ಅಪ್ಪು ಬರ್ತ್‌ಡೇಗೆ ಕೊರೊನಾ ಅಡ್ಡಿ

ಹುಟ್ಟುಹಬ್ಬ ಆಚರಿಸಲ್ಲ, ಮನೆ ಬಳಿ ಬರಬೇಡಿ - ಅಭಿಮಾನಿಗಳಿಗೆ ಪುನೀತ್‌ ರಾಜ್‌ಕುಮಾರ್‌ ಮನವಿ

Team Udayavani, Mar 15, 2020, 7:01 AM IST

puneeth

ನಟ ಪುನೀತ್‌ ರಾಜಕುಮಾರ್‌ ಇದೇ ಮಾರ್ಚ್‌ 17ರಂದು 45ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಪ್ರತಿಬಾರಿಯಂತೆ ಈ ಬಾರಿಯೂ ಅದ್ಧೂರಿಯಾಗಿ ಆಚರಿಸಲು ಪವರ್‌ ಸ್ಟಾರ್‌ ಅಭಿಮಾನಿಗಳು ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದಾರೆ. ಆದರೆ ಇವೆಲ್ಲದರ ನಡುವೆ ಈ ಬಾರಿ ಸ್ವತಃ ಪುನೀತ್‌ ರಾಜಕುಮಾರ್‌ ಅವರೇ ತಮ್ಮ ಅದ್ಧೂರಿ ಬರ್ತ್‌ಡೇಗೆ ಬ್ರೇಕ್‌ ಹಾಕುವ ಸುಳಿವನ್ನು ನೀಡಿದ್ದಾರೆ.

ಹೌದು, ಹಿಂದಿನ ವರ್ಷಕ್ಕಿಂತಲೂ ಈ ಬಾರಿ ಇನ್ನಷ್ಟು ಅದ್ಧೂರಿಯಾಗಿ ಮಾರ್ಚ್‌ 17ರಂದು ಪುನೀತ್‌ ರಾಜಕುಮಾರ್‌ ಬರ್ತ್‌ಡೇ ಆಚರಿಸಬೇಕು ಎಂಬ ಯೋಚನೆಯಲ್ಲಿದ್ದ ಅಭಿಮಾನಿಗಳಿಗೆ ಸ್ವತಃ ಪುನೀತ್‌, ಅಂದು ಯಾವುದೇ ಆಚರಣೆ ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ. ಅಂದಹಾಗೆ, ಪುನೀತ್‌ ರಾಜಕುಮಾರ್‌ ಈ ರೀತಿ ಹೇಳ್ಳೋದಕ್ಕೆ ಕಾರಣವಾಗಿರುವುದು ಕೊರೊನಾ ವೈರಸ್‌ ಭೀತಿ. ಮಹಾಮಾರಿ ಕೊರೊನಾ ಸದ್ಯ ಕರ್ನಾಟಕಕ್ಕೆ ಕಾಲಿಟ್ಟಿದ್ದು, ಈಗಾಗಲೇ ಅಲ್ಲಲ್ಲಿ ಕೊರೊನಾ ವೈರಸ್‌ ಪ್ರಕರಣ ದಾಖಲಾಗುತ್ತಿದೆ.

ಇನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯ ಸರ್ಕಾರ ಕೂಡ ಸುಮಾರು ಒಂದು ವಾರಗಳ ಕಾಲ ಚಿತ್ರಮಂದಿರ, ಮಾಲ್‌ಗ‌ಳು, ಶಾಲಾ-ಕಾಲೇಜುಗಳು, ಬಹುತೇಕ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಬ್ರೇಕ್‌ ಹಾಕಿದೆ. ಅದರಲ್ಲೂ ಕಳೆದ ಎರಡು ದಿನಗಳಿಂದ ಚಿತ್ರಮಂದಿರಗಳು ಬಂದ್‌ ಆಗಿದ್ದು, ಅನೇಕ ಚಿತ್ರಗಳ ಶೂಟಿಂಗ್‌ ಕೂಡ ಸ್ಥಗಿತಗೊಂಡಿದೆ. ಒಟ್ಟಾರೆ ಇಡೀ ಚಿತ್ರೋದ್ಯಮದ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿವೆ.

ಹೀಗಾಗಿ ಈ ಬಾರಿ ಪುನೀತ್‌ ರಾಜಕುಮಾರ್‌ ಕೂಡ ತಮ್ಮ ಹುಟ್ಟುಹಬ್ಬವನ್ನು ಬಹಿರಂಗವಾಗಿ, ಅಭಿಮಾನಿಗಳ ನಡುವೆ ಆಚರಿಸದಿರುವ ನಿರ್ಧಾರಕ್ಕೆ ಬಂದಿದ್ದಾರೆ. “ಈ ಬಾರಿ ಜನ್ಮದಿನದ ಆಚರಣೆಗೆ ಯಾರು ಮನೆಯ ಬಳಿ ಬರಬೇಡಿ. ಅಂದು ಆಚರಣೆ ಮಾಡುವುದಿಲ್ಲ. ನೀವು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರುವುದೇ ನೀವು ನನಗೆ ನೀಡುವ ದೊಡ್ಡ ಉಡುಗೊರೆ’ ಎಂದು ಪುನೀತ್‌ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ವಿಡಿಯೋವನ್ನು ಶೇರ್‌ ಮಾಡಿರುವ ಪುನೀತ್‌ ರಾಜಕುಮಾರ್‌, “ಎಲ್ಲ ಸಮಸ್ತ ಅಭಿಮಾನಿ ದೇವರುಗಳಿಗೆ ನನ್ನ ಕಡೆಯಿಂದ ನಮಸ್ಕಾರ. ನಾನು ಈ ವರ್ಷ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಯಾರೂ ತಮ್ಮ ತಮ್ಮ ಊರುಗಳಿಂದ ಮಾರ್ಚ್‌ 17ರಂದು ನನ್ನ ಮನೆಗೆ ಬರಬೇಡಿ. ಅಂದು ನಾನು ಮನೆಯಲ್ಲಿಯೂ ಇರುವುದಿಲ್ಲ. ನಮ್ಮ ಇಡೀ ದೇಶದಲ್ಲಿ, ಜಗತ್ತಿನಲ್ಲಿ ಈಗ ತೊಂದರೆ ಇದೆ. ಸರ್ಕಾರ ಏನು ನಿರ್ಧಾರ ತೆಗೆದುಕೊಂಡಿದೆ, ಅದಕ್ಕೆ ನಾವೆಲ್ಲರೂ ಕೈ ಜೋಡಿಸಬೇಕು.

ಕೊರೊನಾ ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮಗಳಿಗೆ ಸಹಕಾರ ನೀಡಬೇಕು’ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. “ನನ್ನ ಜನ್ಮದಿನ ಆಚರಣೆಗೆ ಇದುವರೆಗೆ ಬೇರೆ ಬೇರೆ ಊರುಗಳಿಂದ ಬರುತ್ತಿದ್ದಿರಿ, ಪ್ರೀತಿ ವಿಶ್ವಾಸ ತೋರಿಸುತ್ತಿದ್ದಿರಿ. ಖಂಡಿತವಾಗಿಯೂ ನಿಮ್ಮ ಪ್ರೀತಿ ವಿಶ್ವಾಸ ನನ್ನ ಮೇಲೆ ಹೀಗೆ ಯಾವಾಗಲೂ ನನ್ನ ಮೇಲೆ ಇರುತ್ತದೆ ಎಂದು ಭಾವಿಸುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ, ಹುಷಾರಾಗಿರಿ’ ಎಂದು ಪುನೀತ್‌ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ. ಇತ್ತೀಚೆಗೆ ವಿದೇಶದಲ್ಲಿ ನಡೆಯಬೇಕಿದ್ದ “ಯುವರತ್ನ’ ಚಿತ್ರದ ಹಾಡಿನ ಚಿತ್ರೀಕರಣವನ್ನು ಕೊರೊನಾ ಭೀತಿಯಿಂದ ರದ್ದು ಮಾಡಲಾಗಿತ್ತು,

ಇದೀಗ ಪುನೀತ್‌ ಹುಟ್ಟುಹಬ್ಬ ಆಚರಣೆಯನ್ನೂ ರದ್ದು ಮಾಡಲಾಗುತ್ತಿದೆ. ಒಟ್ಟಾರೆ ಜನ್ಮದಿನದ ಆಚರಣೆಯನ್ನು ಅದ್ಧೂರಿಯಾಗಿ ಮಾಡಲು ಕಾದಿದ್ದ ಅಭಿಮಾನಿಗಳಿಗೆ ಸಂದೇಶ ನೀಡಿರುವ ಪುನೀತ್‌ ರಾಜಕುಮಾರ್‌, ಅಭಿಮಾನಿಗಳಿಗೆ ಕೊಂಚ ಬೇಸರವಾದರೂ, ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ತಮ್ಮ ಹುಟ್ಟುಹಬ್ಬ ಆಚರಣೆ ರದ್ದು ಮಾಡಿರುವುದು ಒಳ್ಳೆಯ ನಿರ್ಧಾರ ಎಂಬ ಅಭಿಪ್ರಾಯ ಎಲ್ಲೆಡೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.