ಡಿ. 2ಕ್ಕೆ ಧರಣಿ ಮಂಡಲ ತೆರೆಗೆ; ವಾರಾಂತ್ಯದಲ್ಲಿ ಟ್ರೇಲರ್ ಬಿಡುಗಡೆ
Team Udayavani, Nov 24, 2022, 11:26 AM IST
“ಗುಳ್ಟು’ ಸಿನಿಮಾ ಖ್ಯಾತಿಯ ನವೀನ್ ಶಂಕರ್ ಹಾಗೂ ಐಶಾನಿ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಥಿಯೇಟರ್ಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದ ಬಿಡುಗಡೆಗೆ ಇದೀಗ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 2ರಂದು ಚಿತ್ರ ತೆರೆಗೆ ಬರುತ್ತಿದೆ.
ಬಾಕ್ಸಿಂಗ್ ಕನಸಿನ ಬೆನ್ನುಹತ್ತಿದ ಹುಡುಗನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಗಳು, ಆತನ ಜೀವನದಲ್ಲಿ ಏನೆಲ್ಲ ತಿರುವುಗಳಿಗೆ ಕಾರಣವಾಗುತ್ತದೆ ಎನ್ನುವುದು “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದ ಕಥೆಯ ಒಂದು ಎಳೆ. ಇಂಥದ್ದೊಂದು ಕಥೆಯನ್ನು ಕ್ರೈಂ-ಥ್ರಿಲ್ಲರ್ ಶೈಲಿಯಲ್ಲಿ ತೆರೆಮೇಲೆ ತಂದಿದೆ ಚಿತ್ರತಂಡ. ಸಿನಿಮಾದಲ್ಲಿ ನವೀನ್ ಶಂಕರ್, ಐಶಾನಿ ಶೆಟ್ಟಿ ಅವರೊಂದಿಗೆ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಈಗಾಗಲೇ ಬಿಡುಗಡೆಯಾಗಿರುವ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದ ಫಸ್ಟ್ಲುಕ್, ಟೀಸರ್ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ವಾರಾಂತ್ಯದಲ್ಲಿ ಸಿನಿಮಾದ ಟ್ರೇಲರ್ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಇದೊಂದು ಹೈಪರ್ ಲಿಂಕ್ ಶೈಲಿಯ ಕ್ರೈಂ-ಡ್ರಾಮಾ ಇರುವ ಸಿನಿಮಾ. ಕನ್ನಡದಲ್ಲಿ ಈ ಶೈಲಿಯ ಸಿನಿಮಾಗಳು ಬಂದಿದ್ದು ವಿರಳ. ಸಿನಿಮಾ ಆರಂಭದಿಂದ ಅಂತ್ಯದವರೆಗೂ ಥ್ರಿಲ್ ನೀಡಿ ಪ್ರೇಕ್ಷಕರನ್ನು ರಂಜಿಸುತ್ತದೆ. ಲವ್, ಸೆಂಟಿಮೆಂಟ್, ಕಾಮಿಡಿ ಹೀಗೆ ಕಂಪ್ಲೀಟ್ ಎಂಟರ್ಟೈನ್ಮೆಂಟ್ ಪ್ಯಾಕೇಜ್ ಇರುವ ಸಿನಿಮಾ’ ಎಂಬುದು ಚಿತ್ರತಂಡದ ಮಾತು.
“ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್’ ಬ್ಯಾನರ್ನಡಿ ಓಂಕಾರ್ ನಿರ್ಮಿಸಿರುವ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾಕ್ಕೆ ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಶ್ರೀಧರ್ ಶಿಕಾರಿಪುರ ನಿರ್ದೇಶನದ ಚಿತ್ರಕ್ಕೆ ಕೀರ್ತನ್ ಪೂಜಾರಿ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನವಿದೆ. ಚಿತ್ರದ ಹಾಡುಗಳಿಗೆ ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತವಿದ್ದು, ಈಗಾಗಲೇ ಬಿಡುಗಡೆಯಾಗಿರುವ ವಿಜಯ್ ಪ್ರಕಾಶ್ ಮತ್ತು ನಟ ಶರಣ್ ಹಾಡಿರುವ ಹಾಡುಗಳು ಹಿಟ್ಲಿಸ್ಟ್ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ