ಟೀಸರ್‌ ನಲ್ಲಿ ಶಿವ 143 ಮಿಂಚು: ಧೀರೇನ್‌ ರಾಮ್‌ ಕುಮಾರ್‌ ರಗಡ್‌ ಎಂಟ್ರಿ


Team Udayavani, Aug 14, 2022, 2:47 PM IST

ಟೀಸರ್‌ ನಲ್ಲಿ ಶಿವ 143 ಮಿಂಚು: ಧೀರೇನ್‌ ರಾಮ್‌ ಕುಮಾರ್‌ ರಗಡ್‌ ಎಂಟ್ರಿ

ನವ ನಟ ಧೀರೇನ್‌ ರಾಮ್‌ಕುಮಾರ್‌ ಅಭಿನಯದ “ಶಿವ 143 ’ ಚಿತ್ರದ ಹೀರೋ ಇಂಟ್ರೋಡಕ್ಷನ್‌ ಟೀಸರ್‌ ರಿಲೀಸ್‌ ಆಗಿದೆ. ಅಶ್ವಿ‌ನಿ ಪುನೀತ್‌ ರಾಜ್‌ಕುಮಾರ್‌ ಚಿತ್ರದ ಹೀರೋ ಇಂಟ್ರೋಡಕ್ಷನ್‌ ಟೀಸರ್‌ ಬಿಡುಗಡೆಗೊಳಿಸಿ ಶುಭ ಹಾರೈಸಿದ್ದಾರೆ.

“ಶಿವ 143′ ಚಿತ್ರದ ಹೀರೋ ಇಂಟ್ರೋಡಕ್ಷನ್‌ ಟೀಸರ್‌ ಸಖತ್‌ ಮಾಸ್‌ ಶೈಲಿಯಲ್ಲಿ ಮೂಡಿಬಂದಿದ್ದು, ಧೀರೇನ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಪಕ್ಕಾ ಆ್ಯಕ್ಷನ್‌ ಚಿತ್ರ ಎನ್ನುವುದು ಟೀಸರ್‌ನಲ್ಲೇ ಕಾಣುತ್ತದೆ. “ಸಖತ್‌ ಸೈಕ್‌ ಇವನು ‘ ಎಂಬ ಡೈಲಾಗ್‌ ಚಿತ್ರದಲ್ಲಿ ಧೀರೇನ್‌ ಪಾತ್ರ ಭಿನ್ನ ಶೇಡ್‌ಗಳಲ್ಲಿ ಮೂಡಿಬರಲಿದೆ ಎಂಬ ಸುಳಿವು ನೀಡುತ್ತಿದೆ.

ಚಿತ್ರದ ನಿರ್ದೇಶಕ ಅನಿಲ್‌ ಕುಮಾರ್‌ ಮಾತನಾಡಿ, “ಶಿವ 143 ನೈಜ ಘಟನೆ ಆಧಾರಿತ ಚಿತ್ರ. ನಿಜವಾದ ಶಿವ ಎನ್ನುವ ವ್ಯಕ್ತಿತ್ವದ ಕಥೆಯಾದ್ದರಿಂದ ಚಿತ್ರ ಸುಂದರವಾಗಿ ಮೂಡಿಬಂದಿದೆ. ಇನ್ನು ಚಿತ್ರದಲ್ಲಿ ನಾಯಕ- ನಾಯಕಿ ನಂತರ ಹೆಚ್ಚು ಕಾಣಿಸಿಕೊಳ್ಳುವ ಪಾತ್ರ ಚರಣರಾಜ್‌ ಅವರದ್ದು. ಸಾಧು ಕೋಕಿಲ, ಚಿಕ್ಕಣ್ಣ , ನಾಯಕಿ ಮಾನ್ವಿತಾ ಅವರ ಅಭಿನಯದ ಬಗ್ಗೆ ಎರಡು ಮಾತಿಲ್ಲ. ಮಾನ್ವಿತಾ ಹಾಗೂ ಧೀರೇನ್‌ ಡ್ಯುಯಲ್‌ ಕ್ಯಾರೆಕ್ಟರ್‌ನಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ನಾಯಕನಿಂದ ಛಾಯಾಗ್ರಾಹಕರವರೆಗೂ ಹೊಸ ಮುಖಗಳಿವೆ. ಆದರೆ, ಅವರು ಯಾರೂ ಚೊಚ್ಚಲ ಚಿತ್ರದಲ್ಲಿ ಮಾಡುತ್ತಿದ್ದಾರೆ ಎಂದು ಅನಿಸುವುದಿಲ್ಲ . ಅನುಭವಿ ಕಲಾವಿದ, ತಂತ್ರಜ್ಞರಂತೆ ಕೆಲಸ ನಿರ್ವಹಿಸಿದ್ದಾರೆ. ಚಿತ್ರ ಯುವಕರನ್ನು ತುಂಬಾ ಕಾಡಲಿದೆ’ ಎಂದರು.

ನಾಯಕ ಧೀರೇನ್‌ ರಾಮ್‌ ಕುಮಾರ್‌ ಮಾತನಾಡಿ, “ಲಾಕ್‌ಡೌನ್‌ ಗೂ ಮುಂಚೆ ಪ್ರಾರಂಭವಾದ ಚಿತ್ರ ಇದು. ಎಲ್ಲಾ ಅಡೆತಡೆಗಳನ್ನು ಮೀರಿ, ನಿಯಮಗಳನ್ನು ಪಾಲಿಸಿ, ನೋಡಿಕೊಂಡು ಅಂತಿಮವಾಗಿ ಇಂದು ರಿಲೀಸ್‌ಗೆ ರೆಡಿಯಾಗಿದ್ದೇವೆ. ಈ ಚಿತ್ರದಲ್ಲಿ ಫಿಸಿಕಲ್‌ ನನ್ನ ಲುಕ್‌ ಬೇರೆ ತರಹ ಇದೆ. ಕೂದಲಿಂದ ಹಿಡಿದು ದೇಹ ಬೆಳೆಸುವುದು, ಕರಗಿಸುವುದರವರೆಗೂ ತುಂಬಾ ತಯಾರಿ ನಡೆಸಿದ್ದೇವೆ. ಆ್ಯಕ್ಷನ್‌, ಡಾನ್ಸ್‌ ಗಾಗಿ ನನ್ನ ದೇಹವನ್ನು ಫಿಟ್‌ ಆಗಿ ಇಡಬೇಕಿತ್ತು, ಆ ಕೆಲಸ ಮಾಡಿದ್ದೇನೆ. ಇನ್ನು ಮೊದಲ ಚಿತ್ರ ಅಂದಾಗ ವಿಭಿನ್ನವಾಗಿ ಮಾಡುವ ಆಸೆ ನನಗಿತ್ತು. ಅದೇ ಸಮಯಕ್ಕೆ ಚಿತ್ರದ ಆಫ‌ರ್‌ ಬಂದಾಗ ತಂದೆ-ತಾಯಿ, ಶಿವು ಮಾಮ, ಅಪ್ಪು ಮಾಮ, ರಾಘು ಮಾಮ ಎಲ್ಲರ ಬಳಿ ಅಭಿಪ್ರಾಯಗಳನ್ನು ಪಡೆದೆ. ಎಲ್ಲರೂ “ನಿನಗೆ ಇಷ್ಟವಾದರೆ, ನಿನಗೆ ಪಾತ್ರ ಕಾಡಿದರೆ ಮಾತ್ರ ಮಾಡು’ ಅಂದರು. ನನಗೆ ಈ ಪಾತ್ರ ತುಂಬಾ ಸವಾಲಿನ ಹಾಗೂ ಕಾಡುವ ಪಾತ್ರ ಪಾತ್ರ ಅನಿಸಿತು. ಆದ್ದರಿಂದ ಈ ಚಿತ್ರ ಮಾಡಲೇಬೇಕು ಎಂದು ನಿರ್ಧರಿಸಿದೆ. ಹಾಗೇ ನನ್ನ ಮೇಲೆ ಸಾಕಷ್ಟು ನಿರೀಕ್ಷೆ ಹಾಗೂ ಜವಾಬ್ದಾರಿ ಎರಡು ಇದೆ. ಅದನ್ನು ನಿಭಾಯಿಸುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದೇನೆ. ಅಶ್ವಿ‌ನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನಾನು ಆಭಾರಿ’ ಎಂದರು.

ಚಿತ್ರಕ್ಕೆ “ಜಯಣ್ಣ ಕಂಬೈನ್ಸ್‌’ ಬಂಡವಾಳ ಹೂಡಿದ್ದು, ಅನಿಲ್‌ ನಿರ್ದೇಶನ ಮಾಡಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತ, ಶಿವ ಬಿ.ಕೆ ಕುಮಾರ್‌ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.