“ಮೋಸ್ಟ್‌ ರೆಸ್ಪಾನ್ಸಿಬಲ್‌ ಪರ್ಸನ್‌’ಗೆ ದರ್ಶನ್‌ ಸಾಥ್‌

ಇಂದು ಸಂಜೆ ಎಂಆರ್‌ಪಿ ಟೀಸರ್‌ ಬಿಡುಗಡೆ ಮಾಡ್ತಾರೆ ದಚ್ಚು

Team Udayavani, Aug 31, 2019, 3:04 AM IST

MRP

ಹೊಸಬರಿಗೆ ಮೊದಲಿನಿಂದಲೂ ದರ್ಶನ್‌ ಬೆಂಬಲ ಕೊಡುತ್ತಲೇ ಬಂದವರು. ಅದು ಆಡಿಯೋ ಬಿಡುಗಡೆ ಇರಲಿ, ಪೋಸ್ಟರ್‌, ಟೀಸರ್‌, ಟ್ರೇಲರ್‌ ಬಿಡುಗಡೆ ಹೀಗೆ ಸಿನಿಮಾದ ಯಾವುದೇ ಕಾರ್ಯಕ್ರಮವಿದ್ದರೂ, ದರ್ಶನ್‌ ಪ್ರೀತಿಯಿಂದಲೇ ಪ್ರೋತ್ಸಾಹಿಸಿಸುತ್ತಿದ್ದಾರೆ. ಈಗ “ಮೋಸ್ಟ್‌ ರೆಸ್ಪಾನ್ಸಿಬಲ್‌ ಪರ್ಸನ್‌’ಗೂ ಸಾಥ್‌ ಕೊಡುತ್ತಿದ್ದಾರೆ. ಇದು “ಎಂಆರ್‌ಪಿ’ ಚಿತ್ರದ ವಿಷಯ. ಹೌದು, ದರ್ಶನ್‌ ಅವರು ಶನಿವಾರ (ಇಂದು) ಸಂಜೆ 6 ಕ್ಕೆ ಈ ಚಿತ್ರದ ಟೀಸರ್‌ ಬಿಡುಗಡೆ ಮಾಡುವ ಮೂಲಕ ಹೊಸ ತಂಡಕ್ಕೆ ಬೆಂಬಲ ಕೊಡುತ್ತಿದ್ದಾರೆ.

ಇದೇ ಮೊದಲ ಸಲ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಾಯಕ ಹರಿ ಅಭಿನಯದ ಚಿತ್ರವನ್ನು ಬಾಹುಬಲಿ ನಿರ್ದೇಶನ ಮಾಡಿದ್ದಾರೆ. ಇನ್ನು ಎಂ.ಡಿ.ಶ್ರೀಧರ್‌, ಮೋಹನ್‌ ಹಾಗು ಛಾಯಾಗ್ರಾಹಕ ಕೃಷ್ಣಕುಮಾರ್‌ (ಕೆಕೆ) ನಿರ್ಮಾಣ ಮಾಡಿದ್ದಾರೆ. ಇವರೆಲ್ಲರ ಪ್ರೀತಿ, ಶ್ರದ್ಧೆಯಿಂದ ತಯಾರಾಗಿರುವ “ಎಂಆರ್‌ಪಿ’ ಚಿತ್ರತಂಡಕ್ಕೆ ದರ್ಶನ್‌ ಅವರು ಶನಿವಾರ (ಇಂದು) ಸಂಜೆ ತಮ್ಮ ಮನೆಯಲ್ಲೇ ಟೀಸರ್‌ ಬಿಡುಗಡೆ ಮಾಡಿ ಸಾಥ್‌ ಕೊಡುತ್ತಿದ್ದಾರೆ.

“ಎಂಆರ್‌ಪಿ’ ಅಂದರೆ, ಎಲ್ಲರಿಗೂ ಬಾರ್‌ ನೆನಪಾಗುತ್ತೆ. ಇಲ್ಲಿ “ಎಂಆರ್‌ಪಿ” ಅಂದರೆ ಮೋಸ್ಟ್‌ ರೆಸ್ಪಾನ್ಸಿಬಲ್‌ ಪರ್ಸನ್‌ ಎಂದರ್ಥ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ. ಅವರ ಬಾಡಿಗೆ ಅವರವರೇ ಜವಾಬ್ದಾರಿ ಆಗುತ್ತಾರೆ ವಿನಃ, ಬೇರೆ ಯಾರೂ ಆಗಲ್ಲ. ತಮ್ಮ ಬಾಡಿಯ ಜವಾಬ್ದಾರಿ ಏನೆಂಬುದು ಅವರಿಗಷ್ಟೇ ಗೊತ್ತಿರುತ್ತೆ. ಇಲ್ಲಿರುವ ಹೀರೋ ಕೂಡ ತುಂಬಾ ಜವಾಬ್ದಾರಿ ಇರುವ ವ್ಯಕ್ತಿ. ಅದು ಹೇಗೆ ಎಂಬುದನ್ನು ಕಾಮಿಡಿ ರೂಪದಲ್ಲಿ ತೋರಿಸಲಾಗಿದೆ ಎಂಬುದು ಚಿತ್ರತಂಡದ ಮಾತು.

ಚಿತ್ರಕ್ಕೆ ಹರ್ಷವರ್ಧನ್‌ ರಾಜ್‌ ಸಂಗೀತವಿದೆ. ಎಲ್‌.ಎಂ.ಸೂರಿ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್‌ ಸಂಕಲನವಿದೆ. ಚಿತ್ರದಲ್ಲಿ ವಿಜಯ್‌ ಚೆಂಡೂರ್‌ ಸೇರಿದಂತೆ ಹಲವು ಕಲಾವಿದರಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ, ನವೆಂಬರ್‌ನಲ್ಲಿ “ಎಂಆರ್‌ಪಿ’ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕ ಎಂ.ಡಿ.ಶ್ರೀಧರ್‌ ಅವರಿಗಿದೆ. ಆದರೆ, ದೊಡ್ಡ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿರುವುದರಿಂದ ಅವುಗಳ ಬಿಡುಗಡೆ ನೋಡಿಕೊಂಡು ಚಿತ್ರಮಂದಿರಕ್ಕೆ ಬರುವ ಕುರಿತು ಚರ್ಚಿಸುತ್ತಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.