ರಾಬರ್ಟ್ ರಿಲೀಸ್ ಗೆ ಅಡ್ಡಿ: ತೆಲುಗು ಚಿತ್ರರಂಗದ ನಿಲುವಿಗೆ ದರ್ಶನ್‌ ಗರಂ


Team Udayavani, Jan 30, 2021, 8:13 AM IST

darshan

ದರ್ಶನ್‌ ಗರಂ ಆಗಿದ್ದಾರೆ. ಅದು ತೆಲುಗು ಚಿತ್ರರಂಗದ ವಿರುದ್ಧ. ದರ್ಶನ್‌ ಅವರ “ರಾಬರ್ಟ್‌’ ಚಿತ್ರ ಮಾರ್ಚ್‌ 11 ರಂದು ಬಿಡುಗಡೆಯನ್ನು ಘೋಷಿಸಿಕೊಂಡಿದೆ. ಅದು ಕನ್ನಡ ಹಾಗೂ ತೆಲುಗಿನಲ್ಲಿ. ಆದರೆ, ತೆಲುಗು ಚಿತ್ರರಂಗದಲ್ಲಿ ಮಾರ್ಚ್‌ 11ರಂದು “ರಾಬರ್ಟ್‌’ ಸಿನಿಮಾ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ ಎಂದು ತೆಲುಗು ಚಿತ್ರರಂಗ ಹಾಗೂ ಅಲ್ಲಿನ ವಾಣಿಜ್ಯ ಮಂಡಳಿ ವಿರುದ್ಧ ನಟ ದರ್ಶನ್‌ ಹಾಗೂ “ರಾಬರ್ಟ್‌’ ನಿರ್ಮಾಪಕ ಉಮಾಪತಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶುಕ್ರವಾರ ದೂರು ನೀಡಿದ್ದಾರೆ.

ಅಲ್ಲಿನ ನಟರ ಸಿನಿಮಾಗಳು ಡಬ್‌ ಆಗಿ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್‌ ಆಗುತ್ತಿವೆ. ಆದರೆ, ನಮ್ಮ ಕನ್ನಡ ಸಿನಿಮಾಗಳಿಗೆ ಅಲ್ಲಿ ಬಿಡುಗಡೆಗೆ ಅವಕಾಶ ಕೊಡುತ್ತಿಲ್ಲ. ಕೂಡಲೇ ಮಂಡಳಿ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದ್ದಾರೆ.

ನಮ್ಮಲ್ಲಿ ಇರೋರು ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು: ವಾಣಿಜ್ಯ ಮಂಡಳಿ ಸಭೆಯಲ್ಲಿ ಮಾತನಾಡಿದ ದರ್ಶನ್‌, “ನಾವು ಯಾವುದೇ ಭಾಷೆಯ ಸಿನಿಮಾ ಬಂದರೂ ಅವರಿಗೆ ಅವಕಾಶ ಮಾಡಿಕೊಡುತ್ತೇವೆ. ಅವರಲ್ಲಿ ತೆಲುಗು, ತಮಿಳಿನಲ್ಲೇ ಮಾತನಾಡುತ್ತೇವೆ. ಆದರೆ ಅವರು ನಮಗೆ ಅವಕಾಶ ಕೊಡುತ್ತಿಲ್ಲ. ಮೊದಲು ನಮ್ಮಲ್ಲಿ ಇರೋರು ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು. ತಮಿಳು, ತೆಲುಗಿನವರಿಗೆ ಇರುವ ಭಾಷಾಭಿಮಾನ ನಮ್ಮವರಿಗೆ ಇಲ್ಲ’ ಎಂದು ನೇರವಾಗಿ ಹೇಳಿದ್ದಾರೆ.

ತಮ್ಮ ಸಿನಿಮಾ ಬಿಡುಗಡೆಗೆ ಅಡ್ಡಿಪಡಿಸುತ್ತಿರುವ ಬಗ್ಗೆ ಮಾತನಾಡಿದ ದರ್ಶನ್‌, “ಮಾರ್ಚ್‌ 11ರಂದು ಯಾವುದೋ ನಾಲ್ಕು ಸಿನಿಮಾಗಳಿವೆ. ನಿಮ್ಮ ಹೀರೋಗಳ ಸಿನಿಮಾ ಇಲ್ಲಿ ರಿಲೀಸ್‌ ಆದರೆ, ನಮ್ಮ ಹೀರೋಗಳಿಗೆ ತೊಂದರೆ ಆಗುತ್ತದೆ ಎಂದು ಅವರು ಹೇಳುತ್ತಾರೆ. ಹಾಗಾದರೆ ಅವರ ಹೀರೋಗಳ ಸಿನಿಮಾಗಳು ಬಿಡುಗಡೆಯಾದಾಗ ನಾವು ಆ ತೊಂದರೆ ತಗೋತ್ತಿವಿ. ಹಾಗಿರುವಾಗ ಕನ್ನಡ ಸಿನಿಮಾಗಳಿಗೆ ಯಾಕೆ ಅವಕಾಶ ಕೊಡುತ್ತಿಲ್ಲ. ಪರಭಾಷಾ ಚಿತ್ರರಂಗದವರಿಗೆ ಅವರ ಮಾರುಕಟ್ಟೆ ಕಬಳಿಸುತ್ತೇವೆ ಎಂಬ ಭಯ ಶುರುವಾಗಿದೆ. ಆರಂಭದಲ್ಲಿ ಅವರು ಒಂದೊಂದೇ ಸಿನಿಮಾ ಮೂಲಕ ಎಂಟ್ರಿ ಕೊಟ್ಟರು. ಈಗ ಅದ್ಧೂರಿಯಾಗಿ ಬಿಡುಗಡೆ ಮಾಡುತ್ತಾರೆ. ನಾವು ಹಾಗೇ ಮಾಡಬೇಕು. ನನಗೆ ಏನು ಸಮಸ್ಯೆ ಇಲ್ಲ, ನನ್ನದು 50 ಸಿನಿಮಾ ಆಯ್ತು. ಆದರೆ, ಮುಂದೆ ಬರುವ ಯಂಗ್‌ಸ್ಟಾರ್ ಕಥೆ ಏನು, ಇದು ಎಲ್ಲರೂ ಕುಳಿತು ಯೋಚನೆ ಮಾಡಬೇಕಾದ ವಿಚಾರ’ ಎಂದರು ದರ್ಶನ್‌.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.