ಯಾರಿವಳೀ ಹುಡುಗಿ ಅಂಕಣಕ್ಕೆ ಕೋಸ್ಟಲ್‌ ಟು ಸ್ಯಾಂಡಲ್‌ ಚಿರ ಹೆಜ್ಜೆ


Team Udayavani, Sep 23, 2017, 4:49 PM IST

Chirasri-1.jpg

ತುಳು, ಕೊಂಕಣಿ ಸೇರಿದಂತೆ ಪ್ರಾದೇಶಿಕ ಭಾಷೆಯ ಚಿತ್ರಗಳಲ್ಲಿ ನಟಿಸಿದ ಅನೇಕ ನಟಿಯರ ಕನಸು ಬಹುತೇಕ ಒಂದೇ ಆಗಿರುತ್ತದೆ. ಅದೇನೆಂದರೆ ಕನ್ನಡ, ತಮಿಳು ಸೇರಿದಂತೆ ಇತರ ಭಾಷೆಯ ಚಿತ್ರರಂಗದಲ್ಲಿ ಬಿಝಿಯಾಗಬೇಕು. ಬಣ್ಣದ ಲೋಕದಲ್ಲಿ ಮುಖ್ಯವಾಹಿನಿಗೆ ಬರಬೇಕು ಎಂಬುದು. ಹಾಗಾಗಿ ಅನೇಕರು ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತಲೂ ಇರುತ್ತಾರೆ. ಆದರೆ, ಎಲ್ಲರಿಗೂ ಆ ಅವಕಾಶ ಸಿಗೋದಿಲ್ಲ. ಕೆಲವೊಮ್ಮೆ ಪ್ರಯತ್ನಗಳು ಫ‌ಲಿಸೋದಿಲ್ಲ. ಆದರೆ, ಈ ವಿಷಯದಲ್ಲಿ ಚಿರಶ್ರೀ ಮಾತ್ರ ಅದೃಷ್ಟವಂತೆ. ಕೋಸ್ಟಲ್‌ವುಡ್‌ನಿಂದ ಸ್ಯಾಂಡಲ್‌ವುಡ್‌, ಸ್ಯಾಂಡಲ್‌ವುಡ್‌ನಿಂದ ಕಾಲಿವುಡ್‌ಗೆ ನಿಧಾನವಾಗಿ ಕಾಲಿಡುತ್ತಿದ್ದಾರೆ. ಒಂದಷ್ಟು ಅವಕಾಶಗಳ ಮೂಲಕ ಇಲ್ಲಿ ನೆಲೆಯೂರುವ ಲಕ್ಷಣ ಕೂಡಾ ತೋರುತ್ತಿದ್ದಾರೆ. ಯಾವ ಚಿರಶ್ರೀ ಎಂದರೆ ಮೊದಲು ತುಳು ಸಿನಿಮಾಗಳನ್ನು ತೋರಿಸಬೇಕು. “ರಂಭಾರೊಟ್ಟಿ’ ಹಾಗೂ “ಪವಿತ್ರ’ ಎಂಬ ತುಳು ಸಿನಿಮಾಗಳಲ್ಲಿ ನಟಿಸಿದ್ದು, ಆ ಎರಡು ಸಿನಿಮಾಗಳು ಬಿಡುಗಡೆಯಾಗಿವೆ. ಈ ಮೂಲಕ ಚಿರಶ್ರೀಯ ಸಿನಿಕೆರಿಯರ್‌ ಕೂಡಾ ಆರಂಭವಾಗಿದೆ. ಸಾಮಾನ್ಯವಾಗಿ ತುಳು ಸಿನಿಮಾಗಳಲ್ಲಿ ನಟಿಸುವ ನಾಯಕಿಯರು ಬಹುತೇಕ ದಕ್ಷಿಣ ಕನ್ನಡದವರೇ ಆಗಿರುತ್ತಾರೆ. ಚಿರಶ್ರೀ ಕೂಡಾ ಅದರಿಂದ ಹೊರತಲ್ಲ. ಬಾಲ್ಯದಿಂದಲೇ ಸಿನಿಮಾ ಆಸಕ್ತಿ ಹೊಂದಿದ್ದ ಚಿರಶ್ರೀಗೆ ತುಳು ಸಿನಿಮಾದಲ್ಲಿ ಅವಕಾಶ ಪಡೆಯುವ ಮೂಲಕ ತಮ್ಮ ಕನಸಿನ ಕ್ಷೇತ್ರಕ್ಕೆ ಧುಮುಕಿದ್ದಾರೆ. 

ಕೈ ಹಿಡಿದ ತುಳು ಸಿನಿಮಾಗಳು
ಮೊದಲೇ ಹೇಳಿದಂತೆ ಬಣ್ಣದ ಲೋಕದ ಮೇಲೆ ಆಸಕ್ತಿ ಹೊಂದಿದ್ದ ಚಿರಶ್ರೀಗೆ ಕಾಲೇಜು ದಿನಗಳಲ್ಲೇ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಗುತ್ತದೆ. ಅದು “ರಂಭಾರೊಟ್ಟಿ’ ಚಿತ್ರದ ಮೂಲಕ. ಈ ಸಿನಿಮಾದ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಧಿಕೃತವಾಗಿ ಬಣ್ಣದ ಲೋಕಕ್ಕೆ ಚಿರಶ್ರೀ ಎಂಟ್ರಿಕೊಡುತ್ತಿದ್ದಾರೆ. ಕೆಲವರ ಕನಸು ಮೊದಲ ಸಿನಿಮಾಕ್ಕೇ ಕಮರಿ ಹೋಗುತ್ತದೆ. ಇಷ್ಟಪಟ್ಟು ಮಾಡಿದ ಸಿನಿಮಾಗಳು ಕೈ ಹಿಡಿಯದಿರುವ ಮೂಲಕ ಬಂದ ದಾರಿಯಲ್ಲೇ ವಾಪಾಸ್‌ ಹೋಗುವ ಪರಿಸ್ಥಿತಿ ಬರುತ್ತದೆ. ಆದರೆ, ಚಿರಶ್ರೀ ಮಾತ್ರ ಆ ವಿಷಯದಲ್ಲಿ ಅದೃಷ್ಟವಂತೆ. ಏಕೆಂದರೆ “ರಂಭಾರೊಟ್ಟಿ’ ಚಿತ್ರಕ್ಕೆ ಹಾಗೂ ಚಿರಶ್ರೀಯ ನಟನೆಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುವ ಮೂಲಕ ಮತ್ತೂಂದು ಸಿನಿಮಾದಲ್ಲಿ ಅವಕಾಶ ಸಿಗುತ್ತದೆ. ಅದು “ಪವಿತ್ರ’. ಇದು ಚಿರಶ್ರೀ ನಟಿಸಿದ ತುಳು ಸಿನಿಮಾ. ಈ ಸಿನಿಮಾದಲ್ಲೂ ಚಿರಶ್ರೀಗೆ ಒಳ್ಳೆಯ ಪಾತ್ರ ಸಿಕ್ಕಿದ್ದು, ಸಿನಿಮಾದ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

“ಸಿನಿಮಾ ಬಗ್ಗೆ ಕನಸು ಕಂಡಿದ್ದ ನನಗೆ “ರಂಭಾರೊಟ್ಟಿ’ ಹಾಗೂ “ಪವಿತ್ರ’ ಚಿತ್ರಗಳಲ್ಲಿ ಒಳ್ಳೆಯ ಪಾತ್ರ ಸಿಕ್ಕಿತು. ಆ ಮೂಲಕ ನನ್ನ ಸಿನಿ ಬದುಕು ಆರಂಭವಾಯಿತು. ಈಗ ತುಳು, ಕನ್ನಡ, ತಮಿಳು ಹಾಗೂ ತೆಲುಗು ಸಿನಿಮಾಗಳಿಂದಲೂ ಅವಕಾಶವಿದೆ.ಸದ್ಯ “ಓ ಮಂಜುನಾಥ’  ಎಂಬ ತುಳು ಸಿನಿಮಾ ಒಪ್ಪಿಕೊಂಡಿದ್ದೇನೆ’ ಎನ್ನುವುದು ಚಿರಶ್ರೀ ಮಾತು. ಮೊದಲ ಬಾರಿಗೆ ಕ್ಯಾಮರಾ ಎದುರಿಸಿದಾಗ ಸಹಜವಾಗಿಯೇ ಚಿರಶ್ರೀಗೆ ಭಯವಾಯಿತು. ಆದರೆ, ಈಗ ಒಂದಷ್ಟು ಸಿನಿಮಾಗಳನ್ನು ಮಾಡಿರುವುದರಿಂದ ಆ ಭಯ ದೂರವಾಗಿದ್ದು, ಆರಾಮವಾಗಿ ನಟಿಸುತ್ತೇನೆ ಎನ್ನುತ್ತಾರೆ ಚಿರಶ್ರೀ.

ತುಳು ಸಿನಿಮಾಗಳ ಮೂಲಕ ಗಮನ ಸೆಳೆದ ಚಿರಶ್ರೀಗೆ ಕನ್ನಡ ಚಿತ್ರಗಳಿಂದಲೂ ಅವಕಾಶ ಬರುತ್ತದೆ. ಈಗಾಗಲೇ ಚಿರಶ್ರೀ ನಟಿಸಿದ ಕನ್ನಡ ಸಿನಿಮಾ “ಕಲ್ಪನಾ-2′ ಬಿಡುಗಡೆಯಾಗಿದೆ. ಹೌದು, ಉಪೇಂದ್ರ ಅಭಿನಯದ “ಕಲ್ಪನಾ-2′ ಚಿತ್ರದಲ್ಲಿ ಚಿರಶ್ರೀಗೆ ಒಂದು ಸಣ್ಣ ಪಾತ್ರ ಸಿಕ್ಕಿದೆ. ಸಣ್ಣ ಪಾತ್ರವಾದರೂ ದೊಡ್ಡ ಸಿನಿಮಾ ಎಂಬ ಖುಷಿಯಲ್ಲೇ ಆ ಸಿನಿಮಾವನ್ನು ಒಪ್ಪಿಕೊಂಡು ನಟಿಸಿದ್ದಾರೆ ಚಿರಶ್ರೀ. ಚಿರಶ್ರೀಯ ಬಣ್ಣದ ಲೋಕದ ಆಸೆಗೆ ಬೆನ್ನೆಲುಬಾಗಿ ನಿಂತಿದ್ದು ಅವರ ಕುಟುಂಬವಂತೆ. “ಕುಟುಂಬದವರ ಬೆಂಬಲ ಇಲ್ಲದಿದ್ದರೆ ನಾನು ಈ ಕ್ಷೇತ್ರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ನನ್ನ ಅಮ್ಮ ಸೇರಿದಂತೆ ಕುಟುಂಬದ ಪ್ರತಿಯೊಬ್ಬರೂ ನನ್ನ ನಟನಾ ಕೆರಿಯರ್‌ಗೆ ಪ್ರೋತ್ಸಾಹ ನೀಡುತ್ತಿದ್ದಾರೆ’ ಎನ್ನಲು ಚಿರಶ್ರೀ ಮರೆಯುವುದಿಲ್ಲ. 

ಕೈ ತುಂಬಾ ಅವಕಾಶ
ಕನ್ನಡ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಬೇಕೆಂಬ ಕನಸು ಕಂಡಿದ್ದ ಚಿರಶ್ರೀಗೆ ಈಗ ಒಂದಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ. “ಗೋಲ್‌ಮಾಲ್‌ ಬ್ರದರ್’, “ಹುಲಿರಾಯ’, “ಉಡುಂಬಾ’, “ಫ‌ಕೀರ’, “ಕರಿಗಂಬಳಿಯಲ್ಲಿ ಮಿಡಿನಾಗ’ ಚಿತ್ರಗಳಲ್ಲಿ ಚಿರಶ್ರೀ ನಾಯಕಿಯಾಗಿ ನಟಿಸಿದ್ದಾರೆ. “ಹುಲಿರಾಯ’ ಚಿತ್ರದಲ್ಲಿ ಅರಣ್ಯಾಧಿಕಾರಿಯ ಮಗಳಾಗಿ ನಟಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. “ಈಗ ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತಿವೆ. ಮೂರು ಸಿನಿಮಾಗಳಲ್ಲೂ ವಿಭಿನ್ನವಾದ ಪಾತ್ರ ಸಿಕ್ಕಿದೆ. ಪ್ರತಿ ಪಾತ್ರಗಳಿಗೂ ನ್ಯಾಯ ಒದಗಿಸಲು ಶಕ್ತಿಮೀರಿ ಪ್ರಯತ್ನಿಸುತ್ತಿದ್ದೇನೆ’ ಎನ್ನುವುದು ಚಿರಶ್ರೀ ಮಾತು. “ನನಗೆ ಸಾಕಷ್ಟು ಅವಕಾಶಗಳು ಬಂದಿದ್ದು ಸುಳ್ಳಲ್ಲ. ಆದರೆ, ನಾನು ಚಿತ್ರರಂಗಕ್ಕೆ ಹೊಸಬಳು. ಬಂದ ಅವಕಾಶಗಳನ್ನೆಲ್ಲಾ ಕಣ್ಣುಮುಚ್ಚಿ ಒಪ್ಪಿಕೊಂಡರೆ ಮುಂದೆ ನನ್ನ ಕೆರಿಯರ್‌ಗೆ ತೊಂದರೆಯಾಗುತ್ತದೆ. ಹಾಗಾಗಿ, ನನಗೆ ತುಂಬಾ ಇಷ್ಟವಾದ ಮತ್ತು ಈ ಪಾತ್ರಕ್ಕೆ ನಾನು ನ್ಯಾಯ ಒದಗಿಸಬಲ್ಲೆ ಎಂಬ ನಂಬಿಕೆ ಇದ್ದ ಪಾತ್ರಗಳನ್ನಷ್ಟೇ ಒಪ್ಪಿಕೊಂಡಿದ್ದೇನೆ. ನನಗೆ ಏಕಾಏಕಿ ಸಿನಿಮಾ ಮೇಲೆ ಸಿನಿಮಾ ಮಾಡಿ ಪಟ್ಟಿ ಬೆಳೆಸಿಕೊಳ್ಳುವ ಆಸೆ ಇಲ್ಲ. ನಿಧಾನವಾಗಿಯಾದರೂ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು’ ಎನ್ನುವುದು ಚಿರಶ್ರೀ ಮಾತು.  ಚಿರಶ್ರೀಗೆ ತೆಲುಗು ಹಾಗೂ ತಮಿಳು ಚಿತ್ರಗಳಿಂದಲೂ ಆಫ‌ರ್‌ ಬಂದಿದ್ದು, ಒಂದು ತೆಲುಗು ಹಾಗೂ ಎರಡು ತಮಿಳು ಸಿನಿಮಾಗಳಲ್ಲಿ ಚಿರಶ್ರೀ ನಟಿಸಿದ್ದಾರೆ. ಮುಂದೆ ಆ ಚಿತ್ರರಂಗದಲ್ಲಿ ಕ್ಲಿಕ್‌ ಆದರೆ ಅಲ್ಲೇ ಸೆಟ್ಲ ಆಗುವ ಆಲೋಚನೆ ಚಿರಶ್ರೀಗಂತೂ ಇಲ್ಲ. “ನನಗೆ ಎಲ್ಲಾ ಭಾಷೆಯ ಚಿತ್ರಗಳಲ್ಲಿ ನಟಿಸಬೇಕೆಂಬ ಆಸೆ ಇದೆ. ಕನ್ನಡ, ತುಳು ಸಿನಿಮಾಗಳಿಗೆ ಮೊದಲ ಆದ್ಯತೆ. ಏಕೆಂದರೆ, ನನಗೆ ಮೊದಲು ಅವಕಾಶ ಕೊಟ್ಟ ಚಿತ್ರರಂಗವಿದು’ ಎನ್ನುವುದು ಚಿರಶ್ರೀ ಮಾತು. ಬಹುತೇಕ ಎಲ್ಲಾ ನಟಿಯರಂತೆ ಚಿರಶ್ರೀಗೂ ಒಂದು ಆಸೆ ಇದೆ. ಅದೇನೆಂದರೆ ನಾಯಕಿ ಪ್ರಧಾನ ಚಿತ್ರಗಳಲ್ಲಿ ನಟಿಸಬೇಕೆಂಬುದು. ಅವರ ಆ ಆಸೆ ಈಡೇರುತ್ತಾ ಕಾದು ನೋಡಬೇಕು.

ಬರಹ: ರವಿಪ್ರಕಾಶ್‌ ರೈ; ಚಿತ್ರಗಳು: ಸಂಗ್ರಹ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.