ಟಾಲಿವುಡ್‌ “ಹೀರೋ’ಚಿತ್ರದಲ್ಲಿ ದಿಗಂತ್‌ ನಟನೆ

ವಿಜಯ್‌ ದೇವರಕೊಂಡ ಚಿತ್ರಕ್ಕೆ ಸಾಥ್‌

Team Udayavani, Jun 9, 2019, 3:02 AM IST

tollywood

ಸ್ಯಾಂಡಲ್‌ವುಡ್‌ನ‌ ದೂದ್‌ಪೇಡಾ ಖ್ಯಾತಿಯ ದಿಗಂತ್‌ ಸದ್ಯ “ಹುಟ್ಟುಹಬ್ಬದ ಶುಭಾಶಯಗಳು’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಇದರ ನಡುವೆಯೇ ದಿಗಂತ್‌ ಬಗ್ಗೆ ಮತ್ತೂಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅದೇನಪ್ಪ ಅಂದರೆ, ನಟ ದಿಗಂತ್‌ ಸದ್ದಿಲ್ಲದೆ ತೆಲುಗು ಚಿತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಹೌದು, ತೆಲುಗು ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ “ಡಿಯರ್‌ ಕಾಮ್ರೇಡ್‌’ ಚಿತ್ರ ಇದೇ ತಿಂಗಳ ಅಂತ್ಯಕ್ಕೆ ತೆಲುಗು ಮತ್ತು ಕನ್ನಡ ಎರಡೂ ಭಾಷೆಯಲ್ಲೂ ತೆರೆಗೆ ಬರಲು ತಯಾರಿ ನಡೆಸುತ್ತಿದೆ. ಇದರ ಹಿಂದೆಯೇ ವಿಜಯ್‌ ದೇವರಕೊಂಡ ಅಭಿನಯದ ಹೊಸಚಿತ್ರ “ಹೀರೋ’ ಸೆಟ್ಟೇರಿದ್ದು, ಈ ಚಿತ್ರದಲ್ಲಿ ಕನ್ನಡ ನಟ ದಿಗಂತ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ, “ಹೀರೋ’ ಚಿತ್ರದಲ್ಲಿ ನಟ ದಿಗಂತ್‌, ನಾಯಕ ನಟ ವಿಜಯ್‌ ದೇವರಕೊಂಡ ಅವರ ಮೆಂಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಅಂದಹಾಗೆ, “ಹೀರೋ’ ಬೈಕ್‌ ರೇಸಿಂಗ್‌ ಕುರಿತಾದ ಕಥೆ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ದಿಗಂತ್‌ ಅವರು ನಾಯಕಿಯ ಅಣ್ಣನಾಗಿ, ದೊಡ್ಡ ರೇಸಿಂಗ್‌ ಕಂಪೆನಿಯ ಮಾಲೀಕನಾಗಿಯೂ ಕಾಣಿಸಿಕೊಳ್ಳಲಿದ್ದಾರಂತೆ.

ತನ್ನ ಕಂಪೆನಿಗೆ ಹೊಸ ರೇಸರ್‌ ಅನ್ನು ಹುಡುಕುತ್ತಿರುವ ದಿಗಂತ್‌ಗೆ ಒಮ್ಮೆ ಅಚಾನಕ್ಕಾಗಿ ಸಿಗುವ ವಿಜಯ್‌ಗೆ ಮುಂದೆ ಅವರೇ ಮೆಂಟರ್‌ ಆಗಿ ಕೆಲಸ ಮಾಡುತ್ತಾರಂತೆ. ಲವ್‌, ಆ್ಯಕ್ಷನ್‌, ಸೆಂಟಿಮೆಂಟ್‌ ಎಲ್ಲವೂ ಇರುವ “ಹೀರೋ’ ಚಿತ್ರ ಪಕ್ಕಾ ಮಾಸ್‌ ಎಂಟರ್‌ಟೈನ್ಮೆಂಟ್‌ ಎನ್ನಲಾಗುತ್ತಿದೆ. ಇನ್ನು “ಹೀರೋ’ ಚಿತ್ರದಲ್ಲಿರುವ ಬೈಕ್‌ ಮತ್ತು ರೇಸಿಂಗ್‌ ಬಗ್ಗೆ ಸಾಕಷ್ಟು ಕ್ರೇಜ್‌ ಇರುವುದರಿಂದ ದಿಗಂತ್‌ ಈ ಚಿತ್ರವನ್ನು ಖುಷಿಯಿಂದ ಒಪ್ಪಿಕೊಂಡಿದ್ದಾರೆ.

ಈಗಾಗಲೆ “ಹೀರೋ’ ಚಿತ್ರದ ಚಿತ್ರೀಕರಣ ಶುರುವಾಗಿದ್ದು, ಚಿತ್ರಕ್ಕಾಗಿ ದಿಗಂತ್‌ ಮತ್ತು ವಿಜಯ್‌ ದೇವರಕೊಂಡ ಇಬ್ಬರೂ ಈಗಾಗಲೇ ಕೊಯಂಬತ್ತೂರಿನಲ್ಲಿ ಸುಮಾರು ಒಂದುವಾರ ತರಬೇತಿ ಕೂಡ ಪಡೆದುಕೊಂಡಿದ್ದಾರಂತೆ. ಇನ್ನೊಂದು ವಿಷಯ ಅಂದರೆ, ಹೀರೋ ದಿಗಂತ್‌ ಮತ್ತು ವಿಜಯ್‌ ಒಟ್ಟಿಗೆ ಮೊದಲ ಬಾರಿಗೆ ಅಭಿನಯಿಸುತ್ತಿರುವ “ಹೀರೋ’ ಚಿತ್ರ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ನಾಲ್ಕು ಭಾಷೆಯಲ್ಲಿ ತೆರೆಗೆ ಬರಲಿದೆ ಎಂಬ ಸುದ್ದಿ ಜೋರಾಗಿದೆ.

“ಕಾಕ ಮುಟೈ’ ಚಿತ್ರದ ಸಂಭಾಷಣೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಆನಂದ್‌ ಅಣ್ಣಾಮಲೈ, ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ಮಾಳವಿಕಾ ಮೋಹನ್‌ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಟ್ಟಾರೆ ಟಾಲಿವುಡ್‌ “ಹೀರೋ’ ಜೊತೆಗೆ ಪ್ರೇಕ್ಷಕರ ಮುಂದೆ ಬರುತ್ತಿರುವ ದಿಗಂತ್‌ – ವಿಜಯ್‌ ದೇವರಕೊಂಡ ಕಾಂಬಿನೇಶನ್‌ ಎಷ್ಟರ ಮಟ್ಟಿಗೆ ವರ್ಕೌಟ್‌ ಆಗಲಿದೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.