ದೇವರಾಜ್ ಬಿಝಿಯಾಗಿದ್ದಾರೆ!
Team Udayavani, Sep 15, 2017, 6:13 PM IST
“ನೀವು ಕರೆ ಮಾಡಿರುವ ಚಂದಾದಾರು ಬಿಝಿಯಾಗಿದ್ದಾರೆ’ ಎಂಬ ಚಿತ್ರದ ಬಗ್ಗೆ ಓದಿದ ನೆನಪಿರಬೇಕು. ಅದೇ “ತಿಥಿ’ ಖ್ಯಾತಿಯ ಪೂಜಾ ನಟಿಸುತ್ತಿರುವ ಹೊಸ ಚಿತ್ರ ಅದು. ಈ ಚಿತ್ರವನ್ನು “ದೂಧ್ ಸಾಗರ್’ ನಿರ್ದೇಶಿಸಿದ್ದ ಸ್ಯಾಮ್ಯುಯಲ್ ನಿರ್ದೇಶಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಇನ್ನಷ್ಟು ಬೆಳವಣಿಗೆಗಳಾಗಿದ್ದು, ಮುಂದಿನ ತಿಂಗಳ 10ರಂದು ಚಿತ್ರ ಪ್ರಾರಂಭವಾಗಲಿದೆ.
ಪ್ರಮುಖವಾಗಿ ಈ ಚಿತ್ರಕ್ಕೆ ದೇವರಾಜ್, ಶೃತಿ, ತಾರಾರಂತಹ ಹಿರಿಯರ ಆಗಮನವಾಗಿದೆ. ಈ ಮೂವರೂ ಚಿತ್ರದ ಕಥೆ ಕೇಳಿ ಒಪ್ಪಿಕೊಂಡು, ಚಿತ್ರದ ಭಾಗವಾಗುವುದಕ್ಕೆ ಸಮ್ಮತಿ ನೀಡಿದ್ದಾರೆ. ಇನ್ನು ಇವರೆಲ್ಲರ ಜೊತೆಗೆ ಶೀತಲ್ ಶೆಟ್ಟಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಮನೋಜ್ ಜಾರ್ಜ್ ಅವರ ಸಂಗೀತ, ಸುಬ್ಬಯ್ಯ ಕುಟ್ಟಪ್ಪ ಅವರ ಛಾಯಾಗ್ರಹಣವಿದೆ.
ಈ ಚಿತ್ರದಲ್ಲಿ ದೇವರಾಜ್ ಅವರದ್ದು ವಿಭಿನ್ನವಾದ ಪಾತ್ರವಾಗಿದ್ದು, ಹಿಂದೆಂದು ನೋಡಿರದ ಗೆಟ್ಟಪ್ಪಿನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರಂತೆ. ಅದಕ್ಕೆ ಸರಿಯಾಗಿ, ಅವರು ಈಗಾಗಲೇ ತಯಾರಿ ಶುರು ಮಾಡಿದ್ದಾರೆ. ಮನುಷ್ಯ ಸಂಬಂಧಗಳು ಸಡಿಲವಾದರೆ ಅದನ್ನು ಮತ್ತೆ ಸರಿಯಾಗಿಸೋದು ಎಷ್ಟು ಕಷ್ಟ ಎಂದು ಹೇಳುವ ಈ ಚಿತ್ರಕ್ಕೆ ಬೆಂಗಳೂರು, ಗೋವಾ, ಕೇರಳ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಈ ಚಿತ್ರವನ್ನು ಮಧುಸೂಧನ್, ತಮ್ಮ ಗೆಳೆಯರೊಂದಿಗೆ ಸೇರಿ ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ