ಕೋವಿಡ್ ಸಂಕಷ್ಟ : ಕಲಾವಿದ ಮತ್ತು ಕಲಾತಂಡಗಳಿಗೆ 3 ಸಾವಿರ ರೂ .ನೆರವು ಘೋಷಣೆ
Team Udayavani, May 19, 2021, 4:59 PM IST
ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಇಂದು ( ಮೇ.19 ಬುಧವಾರ) ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಪ್ರಕಟಿಸಿದರು. ಕಲಾವಿದರು ಹಾಗೂ ಕಲಾವಿದ ತಂಡಗಳಿಗೆ ತಲಾ 3 ಸಾವಿರ ರೂಪಾಯಿ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ಒಟ್ಟು 16,095 ಫಲಾನುಭವಿಗಳು ಈ ಯೋಜನೆಯನ್ನು ಪಡೆಯಲಿದ್ದಾರೆ. ಇದಕ್ಕಾಗಿ ಸರ್ಕಾರ 4.82 ಕೋಟಿ ವೆಚ್ಚ ಭರಿಸಲಿದೆ ಎಂದು ತಿಳಿಸಿದರು. ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಇನ್ನುಳಿದಂತೆ ಹೂವು ಬೆಳೆಗಾರರು, ಹಣ್ಣು-ತರಕಾರಿ ಬೆಳೆದ ರೈತರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ಸಮಾಜದ ಹಲವು ವರ್ಗಗಳಿಗೆ ವಿಶೇಷ ಪ್ಯಾಕೇಜ್ ಅಡಿ ಸಹಾಯಧನ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್