ಧರ್ಮ ಖಡಕ್‌ ಎಂಟ್ರಿ


Team Udayavani, Mar 26, 2019, 11:10 AM IST

Dharma-keerthiraj

ಕಳೆದ ವಾರವಷ್ಟೇ ನಟ ಧರ್ಮ ಕೀರ್ತಿರಾಜ್‌ “ಚಾಣಾಕ್ಷ’ ಚಿತ್ರದ ಮೂಲಕ ಆ್ಯಕ್ಷನ್‌ ಹೀರೋ ಆಗಿ, ಮಾಸ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬಂದಿದ್ದರು. ಇಲ್ಲಿಯವರೆಗೆ ಚಾಕೋಲೆಟ್‌ ಹೀರೋ ಆಗಿ ಗುರುತಿಸಿಕೊಳ್ಳುತ್ತಿದ್ದ ಧರ್ಮ ಅವರಿಗೆ “ಚಾಣಾಕ್ಷ’ ಕೊಂಚ ಮಟ್ಟಿಗೆ ಆ್ಯಕ್ಷನ್‌ ಹೀರೋ ಇಮೇಜ್‌ ತಂದುಕೊಟ್ಟಿತ್ತು.

ಇದರ ಬೆನ್ನಲ್ಲೇ ಧರ್ಮ ಕೀರ್ತಿರಾಜ್‌, “ಖಡಕ್‌’ ಎನ್ನುವ ಮತ್ತೂಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಹಾನಿಗೆ ಹೀರೋ ಆಗುತ್ತಿದ್ದು, ನಾಳೆ ಈ ಚಿತ್ರದ ಅಧಿಕೃತವಾಗಿ ಸೆಟ್ಟೇರಲಿದೆ. ಈ ಹಿಂದೆ ಶಶಿಕುಮಾರ್‌ ಅಭಿನಯದ “ನಾರದ ವಿಜಯ’, “ಡ್ರ್ಯಾಗನ್‌’, “ಮಿಸ್ಟರ್‌ ಚೀಟರ್‌’, “ಅಮಾನುಷಾ’ ಮೊದಲಾದ ಚಿತ್ರಗಳನ್ನು ನಿರ್ಮಿಸಿದ್ದ ನಿರ್ಮಾಪಕ ವಲ್ಲಿ ಮತ್ತು ಸಿದ್ಧರಾಮಯ್ಯ ಸಿಂಗಾಪುರ “ಖಡಕ್‌’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಯುವ ನಿರ್ದೇಶಕ ಬಿ. ರಾಜರತ್ನ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಸದ್ಯ “ಖಡಕ್‌’ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಪೂರ್ಣಗೊಂಡಿದ್ದು, ಬುಧವಾರ ಚಿತ್ರದ ಮುಹೂರ್ತ ನಡೆಯಲಿದೆ. ಆರ್‌.ಟಿ ನಗರದ ಸಾಯಿಬಾಬಾ ದೇವಸ್ಥಾನಲ್ಲಿ ನಡೆಯಲಿರುವ ಮುಹೂರ್ತ ಸಮಾರಂಭದಲ್ಲಿ ನಟ ದರ್ಶನ್‌, ಚಿತ್ರೀಕರಣಕ್ಕೆ ಚಾಲನೆ ನೀಡಲಿದ್ದಾರೆ.

ಸಚಿವ ಸತೀಶ್‌ ಜಾರಕಿಹೊಳಿ, ಕೃಷ್ಣ ಭೈರೇಗೌಡ, ಬೈರತಿ ಸುರೇಶ್‌, ಹಿರಿಯ ನಟ ಕೀರ್ತಿರಾಜ್‌ ಮೊದಲಾದವರು ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂಡರ್‌ವರ್ಲ್ಡ್ ಮತ್ತು ಸ್ಮಗ್ಲಿಂಗ್‌ ಮಾಫಿಯಾ ಕಥಾಹಂದರವಿರುವ “ಖಡಕ್‌’ ಚಿತ್ರದಲ್ಲಿ ನಟ ಧರ್ಮ ಕೀರ್ತಿರಾಜ್‌ ಎರಡು ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಉಳಿದಂತೆ ಅನುಷಾ ರೈ ನಾಯಕಿ ಕಬೀರ್‌ ದುಹಾನ್‌ ಸಿಂಗ್‌, ಬುಟೋ ಭಾಯ್‌, ಕಮಲ್‌, ಅಶೋಕ್‌ ಚಕ್ರವರ್ತಿ, ರಾಕ್‌ಲೈನ್‌ ಸುಧಾಕರ್‌, ಷಣ್ಮುಖ, ಸಾಯಿಕುಮಾರ್‌ ಬೈಲಹೊಂಗಲ, ರೆಹಮಾನ್‌, ಉದಯ ರಾಜು , ರವಿರಾಮ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಹಾಡುಗಳಿಗೆ ಎಂ. ಎನ್‌ ಕೃಪಾಕರ್‌ ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ಶಂಕರ್‌ ಛಾಯಾಗ್ರಹಣ, ವೆಂಕಟೇಶ್‌ ಯುಡಿವಿ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 45 ದಿನಗಳ ಚಿತ್ರೀಕರಣಕ್ಕೆ ಪ್ಲಾನ್‌ ಹಾಕಿಕೊಂಡಿರುವ ಚಿತ್ರತಂಡ, ಮುಂದಿನ ನವೆಂಬರ್‌ ವೇಳೆಗೆ “ಖಡಕ್‌’ ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.