ಸಲಗದಲ್ಲಿ ಬದಲಾಯ್ತು ಧನಂಜಯ್‌ ಗೆಟಪ್‌


Team Udayavani, Jul 29, 2019, 3:14 PM IST

Salaga-Dhananjay-(3)

ಶಿವರಾಜಕುಮಾರ್‌ ಅಭಿನಯದ “ಟಗರು’ ಮೂಲಕ “ಡಾಲಿ’ ಧನಂಜಯ್‌ ಎಂದೇ ಕರೆಸಿಕೊಳ್ಳುತ್ತಿರುವ ಧನಂಜಯ್‌, “ದುನಿಯಾ’ ವಿಜಯ್‌ ನಿರ್ದೇಶನದ “ಸಲಗ’ ಚಿತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈಗಾಗಲೇ “ಸಲಗ’ ಸಾಕಷ್ಟು ಕುತೂಹಲ ಕೆರಳಿಸಿದೆ. ಅದಕ್ಕೆ ಕಾರಣ ಹಲವು.

ಮೊದಲನೆಯದು ಇದು “ದುನಿಯಾ’ ವಿಜಯ್‌ ನಿರ್ದೇಶನದ ಮೊದಲ ಚಿತ್ರ. ಎರಡನೆಯದು ಇಲ್ಲೂ ಧನಂಜಯ್‌ ಖಡಕ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣಕ್ಕೂ ಮುನ್ನ, “ಸಲಗ’ ಚಿತ್ರತಂಡ ಹರಿಬಿಟ್ಟ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು. ಆ ಪೈಕಿ ಧನಂಜಯ್‌ ಫೋಟೋ ಕೂಡ ಸಖತ್‌ ವೈರಲ್‌ ಆಗಿತ್ತು. ಧನಂಜಯ್‌ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದು, ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿಯೇ ಖಡಕ್‌ ಪೊಲೀಸ್‌ ಅಧಿಕಾರಿ ಗೆಟಪ್‌ನಲ್ಲಿದ್ದರು. ಅದಾದ ಬಳಿಕ ಚಿತ್ರತಂಡ ಒಂದೊಂದೇ ಫೋಟೋಗಳನ್ನೂ ಸಹ ಹೊರಬಿಟ್ಟಿತ್ತು. ಈಗ ಧನಂಜಯ್‌ ಪಾತ್ರದ ಮತ್ತೂಂದು ಹೊಸ ಗೆಟಪ್‌ ಫೋಟೋ ಹೊರಬಂದಿದೆ.

ಧನಂಜಯ್‌ ಇಲ್ಲಿ ಕ್ಲೀನ್‌ ಶೇವ್‌ ಮಾಡಿ, ಪಕ್ಕಾ ಆಫಿಶಿಯಲ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಖತ್‌ ಸ್ಲಿಮ್‌ ಆಗಿಯೂ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಆ ಫೋಟೋವನ್ನ ಸೂಕ್ಷ್ಮವಾಗಿ ಗಮನಿಸಿದರೆ, ಪಕ್ಕಾ ಖದರ್‌ ತುಂಬಿರುವ ಪೊಲೀಸ್‌ ಅಧಿಕಾರಿಯಾಗಿ ತನಿಖೆ ನಡೆಸುತ್ತಿರುವ ಗೆಟಪ್‌ನಲ್ಲಿದ್ದಾರೆ. ಸದ್ಯಕ್ಕೆ ಈ ಫೋಟೋಗಳು ಸಣ್ಣದ್ದೊಂದು ಕುತೂಹಲ ಮೂಡಿಸಿರುವುದಂತೂ ನಿಜ.

“ಟಗರು’ ಚಿತ್ರದಲ್ಲಿ ಧನಂಜಯ್‌ ಪಕ್ಕಾ ವಿಲನ್‌ ಆಗಿ ಗಮನಸೆಳೆದಿದ್ದರು. ಶಿವರಾಜಕುಮಾರ್‌ ಎದುರು ಅಬ್ಬರಿಸಿದ್ದರು. ಇಲ್ಲಿ ಪಕ್ಕಾ ಖಡಕ್‌ ಪೊಲೀಸ್‌ ಅಧಿಕಾರಿಯಾಗಿ, “ದುನಿಯಾ’ ವಿಜಯ್‌ ಎದುರು ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಚಿತ್ರದಲ್ಲಿ “ಕಾಕ್ರೋಚ್‌’ ಖ್ಯಾತಿಯ ಸುಧಿ, ಯಶ್‌ ಶೆಟ್ಟಿ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಯಶ್‌ ಶೆಟ್ಟಿ ಮತ್ತು “ಕಾಕ್ರೋಚ್‌’ ಸುಧಿ ಅವರ ಗೆಟಪ್‌ ಕೂಡ ಅವರದು ವಿಲನ್‌ ಪಾತ್ರಗಳು ಎಂಬುದನ್ನು ಸಾರಿ ಹೇಳುತ್ತಿವೆ.

ಈಗಾಗಲೇ ಚಿತ್ರದ ಚಿತ್ರೀಕರಣ ಜೋರಾಗಿ ನಡೆಯುತ್ತಿದ್ದು, ಕೆ.ಪಿ.ಶ್ರೀಕಾಂತ್‌ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಔಟ್‌ ಅಂಡ್‌ ಔಟ್‌ ಮಾಸ್‌ ಸಬೆjಕ್ಟ್ ಆಗಿದ್ದು, ಆ್ಯಕ್ಷನ್‌ಗೆ ಹೆಚ್ಚು ಒತ್ತು ಕೊಡಲಾಗಿದೆ. ಇದು ಕಾಡಿನೊಳಗಿರುವ ಸಲಗವಲ್ಲ, ನಾಡಿನೊಳಗಿರುವ ಸಲಗ. ಒಬ್ಬ ಅಮಾಯಕ ವ್ಯಕ್ತಿ ಭೂಗತಲೋಕದಲ್ಲಿ ಸಿಲುಕಿದಾಗ ನಡೆಯುವ ಕಥೆ ಸಲಗ ಚಿತ್ರದಲ್ಲಿದೆ ಎನ್ನುತ್ತದೆ ಚಿತ್ರತಂಡ. ಇನ್ನು ಈ “ಸಲಗ’ ಚಿತ್ರದ ಮೂಲಕ ವಿಜಯ್‌ ಮತ್ತೂಮ್ಮೆ ಮಾಸ್‌ ಹೀರೋ ಆಗಿ ಮಿಂಚಲಿದ್ದಾರೆ. ಚಿತ್ರಕ್ಕೆ ಸಂಜನಾ ಆನಂದ್‌ ನಾಯಕಿಯಾಗಿದ್ದಾರೆ. “ಟಗರು’ ಚಿತ್ರಕ್ಕೆ ಸಂಗೀತ ನೀಡಿದ ಚರಣ್‌ರಾಜ್‌ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.