ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ


Team Udayavani, Jul 29, 2021, 10:27 AM IST

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಕನ್ನಡ ಚಿತ್ರರಂಗದಲ್ಲಿ ಸದ್ಯದ ಮಟ್ಟಿಗೆ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಬಿಝಿಯಾಗಿರುವ ನಟ ಯಾರು ಎಂಬ ಪ್ರಶ್ನೆಗೆ ಚಿತ್ರರಂಗದ ಮಂದಿಯಿಂದ ಬರುವ ಉತ್ತರ ನಟ ಡಾಲಿ ಧನಂಜಯ್‌. ಹೌದು, ಕನ್ನಡ ಚಿತ್ರರಂಗದಲ್ಲಿ ನಾಯಕನಾಗಿ ಮತ್ತು ಖಳನಾಯಕನಾಗಿ ಎರಡೂ ಥರದ ಪಾತ್ರಗಳಲ್ಲೂ ಗುರುತಿಸಿ ಕೊಂಡಿರುವ ನಟ ಧನಂಜಯ್‌ ಸದ್ಯದ ಮಟ್ಟಿಗೆ ಫ‌ುಲ್‌ ಬಿಝಿ.

ಈ ವರ್ಷದ ಆರಂಭದಲ್ಲಿಯೇ ಧನಂಜಯ್‌ ಅಭಿನಯಿಸಿದ್ದ “ಪೊಗರು’ ಮತ್ತು “ಯುವರತ್ನ’ ಚಿತ್ರಗಳು ಬಿಡುಗಡೆಯಾಗಿದ್ದು, ಎರಡೂ ಚಿತ್ರಗಳಲ್ಲೂ ಪ್ರೇಕ್ಷಕರು ಧನಂಜಯ್‌ ಪಾತ್ರವನ್ನು ಮತ್ತು ಅಭಿನಯವನ್ನು ಮೆಚ್ಚಿಕೊಂಡಿದ್ದರು. ಇದು ವರ್ಷದ ಮೊದಲರ್ಧದಷ್ಟೇ ಭರ್ಜರಿಯಾಗಿ ಸಿನಿ ಅಕೌಂಟ್‌ ಓಪನ್‌ ಮಾಡಿರುವ ಧನಂಜಯ್‌, ವರ್ಷದ ದ್ವಿತೀಯರ್ಧದಲ್ಲಿ ಇನ್ನಷ್ಟು ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಹೌದು, ಕೋವಿಡ್‌ ಎರಡನೇ ಲಾಕ್‌ಡೌನ್‌ ಬಳಿಕ ಧನಂಜಯ್‌ ಅಭಿನಯಿಸಿರುವ ಮತ್ತೂಂದು ಬಿಗ್‌ ಬಜೆಟ್‌ ಚಿತ್ರ “ಸಲಗ’ ತೆರೆಗೆ ಬರಲು ರೆಡಿಯಾಗುತ್ತಿದೆ. ದುನಿಯಾ ವಿಜಯ್‌ ನಟಿಸಿ, ನಿರ್ದೇಶಿಸಿರುವ “ಸಲಗ’ ಚಿತ್ರದಲ್ಲಿ ಧನಂಜಯ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರ ಇದೇ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿದೆ. ಇದರ ಬೆನ್ನಲ್ಲೇ ಧ‌ನಂಜಯ್‌ ನಾಯಕನಾಗಿ ಅಭಿನಯಿಸಿರುವ “ಬಡವ ರಾಸ್ಕಲ್‌’ ಚಿತ್ರದ ಬಹುತೇಕ ಕೆಲಸಗಳು ಕೂಡ ಪೂರ್ಣಗೊಂಡಿದ್ದು, ಚಿತ್ರತಂಡ ನಿಧಾನವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

ಇದನ್ನೂ ಓದಿ:ಆಡಿಯೋ ಪ್ರಿಯರು ಕಾತುರದಿಂದ ಕಾಯುತ್ತಿದ್ದ ನಥಿಂಗ್‍ ಇಯರ್ (1) ಬಿಡುಗಡೆ: ಇದರ ವಿಶೇಷವೇನು?

ಇದಲ್ಲದೆ “ರತ್ನನ್‌ ಪ್ರಪಂಚ’, “ತೋತಾಪುರಿ’, “ಭೈರಾಗಿ’, ತೆಲುಗಿನ “ಪುಷ್ಪಾ’ ಚಿತ್ರದ ಚಿತ್ರೀಕರಣ ಕೂಡ ಪೂರ್ಣಗೊಂಡಿದ್ದು, ಈ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ. ಅಂದು ಕೊಂಡಂತೆ ನಡೆದರೆ ಈ ಚಿತ್ರಗಳು ಕೂಡ ಈ ವರ್ಷದ ಕೊನೆಯಲ್ಲಿ ತೆರೆಗೆ ಬರುವ ಯೋಚನೆಯಲ್ಲಿವೆ.

ಇದರೊಂದಿಗೆ ಧನಂಜಯ್‌ ನಾಯಕನಾಗಿ ಅಭಿನಯಿಸುತ್ತಿರುವ “ಹೆಡ್‌ ಆ್ಯಂಡ್‌ ಬುಷ್‌’ ಮತ್ತು “ಮಾನ್ಸೂನ್ ರಾಗ’, “ಡಾಲಿ’ ಚಿತ್ರದ ಕೆಲಸಗಳು ಕೂಡ ಜೋರಾಗಿ ನಡೆಯುತ್ತಿದ್ದು, ಈ ಚಿತ್ರಗಳು ಮುಂದಿನ ವರ್ಷದ ಆರಂಭದಲ್ಲಿ‌ ತೆರೆಗೆ ಬರಬಹುದು ಎನ್ನಲಾಗುತ್ತಿದೆ.

ಚಿತ್ರ‌ರಂಗದ ಮೂಲಗಳ ಪ್ರಕಾರ, ಸದ್ಯದ ಮಟ್ಟಿಗೆ ಧನಂಜಯ್‌ ಅಭಿನಯದ ಎರಡು ಚಿತ್ರಗಳು ಬಿಡುಗಡೆಯಾಗಿದ್ದು,ಈ ವರ್ಷದ ‌ಕೊನೆಯೊಳಗೆ ಏನಿಲ್ಲವೆಂದರೂ ಇನ್ನೂ ಐದಾರು ಚಿತ್ರಗಳು ತೆರೆ ಕಾಣಬಹುದು ಎಂಬ ನಿರೀಕ್ಷೆಯಿದೆ

ತೆಲುಗಿನ “ಪುಷ್ಪಾ’ದ ಮೇಲೂ ನಿರೀಕ್ಷೆ: ಈ ಹಿಂದೆ ತೆಲುಗಿನ “ಭೈರವಗೀತ’ ಚಿತ್ರದ ಮೂಲಕ ಟಾಲಿವುಡ್‌ ಅಂಗಳಕ್ಕೆ ಪರಿಚಯವಾಗಿದ್ದ ಧನಂಜಯ್‌ ಈಗ ತೆಲುಗಿನ ಮತ್ತೂಂದು ಬಿಗ್‌ ಬಜೆಟ್‌ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್‌ ನಾಯಕನಾಗಿರುವ, ಸುಕುಮಾರ್‌ ನಿರ್ದೇಶನದ “ಪುಷ್ಪಾ’ ಚಿತ್ರದಲ್ಲೂ ಧನಂಜಯ್‌ ಪ್ರಮುಖಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ.

ಈಗಾಗಲೇ”ಪುಷ್ಪಾ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರತಂಡ ಸದ್ಯ ಪ್ರಮೋಶನ್‌ ಕೆಲಸದಲ್ಲಿ ಬಿಝಿಯಾಗಿದೆ. ಆಗಸ್ಟ್‌ ವೇಳೆಗೆ “ಪುಷ್ಪಾ’ ತೆರೆಗೆ ಬರುವ ಯೋಚನೆಯಲ್ಲಿದ್ದು, ತೆಲುಗಿನ ಜೊತೆಗೆ ಕನ್ನಡ, ತಮಿಳು, ಹಿಂದಿ ಮತ್ತು ಮಲೆಯಾಳಂ ಭಾಷೆಗಳಲ್ಲೂ ಚಿತ್ರ ಏಕಕಾಲಕ್ಕೆ ತೆರೆ ಕಾಣುತ್ತಿದೆ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.