ಲಾಕ್‌ಡೌನ್‌ನಲ್ಲಿ ಸಿನ್ಮಾ ಮಂದಿ ಏನಾಡ್ತಾ ಇದ್ದಾರೆ?


Team Udayavani, Mar 28, 2020, 10:42 AM IST

ಲಾಕ್‌ಡೌನ್‌ನಲ್ಲಿ ಸಿನ್ಮಾ ಮಂದಿ ಏನಾಡ್ತಾ ಇದ್ದಾರೆ?

ಸದ್ಯಕ್ಕೆ “ಕೆಜಿಎಫ್ 2 ‘ ಚಿತ್ರೀಕರಣದಲ್ಲಿದ್ದ ನಟ ಯಶ್‌, ಕೋವಿಡ್ 19 ಎಫೆಕ್ಟ್ ನಿಂದಾಗಿ ಇದೀಗ ಮನೆಯಲ್ಲೇ ಇದ್ದಾರೆ. ಪತ್ನಿ ರಾಧಿಕಾ ಪಂಡಿತ್‌ ಹಾಗು ಪುತ್ರಿ, ಪುತ್ರನೊಂದಿಗಿದ್ದಾರೆ. ಈ ನಡುವೆ ಅವರು, ಒಂದಷ್ಟು ಸಿನಿಮಾಗಳನ್ನು ವೀಕ್ಷಿಸುತ್ತಿರುವುದಷ್ಟೇ ಅಲ್ಲ, ಮಗಳ ಜೊತೆ ಆಟ ಆಡಿ ಕಾಲ ಕಳೆಯುತ್ತಿದ್ದಾರೆ. ಮಗಳೊಂದಿಗೆ ಊಟ ಮಾಡಿಸುವ ಹಾಗು ಮಗಳೇ ಅವರಿಗೆ ಸ್ಪೂನ್‌ನಲ್ಲಿ ತಿನಿಸುವ ವಿಡಿಯೊವೊಂದು ವೈರಲ್‌ ಆಗಿದೆ. ಈ ನಿಟ್ಟಿನಲ್ಲಿ ಅವರು ಮಾತನಾಡಿದ್ದು, “ನಾನು ಎಲ್ಲಿಗೂ ಹೋಗಿಲ್ಲ. ಮನೆಯಲ್ಲೇ ಮಕ್ಕಳೊಂದಿಗೆ ಆಟವಾಡುತ್ತಿದ್ದೇನೆ. ಮಗಳ ಜೊತೆ ಮಾತಾಡುವುದೇ ಖುಷಿ. ಎಲ್ಲರೂ ಈ ಕೋವಿಡ್ 19 ವಿರುದ್ಧ ಹೋರಾಡಲು ಮನೆಯಲ್ಲೇ ಇರಿ’ –ಯಶ್‌, ನಟ

ಇನ್ನಾದರೂ ನಾವು ಯಾವುದರ ಹಿಂದೆ ಓಡುತ್ತಿದ್ದೆವು ಅನ್ನೋ ವಾಸ್ತವವನ್ನ ಅರ್ಥ ಮಾಡಿಕೊಳ್ಳಬೇಕು. ಸದ್ಯಕ್ಕಂತೂ ಸಿನಿಮಾ, ಶೂಟಿಂಗ್‌ ಹೀಗೆ ಎಲ್ಲ ಚಟುವಟಿಕೆಗಳೂ ಸ್ಥಗಿತಗೊಂಡಿರುವುದರಿಂದ ಮನೆಯಲ್ಲೇ ಇರುವಂತಾಗಿದೆ. ಒಂದಷ್ಟು ಓದು, ಸಂಗೀತ, ಮುಂದೆ ಮಾಡಬೇಕಾಗಿರುವ ಸಿನಿಮಾಗಳ ಬಗ್ಗೆ ಪ್ಲಾನ್‌ ಮಾಡಿಕೊಳ್ಳುತ್ತಿದ್ದೇನೆ . ವಸಿಷ್ಠ ಸಿಂಹ, ನಟ

“ರೆಮೊ’ ಸಿನಿ ಮಾದ ಒಂದಷ್ಟು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನ ಮಾಡುತ್ತಿದ್ದೇನೆ. ಸಾಕಷ್ಟು ಸಮಯ ಸಿಕ್ಕಿರುವುದರಿಂದಮುಂದೆ ಸಿನಿಮಾ ಮಾಡಬಹುದಾದ ಸಬೆjಕ್ಟ್ಗಳನ್ನು ಹುಡುಕಲು ಸಾಕಷ್ಟು ಸಮಯ ಸಿಕ್ಕಂತಾಗಿದೆ. ಪವನ್‌ ಒಡೆಯರ್‌, ನಿರ್ದೇಶಕ

ಶೂಟಿಂಗ್‌, ಸಿನಿಮಾ ಹೀಗೆ ಎಲ್ಲಾ ಚಟುವಟಿಕೆಗಳಿಂದಲೂ ಬ್ರೇಕ್‌ ಸಿಕ್ಕಂತಾಗಿದೆ. ಮನೆಯಲ್ಲೇ ಇದ್ದರೂ ಒಂದಷ್ಟು ಸಿನಿಮಾಗೆ ಸಂಬಂಧಿಸಿದ ಕೆಲಸಗಳನ್ನು ಮಾಡುತ್ತಿದ್ದೇನೆ. ಒಂದಷ್ಟು ಒಳ್ಳೆಯ ಕಥೆಗಳನ್ನ, ಸ್ಕ್ರಿಪ್ಟ್ಗಳನ್ನ ಓದುತ್ತಿದ್ದೇನೆ. ಜೊತೆಗೆ ನಾನೇ ಒಂದಷ್ಟು ಕಥೆಗಳನ್ನು ಬರೆಯುತ್ತಿದ್ದೇನೆ. ತುಂಬ ಸಮಯದ ನಂತರ ಫ್ಯಾಮಿಲಿ ಜೊತೆಗೆ ಹೆಚ್ಚು ಕಾಲ ಕಳೆಯುವಂತಾಗಿದೆ. ಒಂಥರಾ ಎಲ್ಲವೂ ಪ್ರಶಾಂತವಾಗಿರುವಂತಿದೆ.- ಹರಿಪ್ರಿಯಾ, ನಟಿ

ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ. ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದೇನೆ. ಒಂದಷ್ಟು ಸಿನಿಮಾಗಳನ್ನು ವೀಕ್ಷಿಸುತ್ತಿದ್ದೇನೆ. ಅದು ಬಿಟ್ಟರೆ, ಮನೆಯ ಒಳಗಡೆಯೇ ಪತ್ನಿ ಜೊತೆ ಟೇಬಲ್‌ ಟೆನ್ನಿಸ್‌ ಆಟ ಆಡುತ್ತ ಸಮಯ ಕಳೆಯುತ್ತಿದ್ದೇನೆ. ಮಿಕ್ಕಂತೆ, ಮಗ, ಮಗಳೊಂದಿಗೆ ಒಂದಷ್ಟು ಹರಟುತ್ತಿದ್ದೇನೆ. ಗಣೇಶ್‌, ನಟ

ನನಗೆ ಮನೆಯಲ್ಲೇ ಇರುವುದರಿಂದ ಖುಷಿ ಇದೆ. ಕಾರಣ, ಮನೆಯವರ ಜೊತೆ ಸಮಯ ಕಳೆಯೋಕೆ ಅವಕಾಶ ಸಿಕ್ಕಿದೆ. ಮಿಕ್ಕಂತೆ ಒಂದಷ್ಟು ಸಿನಿಮಾ ನೋಡೋದು, ಮಕ್ಕಳ ಜೊತೆ ಆಟ ಆಡೋದನ್ನು ಮಾಡುತ್ತಿದ್ದೇನೆ. ಪೋಷಕರ ಜೊತೆಯಲ್ಲೂ ಇರುವ ಅವಕಾಶ ಸಿಕ್ಕಿದೆ. ಶ್ರೀಮುರಳಿ,ನಟ

ಕೋವಿಡ್ 19  ಸಮಸ್ಯೆಯಿಂದಾಗಿ ನಾವು ಎಲ್ಲೂ ಹೋಗಿಲ್ಲ. ಮನೆಯಲ್ಲೇ ಕಾಲ ಕಳೆಯುತ್ತಿದ್ದೇವೆ. ಒಂದಷ್ಟು ಮಾತು, ಒಂದೆರೆಡು ಆಟಗಳನ್ನಾಡುತ್ತಲೇ ಕೋವಿಡ್ 19 ವಿರುದ್ಧ ಹೋರಾಡುತ್ತಿದ್ದೇವೆ. ಸದ್ಯಕ್ಕೆ ನೋಡದ ಸಿನಿಮಾಗಳನ್ನು ನೋಡುತ್ತಿದ್ದೇವೆ. ಚಿರಂಜೀವಿ ಸರ್ಜಾ, ಧ್ರುವ ಸರ್ಜಾ

ಯಾವಾಗಲೂ ಸಿನಿಮಾ ಮತ್ತಿತರ ಚಟುವಟಿಕೆಗಳಿಂದ ಬ್ಯುಸಿಯಾಗಿರುತ್ತಿದ್ದರಿಂದ, ಫ್ಯಾಮಿಲಿ ಜೊತೆಗೆ ಹೆಚ್ಚು ಸಮಯ ಕಳೆಯಲಾಗುತ್ತಿರಲಿಲ್ಲ. ಈಗ ಕೋವಿಡ್ 19 ಕಾರಣದಿಂದಾಗಿ, ಬಹಳ ವರ್ಷಗಳ ನಂತರ ಫ್ಯಾಮಿಲಿ ಜೊತೆಗೆ ಇರಲು ಸಾಕಷ್ಟು ಸಮಯ ಸಿಕ್ಕಂತಾಗಿದೆ. ಸದ್ಯ “ಶಿವಾಜಿ ಸುರತ್ಕಲ್‌-2 ‘ ಸಿನಿಮಾದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಬಾಕಿ ಇದ್ದ ಎಲ್ಲಾ ಕೆಲಸಗಳನ್ನು ಮಾಡಲು ತುಂಬ ಟೈಮ್‌ ಸಿಕ್ಕಂತಾಗಿದೆ. ಎಲ್ಲ ಕೆಲಸಗಳು ಮನೆಯಲ್ಲೇ ನಡೆಯುತ್ತಿರುವುದರಿಂದ ಒಂದರ್ಥದಲ್ಲಿ ಒಳ್ಳೆಯದೇ ಆಗಿದೆ.– ರಮೇಶ್‌ ಅರವಿಂದ್‌, ನಟ, ನಿರ್ದೇಶಕ

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.