷ್ಟವಾಗಲಿದೆ’ ಎಂಬ ವಿಶ್ವಾಸದ ಮಾತುಗಳನ್ನಾಡುತ್ತಾರೆ. ನಿರ್ದೇಶಕ ಅನಿಲ್‌ ಮಂಡ್ಯ ಅವರಿಗಿದು ಮೊದಲ ಚಿತ್ರ. ಆ ಬಗ್ಗೆ ಹೇಳುವ ಅವರು, “ನಾಯಕ ನಟನನ್ನು ಕೇಂದ್ರೀಕರಿಸಿಕೊಂಡು ಬರೆದಿರುವ ಈ ಕಥೆಯ ಮೊದಲಾರ್ಧದಲ್ಲಿ ಸೆಂಟಿಮೆಂಟ್‌ ಅಂಶಗಳಿದ್ದರೆ, ದ್ವಿತಿಯಾರ್ಧ ಪಕ್ಕಾ ಕಮರ್ಷಿಯಲ್‌ ಅಂಶಗಳಿವೆ. ಇಲ್ಲಿ ಅಕ್ಕ ತಮ್ಮನ ನಡುವಿನ ಬಾಂಧವ್ಯದ ಕಥೆಯೂ ಸಾಗಲಿದೆ.

ಪ್ರತಿಯೊಬ್ಬರ ಮನೆಯಲ್ಲಿ ನಡೆಯುವ ಘಟನೆಗಳೇ ಇಲ್ಲಿವೆ. ಚಿತ್ರದಲ್ಲಿರುವುದರಿಂದ ಪ್ರೇಕ್ಷಕರು ಕೂಡಾ ಇಲ್ಲಿನ ಪಾತ್ರಗಳೊಂದಿಗೆ ಕನೆಕ್ಟ್ ಆಗಿಬಿಡುತ್ತಾರೆ. ಮಂಡ್ಯದ ಗಂಡು ಅಂಬರೀಶ್‌ ಅವರ ಹುಟ್ಟುಹಬ್ಬದ ದಿನದಂದೇ ನನ್ನ ನಿರ್ದೇಶನದ ಮೊದಲ ಚಿತ್ರ ಮುಹೂರ್ತ ಚರಿಸಿಕೊಂಡಿರುವುದು ನನ್ನ ಪಾಲಿನ ಅದೃಷ್ಟ ಎಂದೇ ಭಾವಿಸಿದ್ದೇನೆ’ ಎನ್ನುತ್ತಾರೆ.

ಸುಮಾರು 55 ದಿನಗಳ ಕಾಲ ಬೆಂಗಳೂರು, ಮೈಸೂರು, ಮುಂಬೈ ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಚಿಸಿದೆ. ಚಿತ್ರದಲ್ಲಿ ದೇವರಾಜ್‌, ಸುಧಾರಾಣಿ, ಸಾಧುಕೋಕಿಲ ಇತರರು ಅಭಿನಯಿಸುತ್ತಿದ್ದಾರೆ. ಸದ್ಯ ನಾಯಕಿಯ ಪಾತ್ರಕ್ಕಾಗಿ ಹುಡುಕಾಟ ನಡೆಯುತ್ತಿದ್ದು, ಶೀಘ್ರವೇ ನಾಯಕಿ ಅಂತಿಮವಾಗಲಿದ್ದಾರೆ’ ಎಂಬುದು ಚಿತ್ರತಂಡದ ಹೇಳಿಕೆ. ಬಹದ್ದೂರ್‌ ಚೇತನ್‌ ಸಂಭಾಷಣೆ ಇದೆ.

ಐದು ಹಾಡುಗಳಿಗೆ ಧರ್ಮವಿಶ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಡಾ. ವಿ ನಾಗೇಂದ್ರ ಪ್ರಸಾದ್‌,
ಯೋಗರಾಜ್‌ ಭಟ್‌ ಸಾಹಿತ್ಯವಿದೆ. ಚಿತ್ರಕ್ಕೆ ರವಿ.ವಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್‌ ಸಂಕಲನವಿದೆ. ಕೆ. ರವಿವರ್ಮ ಸಾಹಸ ಸಂಯೋಜಿಸುತ್ತಿದ್ದಾರೆ. ಈ ಹಿಂದೆ ಚಿರು ಅಭಿನಯಿಸಿದ್ದ “ಸಂಹಾರ’ ಚಿತ್ರವನ್ನು ನಿರ್ಮಿಸಿದ್ದ “ವೈಷ್ಣವಿ ಮನು ಕ್ರಿಯೇಷನ್ಸ್‌’ ಬ್ಯಾನರ್‌ನಲ್ಲಿ ಎ. ವೆಂಕಟೇಶ್‌, ಕಿಶೋರ್‌ ಮಂಗಳವಾರಪೇಟೆ, ಎಂ. ಮನೀಶ್‌ ಮತ್ತು ಎಂ.ಜೆ ವಿಷ್ಣು ವರ್ಧನ್‌ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.