ದೇವಕಿಗೆ ಬೆಂಗಾಲಿ ಮಾತು

ಬೆಂಗಾಲಿ ರಂಗಭೂಮಿ ಕಲಾವಿದರಿಂದ ಡಬ್ಬಿಂಗ್‌

Team Udayavani, May 22, 2019, 1:58 PM IST

Devaki-Bengali-Dubbing-(2)

ಪ್ರಿಯಾಂಕ ಅಭಿನಯದ “ದೇವಕಿ’ ಚಿತ್ರ ಬಹುತೇಕ ಪೂರ್ಣಗೊಂಡಿದ್ದು, ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. “ದೇವಕಿ’ ಬಹುತೇಕ ಕೊಲ್ಕತ್ತಾದಲ್ಲೇ ಚಿತ್ರೀಕರಣಗೊಂಡಿದೆ. ಹಾಗಾಗಿ, ಅಲ್ಲಿನ ಸ್ಥಳೀಯ ಬೆಂಗಾಲಿ ಭಾಷೆಗೂ ಪ್ರಮುಖ ಆದ್ಯತೆ ನೀಡಿರುವುದು ವಿಶೇಷ. ಹೌದು, ಚಿತ್ರದಲ್ಲಿ ಬೆಂಗಾಲಿ, ಇಂಗ್ಲೀಷ್‌, ಹಿಂದಿ ಭಾಷೆಯನ್ನೂ ಕೇಳಬಹುದು.

ಅಂತಹ ಹೊಸ ಪ್ರಯತ್ನ ಈ ಚಿತ್ರದಲ್ಲಾಗಿದೆ. ಸಿನಿಮಾ ನೋಡುವ ಪ್ರೇಕ್ಷಕರಿಗೆ ನೈಜ ಅನುಭವ ಕಟ್ಟಿಕೊಡುವ ಉದ್ದೇಶದಿಂದಲೇ, ಬೆಂಗಾಲಿ ಭಾಷೆಯನ್ನು ಇಲ್ಲಿ ಬಳಸಿಕೊಳ್ಳಲಾಗಿದೆ. ಅಂದಹಾಗೆ, ಚಿತ್ರದಲ್ಲಿ ಸುಮಾರು 300 ಕ್ಕೂ ಹೆಚ್ಚು ಜೂನಿಯರ್ ಕೆಲಸ ಮಾಡಿದ್ದಾರೆ. ಅದರಲ್ಲೂ ಶೇ.40 ರಷ್ಟು ಮಂದಿ ಬೆಂಗಾಲಿ ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿರುವುದು ಹೈಲೈಟ್‌. ಇತ್ತೀಚೆಗೆ ಚಿತ್ರದಲ್ಲಿ ಕಾಣಸಿಗುವ ಬೆಂಗಾಲಿ ಪಾತ್ರಗಳಿಗೆ ಬೆಂಗಾಲಿ ಭಾಷೆಯಲ್ಲೇ ಡಬ್ಬಿಂಗ್‌ ಮಾಡಿಸಿರುವುದು ವಿಶೇಷ.

ನಿರ್ದೇಶಕ ಲೋಹಿತ್‌ ಅವರು, ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಕೊಲ್ಕತ್ತಾದಿಂದ ಸುಮಾರು 10 ಮಂದಿ ಬೆಂಗಾಲಿ ಕಲಾವಿದರನ್ನು ಕರೆಯಿಸಿ, ಕೆಲ ಪಾತ್ರಗಳಿಗೆ ಡಬ್‌ ಮಾಡಿಸಿದ್ದಾರೆ. ಶೇ.20 ರಷ್ಟು ಭಾಗ ಬೆಂಗಾಲಿ ಡೈಲಾಗ್‌ಗಳೇ ಇಲ್ಲಿರುವುದರಿಂದ, ನೈಜತೆ ತುಂಬಿರಬೇಕು ಎಂಬ ಕಾರಣಕ್ಕೆ ಬೆಂಗಾಲಿ ಸಂಭಾಷಣೆಗೆ ಡಬ್ಬಿಂಗ್‌ ಮಾಡಿಸಲಾಗಿದೆ ಎಂದು ವಿವರ ಕೊಡುವ ನಿರ್ದೇಶಕ ಲೋಹಿತ್‌, ಬೆಂಗಾಲಿ ಚಿತ್ರಗಳ ಬರಹಗಾರ ಗೋವಿಂದ್‌ ಫಿಲ್‌ ಎಂಬುವವರು ಬರೆದಿರುವ ಸಂಭಾಷಣೆಗೆ, ಬೆಂಗಾಲಿ ಕಲಾವಿದರು ಡಬ್ಬಿಂಗ್‌ ಮಾಡಿದ್ದಾರೆ.

ಇನ್ನು “ದೇವಕಿ’ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಪ್ರಿಯಾಂಕ ಉಪೇಂದ್ರ ಅವರ ಪುತ್ರಿ ಐಶ್ವರ್ಯಾ ನಟಿಸಿದ್ದಾರೆ. ಇಡೀ ಚಿತ್ರ ಪ್ರಿಯಾಂಕ ಅವರ ತವರೂರಾದ ಕೊಲ್ಕತ್ತಾದಲ್ಲೇ 32 ದಿನಗಳ ಕಾಲ ಚಿತ್ರೀಕರಣವಾಗಿದೆ. ಇದು ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿದೆ. ಅದರಲ್ಲೂ ನಾರ್ತ್‌ ಕೊಲ್ಕತ್ತಾದಲ್ಲಿ ಬಹುತೇಕ ಚಿತ್ರೀಕರಣ ಮಾಡಿರುವುದು ಈ ಚಿತ್ರದ ಮತ್ತೂಂದು ವಿಶೇಷ. ಸೌತ್‌ ಪಾರ್ಕ್‌ ಸಿಮೆಟ್ರಿಯಲ್ಲಿ ಚಿತ್ರೀಕರಿಸಿರುವುದು ಹೆಚ್ಚುಗಾರಿಕೆ. ಈ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ ಅವರು ಎನ್‌ಜಿಓ ಪಾತ್ರ ನಿರ್ವಹಿಸುತ್ತಿದ್ದು, ಕೆಲ ಸ್ಟುಡೆಂಟ್ಸ್‌ಗೆ ಪಾಠ ಹೇಳಿಕೊಡುವ ಮೇಡಮ್‌ ಆಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ನಾಯಕಿಯದ್ದು ಸಾಕಷ್ಟು ಸಮಸ್ಯೆ ಎದುರಿಸುವ ಪಾತ್ರವಾಗಿದ್ದು, ರಾತ್ರಿ ವೇಳೆ ಹೆಚ್ಚು ಶೂಟಿಂಗ್‌ ನಡೆಸಲಾಗಿದೆ. ತನ್ನ ಮಗಳನ್ನು ಕಳೆದುಕೊಂಡ ತಾಯಿ ಹೇಗೆಲ್ಲಾ ಅವಳನ್ನು ಹುಡುಕಾಡುತ್ತಾಳೆ ಎಂಬುದು ಕಥೆ. ಉಳಿದಂತೆ ಚಿತ್ರದಲ್ಲಿ ಕಿಶೋರ್‌ ಇಲ್ಲಿ ಕೊಲ್ಕತ್ತಾ ಕಾಪ್‌ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ವೇಣು ಛಾಯಾಗ್ರಹಣವಿದೆ. ನೊಬಿನ್‌ ಪಾಲ್‌ ಸಂಗೀತವಿದೆ. ರವಿಚಂದ್ರ ಅವರ ಸಂಕಲನವಿದೆ. ರವಿವರ್ಮ ಸಾಹಸ ಮಾಡಿದ್ದಾರೆ. ಚಿತ್ರವನ್ನು ರವೀಶ್‌ ಮತ್ತು ಅಕ್ಷಯ್‌ ನಿರ್ಮಾಣ ಮಾಡಿದ್ದಾರೆ. ಗುರುಪ್ರಸಾದ್‌ ಅವರ ಸಂಭಾಷಣೆ ಚಿತ್ರಕ್ಕಿದೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.