ಇಂದು ದರ್ಶನ್‌ ಹುಟ್ಟುಹಬ್ಬ

ಸಂಭ್ರಮದ ಆಚರಣೆಗೆ ಅಭಿಮಾನಿಗಳು ಸಜ್ಜು

Team Udayavani, Feb 16, 2020, 7:01 AM IST

darshan

ಇಂದು ದರ್ಶನ್‌ ಅಭಿಮಾನಿಗಳ ಪಾಲಿಗೆ ಹಬ್ಬ. ಅದಕ್ಕೆ ಕಾರಣ ಏನೆಂದು ಹೊಸದಾಗಿ ಹೇಳುವ ಅಗತ್ಯವಿಲ್ಲ. ಹೌದು, ಇಂದು ದರ್ಶನ್‌ ಹುಟ್ಟುಹಬ್ಬ. ತಮ್ಮ ಪ್ರೀತಿಯ ಡಿ ಬಾಸ್‌ ಹುಟ್ಟುಹಬ್ಬವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಸಡಗರ. ಅದೇ ಕಾರಣದಿಂದ ದೂರದ ಊರುಗಳಿಂದಲೂ ಅಭಿಮಾನಿಗಳು ಬಂದು ದರ್ಶನ್‌ ಅವರಿಗೆ ಶುಭಾಶಯ ಕೋರುತ್ತಾರೆ. ದರ್ಶನ್‌ ಕೂಡಾ ಅಷ್ಟೇ ಫೆ.16 ರಂದು ಇಡೀ ದಿನ ತಮ್ಮ ಅಭಿಮಾನಿಗಳ ಜೊತೆ ಕಳೆಯುತ್ತಾರೆ.

ಒಂಥರಾ ಅಭಿಮಾನಿಗಳ ದಿನ ಎನ್ನಬಹುದು. ಈ ಬಾರಿಯೂ ದರ್ಶನ್‌ ಹುಟ್ಟುಹಬ್ಬ ಅದ್ಧೂರಿಯಾಗಿ ನಡೆಯುತ್ತಿದೆ. ಅದು ಅಭಿಮಾನಿಗಳ ಆಸೆ ಕೂಡಾ. ಆದರೆ, ದರ್ಶನ್‌ ಮಾತ್ರ ಹಾರ-ಕೇಕ್‌ ಬದಲು ದವಸ-ಧಾನ್ಯ ನೀಡಿ ಎಂದು ಕಳೆದ ಬಾರಿಯಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಆದರೆ, ಅಭಿಮಾನಿಗಳು ದವಸ-ಧಾನ್ಯಗಳ ಜೊತೆಗೆ ಕೇಕ್‌-ಹಾರವನ್ನು ತಂದು ತಮ್ಮ ಖುಷಿಯನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನು, ದರ್ಶನ್‌ ಹುಟ್ಟುಹಬ್ಬದ ಅಂಗವಾಗಿ ರಾಜ್ಯಾದ್ಯಂತ ಇರುವ ಅವರ ಅಭಿಮಾನಿ ಸಂಘಗಳು ರಕ್ತದಾನ, ಅನ್ನದಾನ ಸೇರಿದಂತೆ ಹಲವು ಸಮಾಜಮುಖೀ ಕಾರ್ಯಗಳನ್ನು ಹಮ್ಮಿಕೊಂಡಿವೆ. ಇದು ಅಭಿಮಾನಿಗಳ ಸಂಭ್ರಮವಾದರೆ, ಚಿತ್ರರಂಗದ ಮಂದಿ ಕೂಡಾ ದರ್ಶನ್‌ ಹುಟ್ಟುಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ದರ್ಶನ್‌ ಜೊತೆ ಸಿನಿಮಾ ಮಾಡಬೇಕೆಂದು ಕಾಯುವ ಸಿನಿಮಾ ಮಂದಿಯ ಸಂಖ್ಯೆಯೇನೂ ಕಮ್ಮಿಯಿಲ್ಲ.

ಈಗಾಗಲೇ ಅನೇಕರು ದರ್ಶನ್‌ ಜೊತೆ ಸಿನಿಮಾ ಮಾಡುವ ಕುರಿತು ಮಾತುಕತೆಯಾಡಿದ್ದು, ಅವರೆಲ್ಲ ಜಾಹೀರಾತು ಮೂಲಕ ತಮ್ಮ ಹೀರೋಗೆ ಶುಭ ಕೋರಿದ್ದಾರೆ. ಸಾಕಷ್ಟು ಸಿನಿಮಾಗಳು ಕೂಡಾ ಹುಟ್ಟುಹಬ್ಬ ಸಮಯದಲ್ಲಿ ಅನೌನ್ಸ್‌ ಆಗಿವೆ. ದರ್ಶನ್‌ ಕೂಡಾ ಒಂದರ ಹಿಂದೊಂದರಂತೆ ಸಿನಿಮಾಗಳನ್ನು ಮಾಡಲಿದ್ದಾರೆ. ಸದ್ಯ ದರ್ಶನ್‌ “ರಾಜವೀರ ಮದಕರಿ ನಾಯಕ’ ಚಿತ್ರೀಕರಣದಲ್ಲಿದ್ದಾರೆ. ಈಗ ಆ ಚಿತ್ರೀಕರಣದಿಂದ ಬ್ರೇಕ್‌ ಪಡೆದು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.

ರಾಬರ್ಟ್‌ ಟೀಸರ್‌: ದರ್ಶನ್‌ ನಾಯಕರಾಗಿರುವ “ರಾಬರ್ಟ್‌’ ಚಿತ್ರದ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು, ಏಪ್ರಿಲ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಂದು ದರ್ಶನ್‌ ಹುಟ್ಟುಹಬ್ಬ ಪ್ರಯುಕ್ತ ಚಿತ್ರದ ಟೀಸರ್‌ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.