ಚೊಚ್ಚಲ ತೆಲುಗು ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ: ವಿಶೇಷ ಪಾತ್ರದಲ್ಲಿ ದಿಯಾ ಖ್ಯಾತಿ ನಟ
Team Udayavani, Jun 10, 2021, 2:15 PM IST
“ದಿಯಾ’ ಸಿನಿಮಾ ಮೂಲಕ ಚಂದನವನದಲ್ಲಿ ಮೋಡಿ ಮಾಡಿದ್ದ ಕಿರುತೆರೆ ನಟ ದೀಕ್ಷಿತ್ ಶೆಟ್ಟಿ, ಇದೀಗ ಮತ್ತೂಂದು ವಿಶೇಷ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಅದರ ಹೆಸರು “ಆಣಿ ಮುತ್ತುಗಳು’.
ಹೌದು, ಮೂಲ ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದ್ದು, ಟಾಲಿವುಡ್ನ ಮೊದಲ ಪ್ರಾಜೆಕ್ಟ್ನಲ್ಲಿ ವಿಶೇಷವಾದ ಪಾತ್ರವನ್ನು ನಿರ್ವಹಿಸಿದ್ದಾರೆ ದೀಕ್ಷಿತ್.
“ಚಿತ್ರಮಂದಿರ ಸ್ಟುಡಿಯೋಸ್’ ಬ್ಯಾನರ್ನಲ್ಲಿ ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿರುವ “ಆಣಿ ಮುತ್ತುಗಳು’ ಚಿತ್ರವನ್ನು ಅಭಿಷೇಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರ ಸಾಗಲಿದ್ದು, ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್ ರಾವ್ ನಟಿಸಿದ್ದಾರೆ.
ಇದನ್ನೂ ಓದಿ:ಸುಶಾಂತ್ ರಜಪೂತ್ ಸಾವಿನ ಕಥೆ; ಸಿನಿಮಾ ಬಿಡುಗಡೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ
ಕಾಮಿಡಿ ಜತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥೆಯೂ ಈ ಚಿತ್ರದಲ್ಲಿದೆ. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಪ್ರೇಮ ಕಹಾನಿಯೂ ಸಿನಿಮಾದಲ್ಲಿದೆ. ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣ ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.
ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಜಾ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಚಿತ್ರತಂಡ ಸಿನಿಮಾದ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಇನ್ನೇನು ಲಾಕ್ ಡೌನ್ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆ ಸಿನಿಮಾವನ್ನು ಕನ್ನಡ ಮತ್ತು ತೆಲುಗಿನಲ್ಲಿ ತೆರೆಗೆ ತರಲು ಯೋಚನೆ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!