ಕನ್ನಡ ಚಿತ್ರದ ಶೂಟಿಂಗ್ ವೇಳೆ ಸ್ಫೋಟ: ಇಬ್ಬರು ಕಲಾವಿದರ ದುರ್ಮರಣ
Team Udayavani, Mar 29, 2019, 7:35 PM IST
ಬೆಂಗಳೂರು : ರಣಂ ಕನ್ನಡ ಚಿತ್ರದ ಶೂಟಿಂಗ್ ವೇಳೆ ಅವಘಡವೊಂದು ನಡೆದಿದ್ದು, ಇಬ್ಬರು ಕಲಾವಿದರು ದುರ್ಮರಣವನ್ನಪ್ಪಿದ್ದಾರೆ.
ಶುಕ್ರವಾರ ಬಾಗಲೂರು ಬಳಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಚಿರಂಜೀವಿ ಸರ್ಜಾ ಅವರು ನಾಯಕನಾಗಿ ರಣಂ ಚಿತ್ರದಲ್ಲಿ ನಟಿಸುತ್ತಿದ್ದು, ವಿ.ಸಮುದ್ರಂ ಅವರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಫೋಟಕ್ಕೆ ಕಾರಣವೇನು, ಸಾವನ್ನಪ್ಪಿರುವ ಕಲಾವಿದರ ಕುರಿತಾಗಿ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ