ಅಭಿಮಾನಿಗಳ ಬೆಂಬಲಕ್ಕೆ ನಿಂತ ಚಾಲೆಂಜಿಂಗ್ ಸ್ಟಾರ್ ದರ್ಶನ್, ಟ್ವೀಟ್ ಮೂಲಕ ಎಚ್ಚರಿಕೆ!
Team Udayavani, Sep 17, 2019, 1:28 PM IST
ಬೆಂಗಳೂರು:ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರಾದ ದರ್ಶನ್ ತೂಗುದೀಪ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ನಡುವಿನ ಜಟಾಪಟಿ ಸಾಮಾಜಿಕ ಜಾಲತಾಣದಲ್ಲಿ ಮುಂದುವರಿದಿದ್ದು, ಇದೀಗ ಸ್ವತಃ ದರ್ಶನ್ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳ ಬೆಂಬಲಕ್ಕೆ ನಿಂತಂತಾಗಿದೆ.
ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಬಿಡುಗಡೆಯಾದ ನಂತರ ಇಬ್ಬರು ಸ್ಟಾರ್ ನಟರ ಅಭಿಮಾನಿಗಳ ನಡುವಿನ ಆರೋಪ, ಪ್ರತ್ಯಾರೋಪ ಮುಂದುವರಿದಿದ್ದು, ಅದು ತಾರಕಕ್ಕೇರಿದೆ.
ದರ್ಶನ್ ಟ್ವೀಟ್ ನಲ್ಲೇನಿದೆ:
ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು-ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ ಪ್ರಚೋದಿಸಲು ಬರದಿರಿ ಎಂದು ದರ್ಶನ್ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಮತ್ತೊಂದೆಡೆ ದರ್ಶನ್ ಅಭಿಮಾನಿಗಳು, ದಾಸ ಸುಮ್ನಿದ್ರು ನಾವು ಸುಮ್ಮಿರಲ್ಲ ಯಾಕಂದ್ರೆ ದಾಸನಿಗಿರೋ ತಾಳ್ಮೆ ನಮಗಿಲ್ಲ. ದಾಸನ ಅಭಿಮಾನಿಗಳನ್ನು ಕೆಣಕದಿರಿ ಎಂದು ಟ್ವೀಟ್ ಮಾಡಿರುವುದು ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ವಾಕ್ಸಮರ ಮುಂದುವರಿದಂತಾಗಿದೆ.
ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು – ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ ?
— Darshan Thoogudeepa (@dasadarshan) September 17, 2019