ಫೆಬ್ರವರಿ ಸಿನಿಹಬ್ಬ; ರಿಲೀಸ್‌ ಅಖಾಡದಲ್ಲಿ 20ಕ್ಕೂ ಹೆಚ್ಚು ಚಿತ್ರಗಳು


Team Udayavani, Jan 27, 2023, 11:08 AM IST

ಫೆಬ್ರವರಿ ಸಿನಿಹಬ್ಬ; ರಿಲೀಸ್‌ ಅಖಾಡದಲ್ಲಿ 20ಕ್ಕೂ ಹೆಚ್ಚು ಚಿತ್ರಗಳು

ಒಂದು ಕಡೆ ಪರಭಾಷಾ ಸ್ಟಾರ್‌ ಸಿನಿಮಾಗಳ ಅಬ್ಬರ, ಮತ್ತೂಂದು ಕಡೆ ಕನ್ನಡದ ಸ್ಟಾರ್‌ ನಟನ ಸಿನಿಮಾ… ಈ ಕಾರಣದಿಂದಾಗಿಯೇ ಜನವರಿಯಲ್ಲಿ ಹೊಸಬರು ಸಿನಿಮಾ ಬಿಡುಗಡೆ ಮಾಡಲು ಕೊಂಚ ಹಿಂದೇಟು ಹಾಕಿದ್ದರು. ಹೀಗಾಗಿ, ವರ್ಷದ ಮೊದಲ ತಿಂಗಳು ಜನವರಿ ದೊಡ್ಡ ಮಟ್ಟದಲ್ಲಿ ರಂಗೇರಿರಲಿಲ್ಲ. ಆದರೆ, ಫೆಬ್ರವರಿಯಲ್ಲಿ ಮಾತ್ರ ಸಿನಿಜಾತ್ರೆ ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಅಷ್ಟೊಂದು ಸಿನಿಮಾಗಳು ಬಿಡುಗಡೆಗೆ ರೆಡಿ ಇವೆ. ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಚಿತ್ರಗಳು ಫೆಬ್ರವರಿಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲು ಅಣಿಯಾಗಿವೆ. ಇದರಲ್ಲಿ ಬಹುತೇಕ ಹೊಸಬರ ಚಿತ್ರಗಳೇ ಇವೆ ಎಂಬುದು ಮತ್ತೂಂದು ಅಂಶ. ಕನ್ನಡ ಚಿತ್ರರಂಗವನ್ನು ವರ್ಷಪೂರ್ತಿ ಚಟುವಟಿಕೆಯಲ್ಲಿಡುವವರು ಹೊಸಬರು. ಅದು ಈ ವರ್ಷವೂ ಮುಂದುವರೆಯುವ ಲಕ್ಷಣಗಳು ಕಾಣುತ್ತಿವೆ. ಸಾಲು ಸಾಲು ಹೊಸಬರ ಚಿತ್ರಗಳು ಪ್ರತಿ ತಿಂಗಳು ಬಿಡುಗಡೆಯಾಗಲಿವೆ.

ಸರತಿಯಲ್ಲಿ ಭಿನ್ನ-ವಿಭಿನ್ನ

ಮೊದಲೇ ಹೇಳಿದಂತೆ ಫೆಬ್ರವರಿಯಲ್ಲಿ 20ಕ್ಕೂ ಹೆಚ್ಚು ಚಿತ್ರಗಳು ತೆರೆಕಾಣುತ್ತಿ ರುವುದರಿಂದ ವೈರೈಟಿ ಸಿನಿಮಾಗಳ ದರ್ಶನ ಕೂಡಾ ಪ್ರೇಕ್ಷಕರಿಗೆ ಸಿಗಲಿದೆ. ಲವ್‌, ಕಾಮಿಡಿ, ಸಸ್ಪೆನ್ಸ್‌-ಥ್ರಿಲ್ಲರ್‌, ಹಾರರ್‌, ಸೆಂಟಿಮೆಂಟ್‌.. ಹೀಗೆ ಬೇರೆ ಬೇರೆ ಜಾನರ್‌ನ ಸಿನಿಮಾಗಳು ರಂಜಿಸಲಿವೆ. ಎಲ್ಲಾ ಓಕೆ, ಇಷ್ಟೊಂದು ಸಿನಿಮಾಗಳು ರಿಲೀಸ್‌ ಅಖಾಡಕ್ಕೆ ಬಂದರೆ ಥಿಯೇಟರ್‌ ಸಮಸ್ಯೆ ಎದುರಾಗಲ್ವೇ? ಎಂಬ ಪ್ರಶ್ನೆ ಸಹಜ. ಆದರೆ, ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಬಹುತೇಕ ಹೊಸಬರು ಈಗ ಸಿಂಗಲ್‌ ಸ್ಕ್ರೀನ್‌ಗಿಂತ ಮಲ್ಟಿಪ್ಲೆಕ್ಸ್‌ ಕಡೆಗೆ ಒಲವು ತೋರುತ್ತಿದ್ದಾರೆ. ಅದಕ್ಕೆ ಕಾರಣ ಸಿಂಗಲ್‌ ಸ್ಕ್ರೀನ್‌ ಬಾಡಿಗೆ. ಬಹುತೇಕ ಹೊಸಬರು ಬಾಡಿಗೆ ಕಟ್ಟಿ ಸಿನಿಮಾ ರಿಲೀಸ್‌ ಮಾಡುವ ಸ್ಥಿತಿಯಲ್ಲಿ ಇರಲ್ಲ. ಅಂತಹವರು ಮಲ್ಟಿಪ್ಲೆಕ್ಸ್‌ ನತ್ತ ಆಸಕ್ತಿ ತೋರಿಸುತ್ತಿದ್ದಾರೆ. ಈ ಕಾರಣದಿಂದ ಹೊಸಬರ ಸಿನಿಮಾಗಳು ಬಿಡುಗಡೆಯಾದಾಗ ದೊಡ್ಡ ಮಟ್ಟದ ಚಿತ್ರಮಂದಿರ ಸಮಸ್ಯೆ ಎದುರಾಗುವುದಿಲ್ಲ.

ಮಾರ್ಚ್‌ವರೆಗೂ ಜಾತ್ರೆ

ಹೊಸಬರ ಸಿನಿಜಾತ್ರೆ ಮಾರ್ಚ್‌ ಎರಡನೇ ವಾರದವರೆಗೂ ಜೋರಾಗಿಯೇ ನಡೆಯಲಿದೆ. ಅಲ್ಲಿವರೆಗೆ ಯಾವುದೇ ದೊಡ್ಡ ಸ್ಟಾರ್‌ ಸಿನಿಮಾಗಳು ಇಲ್ಲದಿರುವುದರಿಂದ ಅದೃಷ್ಟ ಪರೀಕ್ಷೆ ಸರಾಗವಾಗಿ ನಡೆಯಲಿದೆ. ಆದರೆ, ಮಾರ್ಚ್‌ ಮೂರನೇ ವಾರದ ವೇಳೆಗೆ ಮತ್ತೆ ಸಿನಿಬಿಡುಗಡೆಯಲ್ಲಿ ಕೊಂಡ ಇಳಿಕೆಯಾಗಲಿದೆ. ಅದಕ್ಕೆ ಮತ್ತದೇ ಕಾರಣ, “ಸ್ಟಾರ್‌ ಸಿನಿಮಾ’. ಹೌದು, ಮಾರ್ಚ್‌ 17ಕ್ಕೆ ಬಹುನಿರೀಕ್ಷಿತ ಉಪೇಂದ್ರ ನಟನೆಯ “ಕಬ್ಜ’ ಚಿತ್ರ ತೆರೆಕಾಣಲಿದೆ. ಸಹಜವಾಗಿಯೇ ಸ್ಟಾರ್‌ ಸಿನಿಮಾಗಳು ತೆರೆಗೆ ಬರುವಾಗ ಹೊಸಬರು ಸ್ವಲ್ಪ ದೂರವೇ ನಿಲ್ಲುತ್ತಾರೆ. ಹಾಗಾಗಿ, ಸಿನಿಮಾ ಬಿಡುಗಡೆಯೂ ಇಳಿಕೆ ಕಾಣಲಿದೆ.

ಫೆಬ್ರವರಿಯಲ್ಲಿ ರಿಲೀಸ್‌ ಪ್ಲ್ರಾನ್‌ ಮಾಡಿರುವ ಸಿನಿಮಾಗಳು

ಲವ್‌ ಬರ್ಡ್ಸ್, ಹೊಂದಿಸಿ ಬರೆಯಿರಿ, ಸೌತ್‌ ಇಂಡಿಯನ್‌ ಹೀರೋ, 5ಡಿ, ಸಕೂಚಿ, 13, ಓ ಮನಸೇ, ಆಧುನಿಕ ಶ್ರವಣ ಕುಮಾರ ತನುಜಾ, ಖಯೊಸ್‌,  ಜೂಲಿಯೆಟ್‌, ಪ್ರಜಾರಾಜ್ಯ, ನಟ ಭಯಂಕರ, ನಟ್ವರ್‌ಲಾಲ್‌, ರೂಪಾಯಿ, ಕೆಂಡದ ಸೆರಗು, ಒಂದಾನೊಂದು ಕಾಲದಲ್ಲಿ, ಮಾಂಕ್‌ದಿ ಯಂಗ್‌, ಲಾಂಗ್‌ ಡ್ರೈವ್‌, ಮೊದಲ ಮಳೆ,  ಕ್ಯಾಂಪಸ್‌ ಕ್ರಾಂತಿ, ಒಂದೊಳ್ಳೆಯ ಲವ್‌ ಸ್ಟೋರಿ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.