ಸಿನಿಮಾ ಸಂಚಾರ!


Team Udayavani, Jul 23, 2017, 10:23 AM IST

sanchari-vijay.jpg

ಕನ್ನಡದ ಕೆಲ ಸ್ಟಾರ್‌ನಟರ ಕೈಯಲ್ಲಿ ಸಾಮಾನ್ಯವಾಗಿ ಮೂರು, ಅಥವಾ ನಾಲ್ಕು ಚಿತ್ರಗಳು ಇದ್ದೇ ಇರುತ್ತವೆ. ಇದು ಹೊಸ ಸುದ್ದಿಯೇನಲ್ಲ. ಆದರೆ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್‌ ಕೈಯಲ್ಲಿ ಎಷ್ಟು ಚಿತ್ರಗಳಿವೆ ಬರೋಬ್ಬರಿ ಒಂಭತ್ತು ಚಿತ್ರಗಳಿವೆ ಅಂದರೆ ನಂಬಲೇಬೇಕು. ಹೌದು, ಇದು ಅಚ್ಚರಿಯಾದರೂ ನಿಜ. ಪ್ರಶಸ್ತಿ ಬಂದಿದ್ದೇ ತಡ, ಸಂಚಾರಿ ವಿಜಯ್‌ ಅವರ ಸಿನಿಮಾ ಸಂಚಾರ ಬಲು ಜೋರಾಗಿಯೇ ಸಾಗಿದೆ. ಅವರೀಗ ಸಿಕ್ಕಾಪಟ್ಟೆ ಬಿಜಿಯೂ ಹೌದು.

ಅವರೀಗ ಒಪ್ಪಿಕೊಂಡಿರುವ ಒಂಭತ್ತು ಚಿತ್ರಗಳ ಪೈಕಿ ನಾಲ್ಕು ಚಿತ್ರಗಳು ಈ ವರ್ಷವೇ ಬಿಡುಗಡೆಯಾಗುತ್ತವೆ ಅನ್ನೋದು ವಿಶೇಷ. ಅವರೀಗ “ನನ್‌ ಮಗಳೇ ಹೀರೋಯಿನ್‌’, “ಕೃಷ್ಣ-ತುಳಸಿ’,”ಪಾದರಸ’, “ವರ್ತಮಾನ’, “ಪಿರಂಗಿಪುರ’, “ಮೇಲೊಬ್ಬ ಮಾಯಾವಿ’, “ವರ್ತಮಾನ’, “ತಲೆದಂಡ’ ಹಾಗೂ “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಗಳ ಪೈಕಿ “ನನ್‌ ಮಗಳೇ ಹೀರೋಯಿನ್‌’ ಆಗಸ್ಟ್‌ ಮೊದಲ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಇನ್ನುಳಿದಂತೆ “ಕೃಷ್ಣ-ತುಳಸಿ’, “ವರ್ತಮಾನ’, “ಪಾದರಸ’ ಚಿತ್ರಗಳು ಈ ವರ್ಷವೇ ಬಿಡುಗಡೆಯಾಗಲಿವೆ. ಇನ್ನು, ವಿಜಯ್‌ ಹೊಸದಾಗಿ ಒಪ್ಪಿಕೊಂಡಿರುವ ಸಿನಿಮಾಗಳೆಂದರೆ “ಆಟಕ್ಕುಂಟು ಲೆಕ್ಕಕ್ಕಿಲ್ಲ’, “ತಲೆದಂಡ’ ಮತ್ತು “ಆರನೇ ಮೈಲಿ’. ಇದರ ಜತೆಗೆ ಹಿರಿಯ ನಿರ್ದೇಶಕ ಭಗವಾನ್‌ ಅವರು ನಿರ್ದೇಶಿಸಲಿರುವ ಸಿನಿಮಾವನ್ನೂ ಒಪ್ಪಿಕೊಂಡಿದ್ದಾರೆ. “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಚಿತ್ರಕ್ಕೆ ಮಯೂರಿ ನಾಯಕಿ, ರಾಮಚಂದ್ರ ಎಂಬುವವರು ನಿರ್ದೇಶಕರು ಇದನ್ನು ಹೊರತುಪಡಿಸಿದರೆ, ಇನ್ನುಳಿದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಇನ್ನು, ಈಗಾಗಲೇ ಪೋಸ್ಟರ್‌ ಮೂಲಕವೇ ಕನ್ನಡದಲ್ಲಿ ಹೊಸ ಸಂಚಲನ ಮೂಡಿಸಿದ “ಪಿರಂಗಿಪುರ’ ಚಿತ್ರಕ್ಕೆ ತಯಾರಿ ನಡೆಯುತ್ತಿದೆ. ಇಷ್ಟರಲ್ಲೇ ಚಿತ್ರೀಕರಣಕ್ಕೆ ತಂಡ ಹೊರಡಲಿದೆ. ಅದೇನೆ ಇರಲಿ, ಒಮ್ಮೆಲೆ ಇಷ್ಟೊಂದು ಚಿತ್ರಗಳನ್ನು ಸಂಚಾರಿ ವಿಜಯ್‌ ಹೇಗೆ ಮ್ಯಾನೇಜ್‌ ಮಾಡ್ತಾರೆ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತೆ. ಒಂದೇ ಹಂತದಲ್ಲಿ ಎರಡು, ಅಥವಾ ಮೂರು ತಿಂಗಳೊಳಗೆ ಒಂದೊಂದು ಸಿನಿಮಾ ಮುಗಿಸಿ, ಅದರ ಡಬ್ಬಿಂಗ್‌ ಕೆಲಸ ಮುಗಿಸಿಕೊಂಡು ಬೇರೊಂದು ಚಿತ್ರದ ಚಿತ್ರೀಕರಣಕ್ಕೆ ಅಣಿಯಾಗುತ್ತಾರೆ.

ಅವರಿಗೆ ಹೊಸಬರೇ ಕಥೆ ಹಿಡಿದು ಬರುತ್ತಿರುವುದು ಹೊಸ ಬೆಳವಣಿಗೆಯಾದರೆ, ಪ್ರಯೋಗಾತ್ಮಕ ಚಿತ್ರಗಳೇ ಹೆಚ್ಚು ಬರುತ್ತಿರುವುದು ಇನ್ನೊಂದು ವಿಶೇಷ. ಇದು ಕನ್ನಡ ಚಿತ್ರಗಳ ಸುದ್ದಿಯಾದರೆ, ತಮಿಳು ಹಾಗೂ ಮಲಯಾಳಂ ಚಿತ್ರರಂಗದಿಂದಲೂ ವಿಜಯ್‌ಗೆ ಸಾಕಷ್ಟು ಅವಕಾಶಗಳು ಬಂದಿದ್ದುಂಟು. ಆದರೆ, ವಿಜಯ್‌ ಅತ್ತ ವಾಲಲಿಲ್ಲ.

“ಇಲ್ಲೇ ಬಿಜಿಯಾಗಿರುವಾಗ, ಅತ್ತ ಯಾಕೆ ಹೋಗುವುದಾದರೂ ಯಾಕೆ ಎನ್ನುವ ವಿಜಯ್‌, ನನಗೆ ಯಾವ ಭಾಷೆ ಎಂಬುದು ಮುಖ್ಯವಲ್ಲ. ನಾನು ಎಲ್ಲೇ ಹೋದರೂ, ಏನಾದರೊಂದು ಹೊಸತನ್ನು ಕೊಡಬೇಕು ಎಂಬ ಆಸೆ. ಅದು ನಮ್ಮಲ್ಲೇ ಸಿಗುವಾಗ, ಬೇರೆ ಕಡೆ ಹೋಗುವ ಯೋಚನೆಯೇ ಇಲ್ಲ. ನನಗೆ ನಮ್ಮ ನೆಲ, ನಮ್ಮ ಜಾಗ ಇಷ್ಟ. ಇಲ್ಲೇ ಸೇಫ್ ಆಗಿದ್ದೇನೆ. ಈಗಂತೂ ಖುಷಿಯಾಗಿದ್ದೇನೆ’ ಎಂದಷ್ಟೇ ಹೇಳುತ್ತಾರೆ ವಿಜಯ್‌.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.