Powder ಹಿಂದೆ ಹುಡುಗರು; ಕಾಮಿಡಿ ಡ್ರಾಮಾದಲ್ಲಿ ದಿಗಂತ್, ಧನ್ಯಾ, ಶರ್ಮಿಳಾ ಮಾಂಡ್ರೆ
Team Udayavani, Aug 27, 2023, 12:01 PM IST
ಕೆಲ ದಿನಗಳ ಹಿಂದಷ್ಟೇ ನಟ ದಿಗಂತ್, ಧನ್ಯಾ ರಾಮಕುಮಾರ್, ಶರ್ಮಿಳಾ ಮಾಂಡ್ರೆ ಹೊಸ ಸಿನಿಮಾವೊಂದರಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಸಿನಿಮಾವನ್ನು ಜನಾರ್ಧನ್ ಚಿಕ್ಕಣ್ಣ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಈ ಸಿನಿಮಾಕ್ಕೆ “ಪೌಡರ್’ ಎಂದು ಹೆಸರಿಡಲಾಗಿದ್ದು, ಇದೀಗ ಸಿನಿಮಾ ಅಧಿಕೃತವಾಗಿ ಸೆಟ್ಟೇರಿದೆ.
ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ನಡೆದ “ಪೌಡರ್’ ಸಿನಿಮಾದ ಮುಹೂರ್ತ ನೆರವೇರಿದ್ದು, ನಟ ಕಿಚ್ಚ ಸುದೀಪ್ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.
ಮುಹೂರ್ತ ಸಮಾರಂಭದಲ್ಲಿ ನಟರಾದ ಧನಂಜಯ್, ನವೀನ್ ಶಂಕರ್, ಧೀರೇನ್ ರಾಮಕುಮಾರ್, ನಿರ್ದೇಶಕರಾದ ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಯೋಗಿ ಜಿ. ರಾಜ್, ನಿರ್ಮಾಪಕ ಕಾರ್ತಿಕ್ ಗೌಡ, ಕೆ. ಮಂಜು, ಕೆ. ಪಿ ಶ್ರೀಕಾಂತ್, ಭೂಮಿ ಶೆಟ್ಟಿ, ನಾಗಭೂಷಣ್, ಅರುಣ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.
ಇನ್ನು “ಪೌಡರ್’ ಸಂಪೂರ್ಣ ಕಾಮಿಡಿ ಕಥಾಹಂದರದ ಸಿನಿಮಾವಾಗಿದೆ. “ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂದು ಹವಣಿಸುವ ಯುವಕರ ಗುಂಪು. ಮತ್ತೂಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂಬುದನ್ನು ಮನರಂಜನಾತ್ಮಕವಾಗಿ ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ’ ಎಂಬುದು ಚಿತ್ರತಂಡದ ಮಾತು.
ಇದನ್ನೂ ಓದಿ:Soujanya ತಾಯಿ ಮುಂದೆ ಅಣ್ಣಪ್ಪ ಬೆಟ್ಟದಲ್ಲಿ ಪ್ರಮಾಣ ಮಾಡಿದ ಧೀರಜ್, ಮಲ್ಲಿಕ್, ಉದಯ್ ಜೈನ್
“ಪೌಡರ್’ ಸಿನಿಮಾದಲ್ಲಿ ದಿಗಂತ್, ಧನ್ಯಾ ರಾಮಕುಮಾರ್, ಶರ್ಮಿಳಾ ಮಾಂಡ್ರೆ ಅವರೊಂದಿಗೆ ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ದೀಪಕ್ ವೆಂಕಟೇಶನ್ ಕಥೆ, ಚಿತ್ರಕಥೆ ಬರೆದಿದ್ದು, ಶಾಂತಿ ಸಾಗರ್ ಛಾಯಾಗ್ರಹಣವಿದೆ.
ಇದೇ ಸೆಪ್ಟೆಂಬರ್ ತಿಂಗಳಿನಲ್ಲಿ “ಪೌಡರ್’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು, 2024ರ ಏಪ್ರಿಲ್ 5ರಂದು ಸಿನಿಮಾ ಬಿಡುಗಡೆ ಮಾಡುವ ಯೋಜನೆಯಿದೆ ಎಂಬುದು ಚಿತ್ರತಂಡದ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ