ಕನ್ನಡ ಚಿತ್ರಗಳಿಗೆ ಸಖತ್‌ ಸ್ಪರ್ಧೆ; ಪರೀಕ್ಷೆ, ಚುನಾವಣೆ ಬಿಸಿ


Team Udayavani, Jan 15, 2018, 4:50 PM IST

Tagaru-(1).jpg

ಮುಂದಿನ ಮೂರು ತಿಂಗಳುಗಳಲ್ಲಿ ಚಿತ್ರ ಬಿಡುಗಡೆ ಮಾಡಬಾರದು, ಮಾಡಿದರೆ ಜನ ಬರುವುದಿಲ್ಲ ಮತ್ತು ಇದರಿಂದ ಸಾಕಷ್ಟು ನಷ್ಟವಾಗುತ್ತದೆ ಎನ್ನುವುದೆಲ್ಲಾ ಸುಳ್ಳು. ಆದರೆ, ಈ ಮೂರೂ ತಿಂಗಳು ಕನ್ನಡ ಚಿತ್ರರಂಗಕ್ಕೆ ದೊಡ್ಡ ಸವಾಲೆನ್ನುವುದು ಹೌದು. ಪರೀಕ್ಷೆಗಳಿರಲಿ, ಚುನಾವಣೆಯಾಗಲಿ ಅಥವಾ ಕ್ರಿಕೆಟ್‌ ಬರಲಿ … ಅದರಿಂದ ಜನ ಚಿತ್ರ ನೋಡುವುದೇ ಇಲ್ಲ ಅಥವಾ ಚಿತ್ರಮಂದಿರಗಳಿಂದ ದೂರಾಗಿಬಿಡುತ್ತಾರೆ ಎನ್ನುವುದು ತಪ್ಪಾಗುತ್ತದೆ. ಆದರೆ, ಇದೆಲ್ಲದರಿಂದ ಚಿತ್ರಗಳ ಪ್ರರ್ದಶನಕ್ಕೆ ಸ್ವಲ್ಪ ಮಟ್ಟಿಗೆ ಏಟು ಬೀಳುವುದು ಖಂಡಿತ.

ಕನ್ನಡದಲ್ಲಿ ಸಾಲುಸಾಲು ಚಿತ್ರಗಳು ಬಿಡುಗಡೆಗೆ ನಿಂತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ 15 ದಿನಗಳಲ್ಲಿ ಬಿಡುಗಡೆಯಾಗಿರುವುದು ಕೇವಲ ಆರು ಚಿತ್ರಗಳಾದರೂ, ಮುಂದಿನ ದಿನಗಳಲ್ಲಿ ಸಾಕಷ್ಟು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಕ್ಯೂನಲ್ಲಿ ನಿಂತಿವೆ. ಅದರಲ್ಲೂ ಮಾರ್ಚ್‌ ಒಳಗೆ ಚಿತ್ರಗಳನ್ನು ಬಿಡುಗಡೆ ಮಾಡಿಬಿಡಬೇಕೆಂದು ಹಲವು ನಿರ್ಮಾಪಕರು ತುದಿಗಾಲಲ್ಲಿ ನಿಂತಿದ್ದಾರೆ. 

ಅದೇನಾದರೂ ತಪ್ಪಿದರೆ, ಮುಂದಿನ ಮೂರು ತಿಂಗಳುಗಳ ಕಾಲ ಪ್ರೇಕ್ಷಕರ ಅಭಾವ ಕಾಡಬಹುದು ಎಂಬ ಭಯ ಹಲವು ನಿರ್ಮಾಪಕರಲ್ಲಿದೆ.  ಮಾರ್ಚ್‌, ಏಪ್ರಿಲ್‌, ಮೇ ತಿಂಗಳುಗಳು ಬಂದರೆ ಎಲ್ಲಾ ಭಾಷೆಯ ಚಿತ್ರರಂಗಗಳಲ್ಲೂ ಸಣ್ಣ ನಡುಕ ಇದ್ದಿದ್ದೇ. ಅದಕ್ಕೆ ಕಾರಣ ಪರೀಕ್ಷೆಗಳು ಮತ್ತು ಕ್ರಿಕೆಟ್‌. ಈ ಬಾರಿ ಕನ್ನಡ ಚಿತ್ರರಂಗಕ್ಕೆ ಅವೆರಡೂ ಭಯಗಳ ಜೊತೆಗೆ ಇನ್ನೊಂದು ಭಯ ಕೂಡಾ ಸೇರಿದೆ. ಅದೇ ಅಸೆಂಬ್ಲಿ ಚುನಾವಣೆ. 

ಮೇ ತಿಂಗಳಲ್ಲಿ ಕರ್ನಾಟಕದ ಅಸೆಂಬ್ಲಿ ಚುನಾವಣೆಗಳು ನಡೆಯುವುದು ಖಾತ್ರಿಯಾಗಿದೆ. ಹಾಗಾಗಿ ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳುಗಳಲ್ಲಿ ಚಿತ್ರ ಬಿಡುಗಡೆ ಮಾಡುವುದು ಸ್ವಲ್ಪ ರಿಸ್ಕಿ ಎಂಬುದು ಎಲ್ಲರಿಗೂ ಅರ್ಥವಾಗುತ್ತಿದೆ. ಅದೇ ಕಾರಣಕ್ಕೆ ಮಾರ್ಚ್‌ ತಿಂಗಳಿಗೂ ಮುನ್ನವೇ ಚಿತ್ರಗಳನ್ನು ಬಿಡುಗಡೆ ಮಾಡುವುದಕ್ಕೆ ಲೆಕ್ಕಾಚಾರ ನಡೆಯುತ್ತಿದ್ದು, ಅದಕ್ಕೆ ಸೂಕ್ತ  ತಯಾರಿಗಳು ನಡೆಯುತಿವೆ. ಹಾಗೆ ನೋಡಿದರೆ, ಫೆಬ್ರವರಿ ತಿಂಗಳಿನಿಂದಲೇ ಕನ್ನಡ ಚಿತ್ರಗಳಿಗೆ ಸವಾಲು ಶುರುವಾಗಲಿದೆ. 

ಏಕೆಂದರೆ, ಫೆಬ್ರವರಿ 1ರಿಂದ 24ರವರೆಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಒಂದು ದಿನದ ಮತ್ತು ಟಿ20 ಪಂದ್ಯಗಳು ನಡೆಯಲಿವೆ. ಎರಡು ಘಟಾನುಘಟಿ ತಂಡಗಳು ಎದುರುಬದುರಾಗುತ್ತಿರುವುದರಿಂದ, ಸಹಜವಾಗಿಯೇ ಜನರಿಗೆ ಆ ಕಡೆ ಹೆಚ್ಚು ಗಮನವಿರುತ್ತದೆ. ಇನ್ನು ಮಾರ್ಚ್‌ನಲ್ಲಿ ಪರೀಕ್ಷೆಗಳಿರುವುದರಿಂದ, ಆ ತಿಂಗಳು ಸಹಜವಾಗಿಯೇ ಚಿತ್ರರಂಗದ ಪಾಲಿಗೆ ಸ್ಲಾಗ್‌ ಓವರ್‌ ಎಂದರೆ ತಪ್ಪಿಲ್ಲ. ಆ ತಿಂಗಳಲ್ಲಿ ಬೇರೆ ತರಗತಿಯ ಪರೀಕ್ಷೆಗಳ ಜೊತೆಗೆ ಹತ್ತನೇ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳನ್ನು ಮತ್ತು ಅವರ ಹೆತ್ತವರ ನಿದ್ದೆಗೆಡಿಸಿರುತ್ತವೆ. 

ಏಪ್ರಿಲ್‌ ನಾಲ್ಕರಿಂದ, ಮೇ 27ರವರೆಗೆ ಐಪಿಲ್‌ ಕ್ರಿಕೆಟ್‌ ಪಂದ್ಯಾವಳಿಗಳು ನಡೆಯಲಿವೆ. ಈ ಎರಡು ತಿಂಗಳು ಕ್ರಿಕೆಟ್‌ ಪ್ರಿಯರ ಪಾಲಿಗೆ ಹಬ್ಬ ಎಂದರೆ ತಪ್ಪಿಲ್ಲ. ಇನ್ನು ಮೇನಲ್ಲಿ ಚುನಾವಣೆಯ ಸಮಯ. ಈ ಬಾರಿ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದು, ಜನರ ಗಮನವೆಲ್ಲಾ ಆ ಕಡೆ ಕೇಂದ್ರೀಕೃತವಾಗಿರುವುದರಿಂದ ಚಿತ್ರಗಳ ಕಡೆ ಗಮನ ಸಹಜವಾಗಿಯೇ ಕಡಿಮೆಯಾಗುತ್ತದೆ. ಹಾಗಾಗಿ ಈ ಮೂರು ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಿದರೆ, ರಿಸ್ಕ್ ಜಾಸ್ತಿ ಎಂಬ ಭಯ ನಿರ್ಮಾಪಕರದ್ದು.

ಹಾಗಂತ ಈ ಮೂರು ತಿಂಗಳುಗಳಲ್ಲಿ ಚಿತ್ರ ಬಿಡುಗಡೆ ಮಾಡಬಾರದು, ಮಾಡಿದರೆ ಜನ ಬರುವುದಿಲ್ಲ ಮತ್ತು ಇದರಿಂದ ಸಾಕಷ್ಟು ನಷ್ಟವಾಗುತ್ತದೆ ಎನ್ನುವುದೆಲ್ಲಾ ಸುಳ್ಳು. ಆದರೆ, ಈ ಮೂರೂ ತಿಂಗಳು ಕನ್ನಡ ಚಿತ್ರರಂಗಕ್ಕೆ ದೊಡ್ಡ ಸವಾಲೆನ್ನು ವುದು ಹೌದು. ಪರೀಕ್ಷೆ ಗಳಿರಲಿ, ಚುನಾವಣೆ ಯಾಗಲಿ ಅಥವಾ ಕ್ರಿಕೆಟ್‌ ಬರಲಿ …ಅದರಿಂದ ಜನ ಚಿತ್ರ ನೋಡುವುದೇ ಇಲ್ಲ ಅಥವಾ ಚಿತ್ರಮಂದಿರಗಳಿಂದ ದೂರಾಗಿಬಿಡುತ್ತಾರೆ ಎನ್ನುವುದು ತಪ್ಪಾಗುತ್ತದೆ. 

ಆದರೆ, ಇದೆಲ್ಲದರಿಂದ ಚಿತ್ರಗಳ ಪ್ರರ್ದಶನಕ್ಕೆ ಸ್ವಲ್ಪ ಮಟ್ಟಿಗೆ ಏಟು ಬೀಳುವುದು ಖಂಡಿತ. ಈ ಹಿಂದಿನ ವರ್ಷಗಳಲ್ಲಿ ಕ್ರಿಕೆಟ್‌ ಸೀಸನ್‌ ಇದ್ದಾಗ, ಪರೀಕ್ಷೆಗಳು ನಡೆಯುತ್ತಿದ್ದಾಗ ಕೆಲವು ಪ್ರದರ್ಶನಗಳು ಖಾಲಿ ಹೊಡೆಯುತ್ತಿವೆ ಎಂದು ನಿರ್ಮಾಪಕರೇ  ಬೇಸರಿಸಿಕೊಂಡಿದ್ದು ಉಂಟು. ಅದರಲ್ಲೂ ಸ್ವಲ್ಪ ನಿರೀಕ್ಷಿತ ಅಥವಾ ಹೆಸರಾಂತ ಕಲಾವಿದರ ಚಿತ್ರಗಳಿಗೆ ಅಷ್ಟೇನೂ ಬಿಸಿ ತಟ್ಟುವುದಿಲ್ಲ. ಹೊಸಬರ, ಹೆಚ್ಚು ಪ್ರಚಾರ ಮಾಡದವರ, ಕೊನೆಯ ಕ್ಷಣದಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಿದವರ ಚಿತ್ರಗಳಿಗೆ ಮಾತ್ರ ಪ್ರೇಕ್ಷಕರ ಅಭಾವ ದೊಡ್ಡ ಮಟ್ಟದಲ್ಲಿ ಕಾಡುವುದು ನಿಜ.

ಹಾಗಂತ ಹಿಂದಿನ ವರ್ಷಗಳಲ್ಲಿ ಈ ತರಹದ ಸಂದರ್ಭಗಳಲ್ಲಿ ಚಿತ್ರ ಬಿಡುಗಡೆ ಮಾಡಿದವರೆಲ್ಲಾ ಸೋತಿಲ್ಲ ಅಥವಾ ನೆಲಕಚ್ಚಿಲ್ಲ. ಈ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಗೆದ್ದ ಚಿತ್ರಗಳ ಉದಾಹರಣೆಗಳೂ ಹಲವು ಇವೆ. ಆದರೆ, ಈ ಬಾರಿ ಕ್ರಿಕೆಟ್‌, ಪರೀಕ್ಷೆ, ಚುನಾವಣೆ ಎಲ್ಲವೂ ಒಂದರಹಿಂದೊಂದು ಬರುತ್ತಿರುವುರಿಂದ, ಚಿತ್ರ ಮಾಡಿ ಮುಗಿಸಿ, ಬಿಡುಗಡೆಗೆ ಎದುರು ನೋಡುತ್ತಿರುವ ಕೆಲವು ನಿರ್ಮಾಪಕರಲ್ಲಾದರೂ ಆತಂಕ ಸೃಷ್ಟಿಸಿದೆ. 

ಹಾಗಾಗಿ ಇನ್ನೊಂದೆರೆಡು ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆಗೆ ಹಲವರು ಬಂದಿದ್ದು, ಒಂದು ಪಕ್ಷ ಸ್ವಲ್ಪ ತಡವಾದರೆ, ಮೇ ನಂತರ ಚಿತ್ರ ಬಿಡುಗಡೆ ಮಾಡುವ ಯೋಚನೆಗೆ ಹಲವರು ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.ಹಾಗಂತ ಇಷ್ಟಕ್ಕೇ ಮುಗಿಯುವುದಿಲ್ಲ. ಜೂನ್‌ನಲ್ಲಿ ಶಾಲೆ ಆರಂಭ, ಮಳೆ … ಎಂಬ ಹೊಸ ಸವಾಲುಗಳು ಕನ್ನಡ ಚಿತ್ರಗಳ  ಮುಂದೆ ಹಾಜರಾಗುತ್ತವೆ. ಇಷ್ಟು ವರ್ಷಗಳ ಕಾಲ ಚಿತ್ರರಂಗ ಇವನ್ನೆಲ್ಲಾ ಮೆಟ್ಟಿ ನಿಂತಿವೆ.ಈ ಬಾರಿಯೂ ಅದು ಮುಂದುವರೆಯುತ್ತದೆ ಅಷ್ಟೇ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.