ದೇವಕಿಗೆ ಬೆಂಗಾಲಿ ಮಾತು

ಬೆಂಗಾಲಿ ರಂಗಭೂಮಿ ಕಲಾವಿದರಿಂದ ಡಬ್ಬಿಂಗ್‌

Team Udayavani, May 22, 2019, 1:58 PM IST

Devaki-Bengali-Dubbing-(2)

ಪ್ರಿಯಾಂಕ ಅಭಿನಯದ “ದೇವಕಿ’ ಚಿತ್ರ ಬಹುತೇಕ ಪೂರ್ಣಗೊಂಡಿದ್ದು, ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. “ದೇವಕಿ’ ಬಹುತೇಕ ಕೊಲ್ಕತ್ತಾದಲ್ಲೇ ಚಿತ್ರೀಕರಣಗೊಂಡಿದೆ. ಹಾಗಾಗಿ, ಅಲ್ಲಿನ ಸ್ಥಳೀಯ ಬೆಂಗಾಲಿ ಭಾಷೆಗೂ ಪ್ರಮುಖ ಆದ್ಯತೆ ನೀಡಿರುವುದು ವಿಶೇಷ. ಹೌದು, ಚಿತ್ರದಲ್ಲಿ ಬೆಂಗಾಲಿ, ಇಂಗ್ಲೀಷ್‌, ಹಿಂದಿ ಭಾಷೆಯನ್ನೂ ಕೇಳಬಹುದು.

ಅಂತಹ ಹೊಸ ಪ್ರಯತ್ನ ಈ ಚಿತ್ರದಲ್ಲಾಗಿದೆ. ಸಿನಿಮಾ ನೋಡುವ ಪ್ರೇಕ್ಷಕರಿಗೆ ನೈಜ ಅನುಭವ ಕಟ್ಟಿಕೊಡುವ ಉದ್ದೇಶದಿಂದಲೇ, ಬೆಂಗಾಲಿ ಭಾಷೆಯನ್ನು ಇಲ್ಲಿ ಬಳಸಿಕೊಳ್ಳಲಾಗಿದೆ. ಅಂದಹಾಗೆ, ಚಿತ್ರದಲ್ಲಿ ಸುಮಾರು 300 ಕ್ಕೂ ಹೆಚ್ಚು ಜೂನಿಯರ್ ಕೆಲಸ ಮಾಡಿದ್ದಾರೆ. ಅದರಲ್ಲೂ ಶೇ.40 ರಷ್ಟು ಮಂದಿ ಬೆಂಗಾಲಿ ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿರುವುದು ಹೈಲೈಟ್‌. ಇತ್ತೀಚೆಗೆ ಚಿತ್ರದಲ್ಲಿ ಕಾಣಸಿಗುವ ಬೆಂಗಾಲಿ ಪಾತ್ರಗಳಿಗೆ ಬೆಂಗಾಲಿ ಭಾಷೆಯಲ್ಲೇ ಡಬ್ಬಿಂಗ್‌ ಮಾಡಿಸಿರುವುದು ವಿಶೇಷ.

ನಿರ್ದೇಶಕ ಲೋಹಿತ್‌ ಅವರು, ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಕೊಲ್ಕತ್ತಾದಿಂದ ಸುಮಾರು 10 ಮಂದಿ ಬೆಂಗಾಲಿ ಕಲಾವಿದರನ್ನು ಕರೆಯಿಸಿ, ಕೆಲ ಪಾತ್ರಗಳಿಗೆ ಡಬ್‌ ಮಾಡಿಸಿದ್ದಾರೆ. ಶೇ.20 ರಷ್ಟು ಭಾಗ ಬೆಂಗಾಲಿ ಡೈಲಾಗ್‌ಗಳೇ ಇಲ್ಲಿರುವುದರಿಂದ, ನೈಜತೆ ತುಂಬಿರಬೇಕು ಎಂಬ ಕಾರಣಕ್ಕೆ ಬೆಂಗಾಲಿ ಸಂಭಾಷಣೆಗೆ ಡಬ್ಬಿಂಗ್‌ ಮಾಡಿಸಲಾಗಿದೆ ಎಂದು ವಿವರ ಕೊಡುವ ನಿರ್ದೇಶಕ ಲೋಹಿತ್‌, ಬೆಂಗಾಲಿ ಚಿತ್ರಗಳ ಬರಹಗಾರ ಗೋವಿಂದ್‌ ಫಿಲ್‌ ಎಂಬುವವರು ಬರೆದಿರುವ ಸಂಭಾಷಣೆಗೆ, ಬೆಂಗಾಲಿ ಕಲಾವಿದರು ಡಬ್ಬಿಂಗ್‌ ಮಾಡಿದ್ದಾರೆ.

ಇನ್ನು “ದೇವಕಿ’ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಪ್ರಿಯಾಂಕ ಉಪೇಂದ್ರ ಅವರ ಪುತ್ರಿ ಐಶ್ವರ್ಯಾ ನಟಿಸಿದ್ದಾರೆ. ಇಡೀ ಚಿತ್ರ ಪ್ರಿಯಾಂಕ ಅವರ ತವರೂರಾದ ಕೊಲ್ಕತ್ತಾದಲ್ಲೇ 32 ದಿನಗಳ ಕಾಲ ಚಿತ್ರೀಕರಣವಾಗಿದೆ. ಇದು ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿದೆ. ಅದರಲ್ಲೂ ನಾರ್ತ್‌ ಕೊಲ್ಕತ್ತಾದಲ್ಲಿ ಬಹುತೇಕ ಚಿತ್ರೀಕರಣ ಮಾಡಿರುವುದು ಈ ಚಿತ್ರದ ಮತ್ತೂಂದು ವಿಶೇಷ. ಸೌತ್‌ ಪಾರ್ಕ್‌ ಸಿಮೆಟ್ರಿಯಲ್ಲಿ ಚಿತ್ರೀಕರಿಸಿರುವುದು ಹೆಚ್ಚುಗಾರಿಕೆ. ಈ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ ಅವರು ಎನ್‌ಜಿಓ ಪಾತ್ರ ನಿರ್ವಹಿಸುತ್ತಿದ್ದು, ಕೆಲ ಸ್ಟುಡೆಂಟ್ಸ್‌ಗೆ ಪಾಠ ಹೇಳಿಕೊಡುವ ಮೇಡಮ್‌ ಆಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ನಾಯಕಿಯದ್ದು ಸಾಕಷ್ಟು ಸಮಸ್ಯೆ ಎದುರಿಸುವ ಪಾತ್ರವಾಗಿದ್ದು, ರಾತ್ರಿ ವೇಳೆ ಹೆಚ್ಚು ಶೂಟಿಂಗ್‌ ನಡೆಸಲಾಗಿದೆ. ತನ್ನ ಮಗಳನ್ನು ಕಳೆದುಕೊಂಡ ತಾಯಿ ಹೇಗೆಲ್ಲಾ ಅವಳನ್ನು ಹುಡುಕಾಡುತ್ತಾಳೆ ಎಂಬುದು ಕಥೆ. ಉಳಿದಂತೆ ಚಿತ್ರದಲ್ಲಿ ಕಿಶೋರ್‌ ಇಲ್ಲಿ ಕೊಲ್ಕತ್ತಾ ಕಾಪ್‌ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ವೇಣು ಛಾಯಾಗ್ರಹಣವಿದೆ. ನೊಬಿನ್‌ ಪಾಲ್‌ ಸಂಗೀತವಿದೆ. ರವಿಚಂದ್ರ ಅವರ ಸಂಕಲನವಿದೆ. ರವಿವರ್ಮ ಸಾಹಸ ಮಾಡಿದ್ದಾರೆ. ಚಿತ್ರವನ್ನು ರವೀಶ್‌ ಮತ್ತು ಅಕ್ಷಯ್‌ ನಿರ್ಮಾಣ ಮಾಡಿದ್ದಾರೆ. ಗುರುಪ್ರಸಾದ್‌ ಅವರ ಸಂಭಾಷಣೆ ಚಿತ್ರಕ್ಕಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.