ರಂಗನಾಯಕಿ ಹಿಂದೆ ದಯಾಳ್‌

ಅದಿತಿ ಕೈಯಲ್ಲಿ ಮತ್ತೊಂದು ಸಿನಿಮಾ

Team Udayavani, Mar 31, 2019, 11:30 AM IST

aditi

ನಿರ್ದೇಶಕ ದಯಾಳ್‌ ಪದ್ಮನಾಭ್‌, ಈಗ “ತ್ರಯಂಬಕಂ’ ಚಿತ್ರ ಬಿಡುಗಡೆ ತಯಾರಿಯಲ್ಲಿದ್ದಾರೆ. ಏಪ್ರಿಲ್‌ 19 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಈಗಾಗಲೇ ಹೇಳಿಕೊಂಡಿದ್ದಾರೆ. ಆ ಚಿತ್ರ ಬಿಡುಗಡೆ ಮುನ್ನವೇ ಮತ್ತೊಂದು ಚಿತ್ರ ನಿರ್ದೇಶನ ಮಾಡುವ ಬಗ್ಗೆ ಘೋಷಿಸಿದ್ದಾರೆ ದಯಾಳ್‌.

ಅಂದಹಾಗೆ, ಈ ಬಾರಿ ಅವರು “ರಂಗನಾಯಕಿ’ ಹೆಸರಿನ ಚಿತ್ರಕ್ಕೆ ಕೈ ಹಾಕಿದ್ದಾರೆ ಎಂಬುದೇ ವಿಶೇಷ. “ರಂಗನಾಯಕಿ’ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಪುಟ್ಟಣ್ಣ ಕಣಗಾಲ್‌ ನಿರ್ದೇಶನದ ಎವರ್‌ಗ್ರೀನ್‌ ಚಿತ್ರ “ರಂಗನಾಯಕಿ’. ಹಾಗಂತ, ಆ ಚಿತ್ರಕ್ಕೂ ದಯಾಳ್‌ ನಿರ್ದೇಶಿಸುತ್ತಿರುವ “ರಂಗನಾಯಕಿ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ.

“ರಂಗನಾಯಕಿ’ ಹೆಸರಲ್ಲೇ ಒಂದು ಫೋರ್ಸ್‌ ಇದೆ. ಆ ಫೋರ್ಸ್‌ ದಯಾಳ್‌ ಅವರ “ರಂಗನಾಯಕಿ’ ಚಿತ್ರದಲ್ಲೂ ಇರಲಿದೆ ಎಂಬುದು ಅವರ ಮಾತು. ಹಾಗಾದರೆ ಈ ಚಿತ್ರದ “ರಂಗನಾಯಕಿ’ ಯಾರು? ಎಂಬ ಪ್ರಶ್ನೆಗೆ ನಟಿ ಅದಿತಿ ಪ್ರಭುದೇವ ಉತ್ತರ. ಹೌದು, ಅದಿತಿ ಇಲ್ಲಿ ನಾಯಕಿಯಾಗಿ ಕಾಣಸಿಕೊಳ್ಳುತ್ತಿದ್ದಾರೆ.

ನಾಯಕರಾಗಿ “ಬೀರ್‌ಬಲ್‌’ ಶ್ರೀನಿ ನಟಿಸುತ್ತಿದ್ದಾರೆ. ಇವರೊಂದಿಗೆ “ಪದ್ಮಾವತಿ’ ಧಾರಾವಾಹಿ ನಾಯಕ ತ್ರಿವಿಕ್ರಮ್‌ ಕೂಡ ನಟಿಸುತ್ತಿದ್ದಾರೆ. ಸದ್ಯಕ್ಕೆ ಈ ಮೂವರು ಪಕ್ಕಾ ಆಗಿದ್ದು, ಇಷ್ಟರಲ್ಲೇ ಇನ್ನುಳಿದ ಕಲಾವಿದರು ಸೇರಿಕೊಳ್ಳಲಿದ್ದಾರೆ ಎಂಬುದು ನಿರ್ದೇಶಕರ ಹೇಳಿಕೆ.

ಏಪ್ರಿಲ್‌ 29 ಕ್ಕೆ “ರಂಗನಾಯಕಿ’ ಚಿತ್ರಕ್ಕೆ ಚಾಲನೆ ಸಿಗಲಿದೆ. “ರಂಗನಾಯಕಿ’ ಕುರಿತು ಹೇಳಿಕೊಳ್ಳುವ ನಿರ್ದೇಶಕ ದಯಾಳ್‌, ಇದೊಂದು ರೇರ್‌ ಸ್ಟೋರಿ ಹೊಂದಿರುವ ಕಥೆ. ಒಂದು ಜರ್ನಿಯಲ್ಲೇ ಎಲ್ಲವನ್ನೂ ಹೇಳುವಂತಹ ಚಿತ್ರ.

ನಾಯಕಿಯದ್ದೇ ಇಲ್ಲಿ ಪ್ರಮುಖ ಅಂಶ. ಒಂದು ಘಟನೆಯಲ್ಲಿ ಸಿಲುಕಿಕೊಳ್ಳುವ ಆಕೆ, ಸಮಾಜವನ್ನು ಹೇಗೆ ಎದುರಿಸುತ್ತಾಳೆ, ಹೋರಾಡುತ್ತಾಳೆ ಮತ್ತು ಬದುಕುತ್ತಾಳೆ ಅನ್ನೋದು ಕಥೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ನವೀನ್‌ಕೃಷ್ಣ ಅವರು ಸಂಭಾಷಣೆ ಬರೆದಿದ್ದಾರೆ.

ಸುಮಾರು 25 ದಿನಗಳ ಕಾಲ ಶೇ.99 ರಷ್ಟು ಬೆಂಗಳೂರಲ್ಲೇ ಚಿತ್ರೀಕರಣಗೊಳ್ಳಲಿದೆ. ಸಿನಿಮಾದಲ್ಲಿ ನಾಯಕಿಯ ಪಾತ್ರ ಬೋಲ್ಡ್‌ ಆಗಿರಲಿದೆ. ತುಂಬಾ ವಿಭಿನ್ನ ಪಾತ್ರವಾಗಿದ್ದು, ಎಲ್ಲರಿಗೂ ಇಷ್ಟವಾಗುವಂತಹ ಚಿತ್ರ ಕೊಡುವ ಪ್ರಯತ್ನ ಮಾಡುತ್ತಿದ್ದೇನೆ. ಮಣಿಕಾಂತ್‌ ಕದ್ರಿ ಸಂಗೀತವಿದೆ. ರಾಕೇಶ್‌ ಛಾಯಾಗ್ರಹಣವಿದೆ. ಸುನೀಲ್‌ ಸಂಕಲನವಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.