ಧನಂಜಯ್‌ ಈಗ “ಬಡವ ರಾಸ್ಕಲ್‌’

ಅಣ್ಣಾವ್ರ ಡೈಲಾಗ್‌ ಸಿನ್ಮಾ ಟೈಟಲ್‌ ಆಗೋಯ್ತು

Team Udayavani, Aug 20, 2019, 3:04 AM IST

Dhananjay

“ಬಡವ ರಾಸ್ಕಲ್‌…’ ಈ ಡೈಲಾಗ್‌ ಕೇಳಿದವರಿಗೆ ಹಾಗೊಮ್ಮೆ ಡಾ.ರಾಜಕುಮಾರ್‌ ಅವರ ನೆನಪಾಗದೇ ಇರದು. ಯಾಕೆಂದರೆ, ಅವರು ತಮ್ಮ ಚಿತ್ರವೊಂದರಲ್ಲಿ ಬಳಸಿರುವ ಈ ಡೈಲಾಗ್‌ ಇಂದಿಗೂ ಗುನುಗುತ್ತಲೇ ಇದೆ. ಈಗಲೂ ಅಪಾರ ಅಭಿಮಾನಿಗಳಿಗಂತೂ ಈ ಡೈಲಾಗ್‌ ಅಂದರೆ ಎಲ್ಲಿಲ್ಲದ ಪ್ರೀತಿ. ಇಷ್ಟಕ್ಕೂ ಇಲ್ಲೇಕೆ “ಬಡವ ರಾಸ್ಕಲ್‌’ ಪದದ ಪ್ರಸ್ತಾಪ ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತೆ.

ಹೌದು, ಈಗ “ಬಡವ ರಾಸ್ಕಲ್‌’ ಹೆಸರಿನ ಚಿತ್ರವೊಂದು ಸೆಟ್ಟೇರಲು ಸಜ್ಜಾಗುತ್ತಿದೆ. ಇನ್ನು, ಈ ಚಿತ್ರದ ಹೀರೋ “ಡಾಲಿ’ ಧನಂಜಯ್‌. “ಟಗರು’ ನಂತರ “ಡಾಲಿ’ ಎಂದೇ ಹೆಸರಾದ ಧನಂಜಯ್‌, ಮೆಲ್ಲನೆ ಬಿಝಿಯಾಗುತ್ತಿದ್ದಾರೆ. ಅವರ ಸಿನಿಮಾ ಅಕೌಂಟ್‌ಗೆ “ಬಡವ ರಾಸ್ಕಲ್‌’ ಕೂಡ ಹೊಸ ಸೇರ್ಪಡೆ. ಇನ್ನು, ಈ ಚಿತ್ರಕ್ಕೆ ಶಂಕರ್‌ ನಿರ್ದೇಶಕರು. ಹಲವು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಇರುವ ಶಂಕರ್‌ಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

“ಬಡವ ರಾಸ್ಕಲ್‌’ ಇದೊಂದು ಹಾಸ್ಯ ಪ್ರಧಾನ ಚಿತ್ರ. ಇಲ್ಲಿ ಶೀರ್ಷಿಕೆ ನೋಡಿದವರಿಗೆ ಮಾಸ್‌ ಫೀಲ್‌ ಎನಿಸಬಹುದು. ಅದರೊಂದಿಗೆ ಇಲ್ಲಿ ಮನರಂಜನೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ ನಿರ್ದೇಶಕರು. ಧನಂಜಯ್‌ ಚಿತ್ರದ ನಾಯಕರಾಗಿ ಕಾಣಿಸಿಕೊಂಡರೆ, ಅವರಿಗೆ ಅಮೃತಾ ಅಯ್ಯಂಗಾರ್‌ ಅವರು ನಾಯಕಿಯಾಗುತ್ತಿದ್ದಾರೆ. ಆಗಸ್ಟ್‌. 23 ರಂದು ಚಿತ್ರಕ್ಕೆ ಪೂಜೆ ನೆರವೇರಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣಕ್ಕೆ ಚಿತ್ರತಂಡ ಹೊರಡಲಿದೆ.

ಸದ್ಯ “ಬಡವ ರಾಸ್ಕಲ್‌’ ಚಿತ್ರದ ಹೀರೋ ಆಗಿರುವ ಧನಂಜಯ್‌ ಅವರ ಅಭಿನಯದ “ಯುವರತ್ನ’,”ಪೊಗರು’,”ಸಲಗ’,”ಪಾಪ್‌ ಕಾನ್‌ ಮಂಕಿ ಟೈಗರ್‌’ ಹಾಗು “ಡಾಲಿ’ ಚಿತ್ರಗಳಲ್ಲಿ ಬಿಝಿಯಾಗಿದ್ದಾರೆ. ಈ ಚಿತ್ರಗಳ ಮೂಲಕ ಮತ್ತೊಮ್ಮೆ ಅಬ್ಬರಿಸಲು ಸಜ್ಜಾಗಿರುವ ಧನಂಜಯ್‌, ವಿಲನ್‌ ಆಗಿಯೂ, ಪೊಲೀಸ್‌ ಅಧಿಕಾರಿಯಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ಹಾಗಾದರೆ, ‘ಬಡವ ರಾಸ್ಕಲ್‌’ ಚಿತ್ರದ ಕಥೆ ಏನು, ಅವರು ಅದರಲ್ಲಿ ಯಾವ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದಕ್ಕೆ ಚಿತ್ರ ಬರುವವರೆಗೂ ಕಾಯಬೇಕು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.