Short Film: ಹೊಸಬರ ಕಲರ್ ಕನಸಿಗೆ ಹಂಸಲೇಖ ಸಾಥ್


Team Udayavani, Dec 7, 2023, 7:08 PM IST

ಹೊಸಬರ ಕಲರ್ ಕನಸಿಗೆ ಹಂಸಲೇಖ ಸಾಥ್

ಯುವ ಪ್ರತಿಭೆ ಯಶ್ಚಿತ್‌ ಗೌಡ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ “ಕಲರ್‌ ಹನುಮ’ ಕಿರುಚಿತ್ರ ಇತ್ತೀಚೆಗೆ ಬಿಡುಗಡೆಯಾಯಿತು. ಜಗದೀಶ ಎಂ. ದೇವನಹಳ್ಳಿ ಬಂಡವಾಳ ಹೂಡಿ ನಿರ್ಮಿಸಿರುವ “ಕಲರ್‌ ಹನುಮ’ ಕಿರುಚಿತ್ರದಲ್ಲಿ ನವೀನ್‌ ಎಸ್‌. ಆರ್‌, ದೀಪಶ್ರೀ ಗೌಡ, ಚೇತನ್‌ ತ್ರಿವೇಣ್‌, ಕುಶಾಲ್‌ ನಾರಾಯಣ ಗೌಡ, ಮಹರ್ಷಿ, ಲಲಿತಾ, ತೇಜಸ್ವಿನಿ ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ “ಕಲರ್‌ ಹನುಮ’ ಕಿರುಚಿತ್ರವನ್ನು ಬಿಡುಗಡೆಗೊಳಿಸಿ ಹೊಸಬರ ಪ್ರಯತ್ನವನ್ನು ಪ್ರಶಂಸಿಸಿದರು.

ಇದೇ ವೇಳೆ ಮಾತನಾಡಿದ ಹಂಸಲೇಖ, “ಇಂದು ಬಣ್ಣದ ಲೋಕದಲ್ಲಿದ್ದರೂ ಮನುಷ್ಯ ಚಿತ್ರಮಂದಿರ ಒಳ ಹೊಕ್ಕರೆ ಕತ್ತಲು, ಗಾಳಿ, ರಕ್ತ ಕಾಣಿಸಿಕೊಂಡು, ಆತನು ತನಗೆ ಗೊತ್ತಿಲ್ಲದಂತೆ ಕತ್ತಲೆ ಕಡೆ ಹೋಗುತ್ತಿದ್ದಾನೆ. “ತಾರೆ ಜಮೀನ್‌ ಪರ್‌’ ಸಿನಿಮಾದಲ್ಲಿ ಅಮೀರ್‌ ಖಾನ್‌ ಒಂದು ಸಮಸ್ಯೆ ಇಟ್ಟುಕೊಂಡು ದೊಡ್ಡ ಸಿನಿಮಾ ಮಾಡಿದ್ದರು. ಅದರಂತೆ ಬಹುತೇಕ ಹೊಸಬರೇ ಸೇರಿಕೊಂಡು ಅಂಥದ್ದೇ ಒಂದು ವಿಷಯವನ್ನು ಇಟ್ಟುಕೊಂಡು “ಕಲರ್‌ ಹನುಮ’ ಕಿರುಚಿತ್ರ ಮಾಡಿದ್ದಾರೆ. ಇದರ ಕಥೆಯ ಆಯ್ಕೆ ಬಹಳ ಚೆನ್ನಾಗಿದೆ. ಈಗಿನ ವಾತಾವರಣದಲ್ಲಿ ಹೊಸಬಗೆಯಲ್ಲಿ ವಿಷಯವನ್ನು ಹೇಳಲು ದಾರಿ ಹುಡುಕಿಕೊಂಡಿರುವುದಕ್ಕೆ ಎಲ್ಲರನ್ನೂ ಅಭಿನಂದಿಸಬೇಕಾಗಿದೆ’ ಎಂದರು.

“ಕಲರ್‌ ಹನುಮ’ ಕಿರುಚಿತ್ರಕ್ಕೆ ರವಿರಾಜ್‌ ಸಂಗೀತ ಸಂಯೋಜಿಸಿದ್ದು, ಬೆನಕರಾಜು ಛಾಯಾಗ್ರಹಣ ಮತ್ತು ಸುರೇಶ್‌ ಅರಸ್‌ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ಸುತ್ತಮುತ್ತ “ಕಲರ್‌ ಹನುಮ’ ಕಿರುಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಸೋಶಿಯಲ್‌ ಮೀಡಿ ಯಾದಲ್ಲಿ “ಕಲರ್‌ ಹನುಮ’ ಕಿರುಚಿತ್ರಕ್ಕೆ ನೋಡು ಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.