ಧರ್ಮ ಹೊಸ ಚಿತ್ರ ವಿವಿಕ್ತ


Team Udayavani, Nov 29, 2017, 11:00 PM IST

Vivikta-1.jpg

ಇತ್ತೀಚೆಗಷ್ಟೇ “ಚಾಣಾಕ್ಯ’ ಎಂಬ ಚಿತ್ರ ಮಾಡಿದ್ದ ಧರ್ಮ, ಇದೀಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದ ಮುಹೂರ್ತವು ಸದ್ದಿಲ್ಲದೆ ನಡೆದಿದ್ದು, ಚಿತ್ರೀಕರಣ ಸಹ ಶುರುವಾಗಿದೆ. ಅಂದಹಾಗೆ, ಈ ಚಿತ್ರದ ಹೆಸರು “ವಿವಿಕ್ತ’. “ವಿವಿಕ್ತ’ ಚಿತ್ರವನ್ನು ನಿರ್ದೇಶಕ ಗಡ್ಡ ವಿಜಿ ಅವರ ಕ್ಯಾಂಪ್‌ನ ರಘು ಅಪ್ಪು ಎನ್ನುವವರು ನಿರ್ದೇಶಿಸುತ್ತಿದ್ದಾರೆ.

ಇದು ಅವರ ನಿರ್ದೇಶನದ ಮೊದಲ ಚಿತ್ರ. ಎರಡು ವರ್ಷಗಳ ಹಿಂದೆ ನಡೆದ ಒಂದು ನೈಜ ಘಟನೆಯನ್ನಾಧರಿಸಿ ಈ ಕಥೆ ಮಾಡಿದ್ದಾರೆ. ಇಲ್ಲಿ ನಾಯಕಿಯ ಹೆಸರು ಯುಕ್ತ. ಯುಕ್ತ ಆಗಿದ್ದವಳು ಕ್ಲೈಮ್ಯಾಕ್ಸ್‌ ಹೊತ್ತಿಗೆ “ವಿವಿಕ್ತ’ ಆಗುವುದು ಹೇಗೆ ಮತ್ತು ಏಕೆ ಎನ್ನುವುದು ಚಿತ್ರದ ಕಥೆಯಂತೆ. ಆ ಕಥೆಯನ್ನು ಇವತ್ತಿನ ಪ್ರೇಕ್ಷಕರ ಮನಮುಟ್ಟುವಂತೆ ಚಿತ್ರಿಸುವ ಐಡಿಯಾ ಹಾಕಿಕೊಂಡಿದ್ದಾರೆ.

ಈ ಚಿತ್ರವನ್ನು ರಾಕೇಶ್‌ ಮತ್ತು ಭಾಸ್ಕರ್‌ ಎನ್ನುವವರು ನಿರ್ಮಿಸುತ್ತಿದ್ದು, ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್‌ ಬಹಳ ಇಷ್ಟವಾಯಿತಂತೆ. ಅದೇ ಕಾರಣಕ್ಕೆ ಅವರು ಚಿತ್ರಕ್ಕೆ ಹಣ ಹಾಕುವುದಕ್ಕೆ ಮುಂದೆ ಬಂದಿದ್ದಾರೆ. ಇಲ್ಲಿ ಧರ್ಮ ಕೀರ್ತಿರಾಜ್‌ ಜೊತೆಗೆ ಪ್ರತಾಪ್‌ ನಾರಾಯಣ್‌ ಸಹ ಇದ್ದಾರೆ. “ಬೆಂಕಿಪೊಟ್ಣ’, “ಐ ಆ್ಯಮ್‌ ಪ್ರಗ್ನಂಟ್‌’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಪ್ರತಾಪ್‌ಗೆ ಇಲ್ಲಿ ಎರಡನೆಯ ಹೀರೋ ಪಾತ್ರ.

ಇನ್ನು ಇವರಿಬ್ಬರಿಗೆ ನಾಯಕಿಯಾಗಿ “ಪೈಪೋಟಿ’ ಚಿತ್ರದ ಪೂಜಾ ಇದ್ದಾರೆ. ಈ ಚಿತ್ರದಲ್ಲಿ ಅವರು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದು, ಅನಾಥ ಹುಡುಗಿಯೊಬ್ಬಳ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರವಾಗಿದ್ದು, ಚಿತ್ರೀಕರಣ ಬೆಂಗಳೂರು, ಮಡಿಕೇರಿ, ಸಾಗರ ಮುಂತಾದ ಕಡೆ ನಡೆಯಲಿದೆ.

“ವಿವಿಕ್ತ’ಗೆ ಭಾಸ್ಕರ್‌ ರೆಡ್ಡಿ ಅವರು ಛಾಯಾಗ್ರಹಣ ಮಾಡಿದರೆ, ಗಣೇಶ್‌ ನಾರಾಯಣ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ಮೂರು ದುಃಖದ ಹಾಡುಗಳು ಮತ್ತು ಒಂದು ಡ್ಯುಯೆಟ್‌ ಇದೆಯಂತೆ. ಗಣೇಶ್‌ ಸಂಗೀತ ಸಂಯೋಜಿಸಿದರೆ, ಅಭಿ ಎನ್ನುವವರು ಸಾಹಿತ್ಯ ರಚಿಸಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.