ಶೂನ್ಯ ಬಂಡವಾಳದಲ್ಲಿ ಸಿನಿಮಾ!

ನಂಬೋದು ಕಷ್ಟ, ಆದ್ರೂ ನಂಬಲೇ ಬೇಕು...

Team Udayavani, Dec 26, 2019, 7:01 AM IST

Maduve-Oota

ಶೂನ್ಯ ಬಂಡವಾಳದಲ್ಲಿ ಕೃಷಿ, ಶೂನ್ಯ ಬಂಡವಾಳದಲ್ಲಿ ಉದ್ಯಮ ಮುಂತಾದವು ಶುರು ಮಾಡುವುದರ ಬಗ್ಗೆ ನೀವೆಲ್ಲ ಕೇಳಿರುತ್ತೀರಿ. ಆದರೆ ಶೂನ್ಯ ಬಂಡವಾಳದಲ್ಲಿ ಸಿನಿಮಾ ಮಾಡುವುದನ್ನು ಎಂದಾದರೂ ಕೇಳಿದ್ದೀರಾ? ಚಿತ್ರರಂಗದಲ್ಲಿ ಇದನ್ನು ಕೇಳುವುದಿರಲಿ, ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಒಂದು ಸಿನಿಮಾ ಮಾಡಬೇಕು ಅಂದ್ರೆ ನಮ್ಮ ನಿರ್ಮಾಪಕರು, ನಿರ್ದೇಶಕರು, ನಟ-ನಟಿಯರು ಕೋಟಿ ಕೋಟಿ ಖರ್ಚಾಗುತ್ತದೆ ಎಂದು ಲೆಕ್ಕಾಚಾರ ಹಾಕುವಾಗಲೇ, ಇಲ್ಲೊಂದು ಹೊಸಬರ ತಂಡ ಶೂನ್ಯ ಬಂಡವಾಳದಲ್ಲಿ ಸದ್ದಿಲ್ಲದೆ ಒಂದು ಸಿನಿಮಾ ಮಾಡಿ ಮುಗಿಸಿದೆ.

ಅಷ್ಟೇ ಅಲ್ಲದೆ ಸದ್ಯ ಫ‌ಸ್ಟ್‌ ಕಾಪಿಯೊಂದಿಗೆ ಹೊರಬಂದಿರುವ ಈ ಚಿತ್ರ ಸೆನ್ಸಾರ್‌ ಮುಂದಿದ್ದು, ಶೀಘ್ರದಲ್ಲಿಯೇ ರಿಲೀಸ್‌ ಕೂಡ ಆಗಲಿದೆ ಅಂದ್ರೆ ನೀವು ನಂಬಲೇಬೇಕು. ಹೌದು, ಚಿತ್ರರಂಗದ ಮಟ್ಟಿಗೆ ಸೋಜಿಗ ಎನಿಸಿದರೂ, ಇಂಥದ್ದೊಂದು ಪ್ರಯತ್ನ ನಡೆದಿದೆ. ಸಮಾನ ಮನಸ್ಕ ಸಿನಿಮಾ ಪ್ರೇಮಿಗಳು ಸೇರಿ ಇಂಥದ್ದೊಂದು ಸಿನಿಮಾವನ್ನು ಸಾಧ್ಯವಾಗಿಸಿದ್ದಾರೆ. ಯಾರೂ ಈ ಚಿತ್ರಕ್ಕೆ ನೇರವಾಗಿ ಎಲ್ಲಿಯೂ ಹಣ ಹೂಡದೆಯೇ, ಶ್ರಮದಾನ ಮಾಡುವ ಮೂಲಕ ಚಿತ್ರವನ್ನು ನಿರ್ಮಿಸಿದ್ದಾರೆ. ಅಂದಹಾಗೆ, ಆ ಚಿತ್ರದ ಹೆಸರು “ಮದುವೆ ಊಟ’.

ಇನ್ನು ಚಿತ್ರದಲ್ಲಿ ಅಭಿನಯ, ಚಿತ್ರೀಕರಣ, ಪೋಸ್ಟ್‌ ಪ್ರೊಡಕ್ಷನ್‌ ಇವೆಲ್ಲಾವನ್ನು ಚಿತ್ರತಂಡದ ಸದಸ್ಯರು ಉಚಿತವಾಗಿ ಮಾಡಿದ್ದಾರಂತೆ. ಕೇವಲ ನಾಲ್ಕು ಜಾಗದಲ್ಲಿ ಶೂಟಿಂಗ್‌ ನಡೆಸಲಾಗಿದ್ದು, ಯಾವ ಕಮರ್ಶಿಯಲ್‌ ಸಿನಿಮಾಗಳಿಗೂ ಕಡಿಮೆ ಇಲ್ಲದಂತೆ ನಮ್ಮ ಚಿತ್ರ ಮೂಡಿಬಂದಿದೆ ಎನ್ನುತ್ತದೆ ಚಿತ್ರತಂಡ. “ವ್ಯಾಸರ ಜನಪ್ರಿಯ ನುಡಿ ಸಂಶಯಾತ್ಮ ವಿನಶ್ಯತಿ. ಅಂದರೆ ಸಂಶಯ ಹೊಂದಿರುವವರು ನಾಶ ಆಗ್ತಾರೆ. ಅವರು ಸುಖದಿಂದ ಇರೋದಿಲ್ಲ. ಬೇರೆಯವರನ್ನು ಸಂತೋಷದಿಂದ ಇರಲು ಬಿಡುವುದಿಲ್ಲ.

ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮನು ಅರ್ಜುನನಿಗೆ ಹೇಳಿದ ಮಾತಿನಂತೆ ಈ ಚಿತ್ರದ ಕಥನ ಇರಲಿದೆ. ಜೀವನವೆಲ್ಲಾ ಸಂಶಯಪಡುವ ನಾವು ಮದುವೆಯಾಗುವವರ ಯೋಚನೆ, ಆಲೋಚನೆ ಮತ್ತು ಹಿನ್ನಲೆ ಬೇರೆಯಾಗಿರುತ್ತದೆ. ಅವರ ಮೇಲೆ ಅನುಮಾನಪಟ್ಟರೆ ಬದುಕು ಎಲ್ಲಿಗೋ ತೆಗೆದುಕೊಂಡು ಹೋಗುತ್ತದೆ. ಪ್ರಸಕ್ತ ಸಮಾಜದಲ್ಲಿ ಶೇಕಡ 30 ರಷ್ಟು ಜನರು ಇದೇ ರೀತಿಯಲ್ಲಿ ಸಾಗುತ್ತಿದ್ದಾರೆ. ನಿಮಾನ್ಸ್‌ದಲ್ಲಿ ರೋಗಿಗಳು ಸಾಕಷ್ಟು ಮಂದಿ ಇದರಿಂದಲೇ ನರಳುತ್ತಿದ್ದಾರೆ. ಅಮೆರಿಕಾದಲ್ಲಿ ಒಂದಷ್ಟು ಮಂದಿ ಸೈಕಿಯಾಟ್ರಿಕ್‌ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ.

ಸಂಬಂಧಗಳಲ್ಲಿ ಭಾವನೆಗಳ ಅಭದ್ರತೆ ಇಲ್ಲದಿದ್ದರೆ ಏನಾಗುತ್ತೆ ಎಂಬುದು ಕತೆಯ ತಿರುಳು’ ಎಂದು ಚಿತ್ರದ ಬಗ್ಗೆ ವಿವರಣೆ ಕೊಡುತ್ತದೆ ಚಿತ್ರತಂಡ. ಮಹೇಶ್‌ ಲೋನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವುದರ ಜೊತೆಗೆ ಚಿತ್ರದಲ್ಲಿ ಒಂದು ಪಾತ್ರಕ್ಕೆ ಬಣ್ಣವನ್ನೂ ಹಚ್ಚಿದ್ದಾರೆ. ಉಳಿದಂತೆ ಜೈ, ಸಾವನ್‌, ಆಕಾಶ್‌, ಧರ್ಮೇಂದ್ರ ಅರಸ್‌, ಗಾಯಿತ್ರಿ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರವಿತೇಜ, ವಿಕಾಸ್‌ ವಸಿಷ್ಟ ಮತ್ತು ಶ್ರೀಕಾಂತ್‌ ಅತ್ರಯ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು, ಮಧುಸೂಧನ್‌ ಹಿನ್ನಲೆ ಸಂಗೀತ ನೀಡಿದ್ದಾರೆ.

ಇನ್ನೊಂದು ವಿಶೇಷವೆಂದರೆ, ತಂಡವು ಇದೆಲ್ಲಾವನ್ನು ನಿಭಾಯಿಸಿರುವುದರ ಜೊತೆಗೆ ಹಳ್ಳಿಗಳನ್ನು ರಕ್ಷಿಸೋಣ ಎನ್ನುವ ಪರಿಕಲ್ಪನೆಯೊಂದಿಗೆ ಮೂಲಭೂತ ಸೌಕರ್ಯ ಇಲ್ಲದ ಹಳ್ಳಿಯನ್ನು ಅಭಿವೃದ್ದಿಗೊಳಿಸಲು ಯೋಜನೆ ರೂಪಿಸಿಕೊಂಡಿದೆ. ಮೊದಲ ಹಂತವಾಗಿ ಯಾದಗಿರಿ ಜಿಲ್ಲೆಯ ಗಂಗನಾಳ ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದು, ಇದಕ್ಕಾಗಿ ಚಿತ್ರದ ಪ್ರಿ-ಟಿಕೆಟ್‌ನ್ನು ಖರೀದಿಸುವವರ ಹೆಸರನ್ನು ಚಿತ್ರದ ಟೈಟಲ್‌ ಕಾರ್ಡ್‌ನಲ್ಲಿ ಹಾಕಲು ಪ್ಲಾನ್‌ ಮಾಡಿಕೊಂಡಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.