ಜೂ.09ಕ್ಕೆ ವಿ.ಮನೋಹರ್‌ ನಿರ್ದೇಶನದ ‘ದರ್ಬಾರ್‌’ ತೆರೆಗೆ


Team Udayavani, May 30, 2023, 3:25 PM IST

darbar

ಸಂಗೀತ ನಿರ್ದೇಶಕ ವಿ.ಮನೋಹರ್‌ ನಿರ್ದೇಶಿಸಿರುವ “ದರ್ಬಾರ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜೂನ್‌ 09ರಂದು ತೆರೆಕಾಣುತ್ತಿದ್ದು, ಸಿನಿಮಾ ಮೇಲೆ ಚಿತ್ರತಂಡ ನಿರೀಕ್ಷೆ ಇಟ್ಟಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ವಿ.ಮನೋಹರ್‌, “ಸುಮಾರು 23 ವರ್ಷಗಳ ನಂತರ ನಾನು ನಿರ್ದೇಶನಕ್ಕೆ ಕೈ ಹಾಕಿದ್ದೇನೆ. ಅದಕ್ಕೆ ಸತೀಶ್‌ ಅವರೇ ಕಾರಣ. ನಾನು “ಓ ಮಲ್ಲಿಗೆ’ ಚಿತ್ರ ನಿರ್ದೇಶನ ಮಾಡಿದಾಗ ಎಲ್ಲರೂ ನನ್ನನ್ನು ಹೀಯಾಳಿಸಿದ್ದರು. ನನ್ನಮೇಲೆ ಸಂಶಯಪಟ್ಟವರಿಗೆ ಈ ಚಿತ್ರವೇ ಉತ್ತರ. ನಾವು ಎಲ್ಲೇ ಹೋದರೂ ಇದು ಪರಿಶುದ್ದ ಹಾಸ್ಯಚಿತ್ರನಾ ಎಂದೇ ಕೇಳುತ್ತಾರೆ. ಈಗ ಹಾಸ್ಯ ಅಂದ್ರೆ ಡಬಲ್‌ ಮೀನಿಂಗ್‌ ಅನ್ನುವಂತಾಗಿದೆ. ಮೊದಲ ಪ್ರದರ್ಶನಕ್ಕೆ ಬಂದವರು ಮೆಚ್ಚುವ ಎಲ್ಲ ಅಂಶಗಳು ಚಿತ್ರದಲ್ಲಿವೆ. ಹೀರೋ ಕೆಟ್ಟದ್ದನ್ನು, ಸೋಮಾರಿಗಳನ್ನು ಕಂಡರೆ ಸಹಿಸಲ್ಲ, ಉದಾಹರಣೆಗೆ ಜೂಜಾಡುವುದು, ಅರಳಿಕಟ್ಟೆಯಲ್ಲಿ ಕೂತು ಹರಟೆ ಹೊಡೆಯುವುದು, ಈತನ ಈ ಗುಣ ಕೆಲವರಿಗೆ ಇಷ್ಟ ಆಗಲ್ಲ, ಇವನನ್ನು ಪಂಚಾಯ್ತಿ ಎಲೆಕ್ಷನ್‌ ನಲ್ಲಿ ಸೋಲಿಸಬೇಕು ಎಂದು ಪ್ರಯತ್ನಿಸುತ್ತಾರೆ. ಗಿಚ್ಚಿ ಗಿಲಿಗಿಲಿ ಕಾರ್ತೀಕ್‌ ಬೇರೆ ಥರದ ರೋಲ್‌ ಮಾಡಿದ್ದಾರೆ. ಸಂತು ಹೀರೋ ಜೊತೆನೇ ಇದ್ದು ಆಗಾಗ ಕಾಲೆಳೆಯುವ ಪಾತ್ರ ಮಾಡಿದ್ದಾರೆ. ಸಾಧು ಕೋಕಿಲ, ನವೀನ್‌ ಪಡೀಲ್‌ ಜೋಡಿ ನೋಡುಗರನ್ನು ರಂಜಿಸುತ್ತದೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು.

ನಂತರ ಚಿತ್ರದ ನಾಯಕ, ನಿರ್ಮಾಪಕ, ಸತೀಶ್‌ ಮಾತನಾಡುತ್ತಾ, “ಆರಂಭದಲ್ಲಿ ಏನೋ ಒಂದು ಬಜೆಟ್‌ ಅಂದುಕೊಂಡಿದ್ದೆವು. ಕ್ವಾಲಿಟಿ ನೋಡುತ್ತ ಹೋದಂತೆ ಜಾಸ್ತೀನೇ ಅಯ್ತು. ಮೊನ್ನೆ ಚಿತ್ರದ ಪ್ರೀವ್ಯೂ ನೋಡಿದೆವು. ಒಂದೊಳ್ಳೆ ಸಿನಿಮಾ ಮಾಡಿದ್ದೇವೆಂಬ ನಂಬಿಕೆಯಿದೆ. ಒಬ್ಬರು ಬಂದು ಸಿನಿಮಾ ನೋಡಿದರೆ ಖಂಡಿತ 10 ಜನಕ್ಕೆ ಹೇಳುತ್ತಾರೆ ಎಂಬ ನಂಬಿಕೆ ಇದೆ’ ಎಂದು ಹೇಳಿದರು.

ನಾಯಕಿ ಜಾಹ್ನವಿ ಮಾತನಾಡಿ, “ಇದು ನನ್ನ ಮೊದಲ ಚಿತ್ರ. ತುಂಬಾ ಚೆನ್ನಾಗಿ ಬಂದಿದೆ. ಈ ಚಿತ್ರದಲ್ಲಿ ನಾನು ಸೈಕಾಲಜಿ ಸ್ಟೂಡೆಂಟ್‌. ರಜೆಗೆಂದು ಊರಿಗೆ ಬಂದಾಗ ನಾಯಕನ ಪರಿಚಯವಾಗುತ್ತದೆ. ನಂತರ ಆತನಿಗೆ ಸಪೋರ್ಟ್‌ ಮಾಡುತ್ತೇನೆ. ಒಂದು ಹಳ್ಳಿಯಲ್ಲಿ ನಾವೇ ಇರುವಂತೆ, ನಮ್ಮ ಸುತ್ತಲೂ ಘಟನೆಗಳು ನಡೆಯುತ್ತಿರುವಂತೆ ನಮಗನಿಸುತ್ತದೆ’ ಎಂದು ಹೇಳಿದರು.

ಸತೀಶ್‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು, ಬಿ.ಎನ್‌. ಶಿಲ್ಪ ಅವರು ನಿರ್ಮಾಣ ಮಾಡಿದ್ದಾರೆ. ಮಾಸ್‌ ಮಾದ, ವಿನೋದ್‌ ಮೂರು ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಹಿರಿಯ ಕಲಾವಿದರಾದ ಎಂ.ಎನ್‌. ಲಕ್ಷ್ಮೀದೇವಿ, ಅಶೋಕ್‌ ಹೀಗೆ ಸಾಕಷ್ಟು ಜನ ಅಭಿನಯಿಸಿದ್ದಾರೆ. ಮೂರು ಹಾಡುಗಳು ಚಿತ್ರದಲ್ಲಿದ್ದು, ಟೈಟಲ್‌ ಸಾಂಗನ್ನು ಚಂದನ್‌ ಶೆಟ್ಟಿ ಹಾಡಿದ್ದಾರೆ, ರಾಜಕೀಯ ವಿಡಂಬನೆಯ ಹಾಡನ್ನು ಉಪೇಂದ್ರ ಹಾಡಿದ್ದಾರೆ, ಇನ್ನು ಡ್ಯುಯೆಟ್‌ ಹಾಡಿಗೆ ಜಯಂತ್‌ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.

ಟಾಪ್ ನ್ಯೂಸ್

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

fighter

Vinod Prabhakar; ಅ.1ರಂದು ‘ಫೈಟರ್’ ಟ್ರೇಲರ್ ಬಿಡುಗಡೆ

Dharma keerthiraj ronnie movie trailer

Ronnie; ಸದ್ದು ಮಾಡುತ್ತಿದೆ ಧರ್ಮ ಕೀರ್ತಿರಾಜ್‌ ರ ‘ರೋನಿ’ ಟ್ರೇಲರ್

nirup-bhandari-in-edagaiye-apaghatakke-karana-movie

Sandalwood; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಿರೂಪ್‌ ಭಂಡಾರಿ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

totapuri 2 review

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.