ಧ್ರುವ ಹೊಸ ಚಿತ್ರ “ಮದಗಜ’


Team Udayavani, Dec 26, 2017, 11:51 AM IST

dhruvasarja.jpg

ಧ್ರುವ ಸರ್ಜಾ ಅಭಿನಯದ ಮೂರನೆಯ ಚಿತ್ರ “ಭರ್ಜರಿ’ ಮೊನ್ನೆ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ನಾಲ್ಕನೆಯ ಚಿತ್ರ “ಪೊಗರು’ ಇತ್ತೀಚೆಗಷ್ಟೇ ಸೆಟ್ಟೇರಿದೆ. ಇನ್ನು ತಮ್ಮ ಐದನೇ ಚಿತ್ರದ ಕಾಲ್‌ಶೀಟ್‌ ಅವರು ನಿರ್ಮಾಪಕ ಉದಯ್‌ ಕೆ. ಮೆಹ್ತಾ ಅವರಿಗೆ ಕೊಟ್ಟಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಆ ಚಿತ್ರದ ಹೆಸರು, ನಿರ್ದೇಶಕರು ಯಾರು ಎಂಬುದು ಇದುವರೆಗೂ ಗೊತ್ತಿರಲಿಲ್ಲ.

ಈಗ ಬಂದಿರುವ ಮಾಹಿತಿಯ ಪ್ರಕಾರ, ಚಿತ್ರಕ್ಕೆ “ಮದಗಜ’ ಎಂಬ ಹೆಸರನ್ನು ಇಡಲಾಗಿದ್ದು, “ಅಯೋಗ್ಯ’ ನಿರ್ದೇಶಿಸುತ್ತಿರುವ ಮಹೇಶ್‌ ಕುಮಾರ್‌ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಹೌದು, ಧ್ರುವ ಸರ್ಜಾ ಅಭಿನಯದ ಐದನೇ ಸಿನಿಮಾವನ್ನು ನಿರ್ದೇಶಿಸುವ ಅವಕಾಶ ಮಹೇಶ್‌ ಅವರಿಗೆ ಸಿಕ್ಕಿದೆಯಂತೆ. ಇದಕ್ಕೂ ಮುನ್ನ ಸುಮಾರು ಮೂರು ವರ್ಷಗಳ ಹಿಂದೆ ಧ್ರುವಗೆ ಒಂದು ಸಿನಿಮಾ ಮಾಡಬೇಕೆಂದು, ಕಥೆ ಹೇಳಿದ್ದರಂತೆ.

ಕಥೆ ಕೇಳಿದ ಧ್ರುವ ನಟಿಸುವುದಕ್ಕೆ ಒಪ್ಪಿದ್ದರಂತೆ. ಆ ಸಂದರ್ಭದಲ್ಲಿ ಚಿತ್ರಕ್ಕೆ ಇಟ್ಟಿದ್ದ ಹೆಸರು, “ಭರ್ಜರಿ’. “ಬಹದ್ದೂರ್‌’ ಚೇತನ್‌ ನಿರ್ದೇಶನದ ಹೊಸ ಚಿತ್ರಕ್ಕೆ ಆ ಹೆಸರು ಸೂಕ್ತ ಎಂದನಿಸಿ, ಮಹೇಶ್‌ ಅವರಿಂದ “ಭರ್ಜರಿ’ ಹೆಸರು ಕೇಳಿ ಪಡೆದಿದ್ದರಂತೆ. ಆಗಲೇ ತಮ್ಮ ಐದನೇ ಚಿತ್ರವನ್ನು ನಿರ್ದೇಶಿಸಬೇಕೆಂದು ಹೇಳಿದ್ದರಂತೆ. ಅದರಂತೆ ಈಗ ಅವರು ನಾಲ್ಕನೆಯ ಚಿತ್ರದಲ್ಲಿ ಸದ್ಯದಲ್ಲೇ ನಟಿಸಲಿದ್ದು,

ಆ ನಂತರ ಐದನೇ ಚಿತ್ರದ ಕೆಲಸ ಶುರು ಹಚ್ಚಿಕೊಳ್ಳುವುದಕ್ಕೆ ಮಹೇಶ್‌ಗೆ ಗ್ರೀನ್‌ ಸಿಗ್ನಲ್‌ ಸಹ ಕೊಟ್ಟಿದ್ದಾರೆ. ಅದಕ್ಕೆ ಸರಿಯಾಗಿ,  ಮೊನ್ನೆ ಭಾನುವಾರ ನರ್ತಕಿ ಚಿತ್ರಮಂದಿರದಲ್ಲಿ ನಡೆದ “ಭರ್ಜರಿ’ ಚಿತ್ರದ ಶತದಿನೋತ್ಸವದ ಸಂದರ್ಭದಲ್ಲಿ, ಧ್ರುವ ಅವರು ತಮ್ಮ ಐದನೇ ಚಿತ್ರವನ್ನು ಮಹೇಶ್‌ ನಿರ್ದೇಶಿಸಲಿದ್ದಾರೆ ಎಂದು ಧ್ರುವ ಸ್ಪಷ್ಟಪಡಿಸಿದ್ದಾರೆ.

“ಮದಗಜ’ ಒಂದು ಪಕ್ಕಾ ಮಾಸ್‌ ಚಿತ್ರವಾಗಲಿದೆ ಎನ್ನುತ್ತಾರೆ ಮಹೇಶ್‌. “ನಾನು ಮುಂಚಿನಿಂದ ಧ್ರುವ ಅವರ ಅಭಿಮಾನಿ. ಒಬ್ಬ ಅಭಿಮಾನಿ ತಮ್ಮ ಮೆಚ್ಚಿನ ನಟನನ್ನು ಹೇಗೆ ನೋಡುವುದಕ್ಕೆ ಇಷ್ಟಪಡುತ್ತಾನೋ, ಚಿತ್ರದ ಕಥೆಯೂ ಅದೇ ತರಹ ಇರಲಿದೆ. ಇದೊಂದು ಪಕ್ಕಾ ಮಾಸ್‌ ಚಿತ್ರವಾಗಲಿದೆ. ಈಗಾಗಲೇ ಕಥೆ ಪಕ್ಕಾ ಆಗಿದೆ.

ಮುಂದಿನ ದಿನಗಳಲ್ಲಿ ಉಳಿದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆಯಾಗಲಿದೆ’ ಎನ್ನುತ್ತಾರೆ ಮಹೇಶ್‌. “ಮದಗಜ’ ಚಿತ್ರ ಶುರುವಾಗುವುದು ಮುಂದಿನ ವರ್ಷವೇ. ಮೊದಲಿಗೆ ಧ್ರುವ “ಪೊಗರು’ ಚಿತ್ರವನ್ನು ಮುಗಿಸಬೇಕು. ಈ ಕಡೆ ಮಹೇಶ್‌ ಸಹ “ಅಯೋಗ್ಯ’ ಚಿತ್ರವನ್ನು ಪೂರೈಸಬೇಕು. ಇವೆರೆಡೂ ಮುಗಿದ ನಂತರ, “ಮದಗಜ’ ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.