“ಮುಂದಿನ ನಿಲ್ದಾಣ’ದಲ್ಲಿ ದತ್ತಣ್ಣ ಯಂಗ್‌ಲುಕ್‌

ಟ್ರೆಂಡಿ ಕಾಸ್ಟ್ಯೂಮ್‌ ಧರಿಸಿ ನಟನೆ

Team Udayavani, Aug 31, 2019, 3:03 AM IST

dattanna

ಹಿರಿಯ ಕಲಾವಿದ ದತ್ತಣ್ಣ ಅಂದಾಕ್ಷಣ, ಜುಬ್ಬಾ ಪೈಜಾಮದಲ್ಲಿ ತಂದೆಯಾಗಿಯೋ, ತಾತನಾಗಿಯೋ ಅಥವಾ ಅಂಕಲ್‌ ಆಗಿ ನೆನಪಾಗುವ ಅಪರೂಪದ ನಟ. ತಮ್ಮ ಅಭಿನಯಕ್ಕೆ ರಾಷ್ಟ್ರಶಸ್ತಿಗಳನ್ನು ಪಡೆದ ದತ್ತಣ್ಣ, ಇದುವರೆಗೆ ತರಹೇವಾರಿ ಪಾತ್ರ ನಿರ್ವಹಿಸಿದ್ದಾರೆ. ಇತ್ತೀಚೆಗೆ ಬಾಲಿವುಡ್‌ನ‌ “ಮಿಷನ್‌ ಮಂಗಲ್‌’ ಚಿತ್ರದಲ್ಲೂ ನಟಿಸಿ ಎಲ್ಲರ ಗಮನಸೆಳೆದಿದ್ದಾರೆ. ಅಷ್ಟಕ್ಕೂ ಅವರ ಬಗ್ಗೆ ಇಷ್ಟೊಂದು ಪೀಠಿಕೆ ಯಾಕೆಂದರೆ, ಅವರೀಗ ಚಿತ್ರವೊಂದರಲ್ಲಿ ಯಂಗ್‌ಲುಕ್‌ನಲ್ಲಿ ಮಿಂಚಿದ್ದಾರೆ.

ಹೌದು, ಈಗ ಬಿಡುಗಡೆಗೆ ಸಿದ್ಧಗೊಳ್ಳುತ್ತಿರುವ “ಮುಂದಿನ ನಿಲ್ದಾಣ’ ಚಿತ್ರದಲ್ಲಿ ಅವರು ಎನರ್ಜಿ ಇರುವಂತಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದೊಂದು ವಿಭಿನ್ನ ಪಾತ್ರವಾಗಿದ್ದು, ಈಗಿನ ಟ್ರೆಂಡಿ ಕಾಸ್ಟ್ಯೂಮ್‌ ಮೂಲಕ ಸಿನಿಮಾದ ಹೈಲೈಟ್‌ ಆಗಿದ್ದಾರೆ. ಇತ್ತೀಚೆಗೆ ಅವರ ಯಂಗ್‌ಲುಕ್‌ನಲ್ಲಿರುವ ಪೋಸ್ಟರ್‌ವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ನಿರ್ದೇಶಕ ವಿನಯ್‌ ಭಾರಧ್ವಾಜ್‌ ಅವರು, ದತ್ತಣ್ಣ ಅವರಿಗೊಂದು ವಿಶೇಷ ಪಾತ್ರ ಹೆಣೆದಿದ್ದು, ಚಿತ್ರದಲ್ಲಿ ಅವರು ನಾಯಕನಿಗೆ ಮಾರ್ಗದರ್ಶನ ನೀಡುವ ಪಾತ್ರ ನಿರ್ವಹಿಸಿದ್ದಾರೆ.

ಈಗಿನ ಕಾಲದ ತುಂಬಾ ಕೂಲ್‌ ವ್ಯಕ್ತಿಯಾಗಿ ದತ್ತಣ್ಣ ತೆರೆಯ ಮೇಲೆ ಕಚಗುಳಿ ಇಡಲಿದ್ದಾರೆ ಎಂಬುದು ನಿರ್ದೇಶಕರ ಮಾತು. ದತ್ತಣ್ಣ ಅವರಿಗೂ “ಮುಂದಿನ ನಿಲ್ದಾಣ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅದಕ್ಕೆ ಕಾರಣ, ಅವರು, ನಟಿಸಿರುವ ಬಹುತೇಕ ಚಿತ್ರಗಳ ಪೈಕಿ, ಶೇ.30 ರಷ್ಟು ಯುವ ನಿರ್ದೇಶಕರ ಚಿತ್ರಗಳಲ್ಲಿ ನಟಿಸಿದ್ದಾರೆ. ಆ ಬಗ್ಗೆ ಹೇಳುವ ಅವರು, “ಹೊಸಬರ ಚಿತ್ರದಲ್ಲಿ ವಿಷಯದ ಜೊತೆಗೆ ಸಾಕಷ್ಟು ಕಲಿಯುವ ಅವಕಾಶವೂ ಸಿಕ್ಕಿದೆ.

ಚಿತ್ರದ ಪಾತ್ರ ಒಂದು ರೀತಿ ಸದಾ ಮಜ ಕೊಡುವಂತಹ ಪಾತ್ರವಾಗಿದ್ದು, ಇಲ್ಲಿಯವರೆಗೆ ಸಿಕ್ಕ ಪಾತ್ರಗಳಲಿ ಜುಬ್ಬಾ-ಪೈಜಾಮ ಹಾಕಿ ಕ್ಯಾಮೆರಾ ಮುಂದೆ ನಿಲ್ಲಿಸುವ ನಿರ್ದೇಶಕರ ನಡುವೆ, ವಿನಯ್‌ ಅವರು ಮಾಡ್ರನ್‌ ಕಾಸ್ಟ್ಯೂಮ್‌ ಹಾಕಿಸಿ, ಯಂಗ್‌ ಲುಕ್‌ ಕೊಟ್ಟಿದ್ದಾರೆ. ನಿರ್ದೇಶಕರು ಹಲವು ದೇಶ ಸುತ್ತಿರುವುದರಿಂದ, ಅವರಿಗೆ, ಪಾತ್ರಗಳ ಕಲ್ಪನೆಯ ಹಿಡಿತವಿದೆ. ಹಾಗಾಗಿ, ಈ ಚಿತ್ರದ ಪ್ರತಿ ಪಾತ್ರದಲ್ಲೂ ವಿಶೇಷತೆ ಇದೆ. ಇಲ್ಲಿ ಮಜವೂ ಇದೆ, ಒಳ್ಳೆಯ ಸಂದೇಶವೂ ಇದೆ’ ಎಂಬುದು ಅವರ ಮಾತು.

ಚಿತ್ರದಲ್ಲಿ “ಚೂರಿಕಟ್ಟೆ’ ಪ್ರವೀಣ್‌ತೇಜ್‌, ಅನನ್ಯ ಕಶ್ಯಪ್‌, ರಾಧಿಕಾ ನಾರಾಯಣ್‌ ಸೇರಿದಂತೆ ಇತರೆ ಕಲಾವಿದರು ನಟಿಸಿದ್ದಾರೆ. ಈಗಾಗಲೇ ಮೊದಲ ಪೋಸ್ಟರ್‌ ಮತ್ತು ಟೀಸರ್‌ನಲ್ಲಿ ಗಮನಸೆಳೆದ ಚಿತ್ರದ ಏಳು ಹಾಡುಗಳಿರುವ ಆಡಿಯೋ ಹಕ್ಕನ್ನು ಪಿಆರ್‌ಕೆ ಸಂಸ್ಥೆ ಪಡೆದಿದೆ. ಇಷ್ಟರಲ್ಲೇ ಆಡಿಯೋ ಬಿಡುಗಡೆ ಮಾಡುವ ಸಿದ್ಧತೆಯಲ್ಲಿ ಚಿತ್ರತಂಡವಿದೆ. ಇದು ಕೋಸ್ಟಲ್‌ ಬ್ರಿಡ್ಜ್ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣಗೊಂಡಿದೆ.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

eltu mutta kannada movie

Eltu Mutta Movie; ಸಾವಿನ ಮನೆಯಲ್ಲಿ ಡೋಲು ಬಡಿಯುವವರ ಕಥೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.