ನಟ ಯತಿರಾಜ್‌ ನಿರ್ದೇಶನಕ್ಕೆ


Team Udayavani, Aug 28, 2017, 10:44 AM IST

yatiraj.jpg

ಕನ್ನಡದಲ್ಲಿ 135 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟ ಯತಿರಾಜ್‌, ಇದೇ ಮೊದಲ ಬಾರಿಗೆ ನಿರ್ದೇಶಕನ ಪಟ್ಟ ಅಲಂಕರಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಯತಿರಾಜ್‌ ಈ ಹಿಂದೆಯೇ ನಿರ್ದೇಶಕರಾಗಬೇಕಿತ್ತು. ಹಲವು ಸಲ ನಿರ್ದೇಶನಕ್ಕೆ ಅಣಿಯಾಗಿದ್ದ ಅವರು, ಸಿನಿಮಾಗಳಲ್ಲಿ ನಟಿಸುತ್ತಲೇ ನಿರ್ದೇಶನವನ್ನು ಮುಂದೂಡುತ್ತ ಬಂದಿದ್ದರು. ಆದರೆ, ಆ ಸಮಯ ಈಗ ಬಂದಿದೆ. ಈಗಾಗಲೇ ನೆನಪಿರಲಿ ಪ್ರೇಮ್‌ ಅಭಿನಯದ “ಫೇರ್‌ ಅಂಡ್‌ ಲವ್ಲಿ’ ಚಿತ್ರಕ್ಕೆ ಯತಿರಾಜ್‌ ಕಥೆ ಬರೆದಿದ್ದರು.

ಈಗ ಹೊಸದೊಂದು ಕಥೆ ಬರೆದು ಅದಕ್ಕೆ ಚಿತ್ರಕಥೆಯನ್ನೂ ಮಾಡಿಕೊಂಡು ಅವರೇ ಆ ಚಿತ್ರವನ್ನು ನಿರ್ದೇಶಿಸುವ ಹೊಣೆ ಹೊತ್ತಿದ್ದಾರೆ. ಅಂದಹಾಗೆ, ಯತಿರಾಜ್‌ ನಿರ್ದೇಶನದ ಚಿತ್ರಕ್ಕೆ “ಪೂರ್ಣ ಸತ್ಯ’ ಎಂದು ಹೆಸರಿಡಲಾಗಿದೆ. “ದಿ ಮಿರರ್‌’ ಎಂಬ ಅಡಿಬರಹವೂ ಶೀರ್ಷಿಕೆಗೆ ಇದೆ. ಇಲ್ಲಿ ಯತಿರಾಜ್‌ ನಿರ್ದೇಶನದ ಜತೆಯಲ್ಲಿ ಲೀಡ್‌ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದು ವಿಶೇಷವೆಂದರೆ, ನಟ, ನಿರ್ದೇಶಕ ಎಂ.ಡಿ.ಕೌಶಿಕ್‌ ಅವರಿಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಸದ್ಯಕ್ಕೆ ಇವರಿಬ್ಬರು ನಟಿಸುತ್ತಿರುವುದಷ್ಟೇ ಪಕ್ಕಾ, ಉಳಿದಂತೆ ನಾಯಕಿ ಸೇರಿದಂತೆ ಇತರೆ ಕಲಾವಿದರ ಹುಡುಕಾಟ ನಡೆಯುತ್ತಿದೆ. ಯತಿರಾಜ್‌ ಅವರ ಚೊಚ್ಚಲ ಚಿತ್ರ “ಪೂರ್ಣಸತ್ಯ’ ಸಮಾಗಮ ಕ್ರಿಯೇಷನ್ಸ್‌ ಬ್ಯಾನರ್‌ನಡಿ ತಯರಾಗುತ್ತಿದೆ. “ಇದೊಂದು ಹೊಸಬಗೆಯ ಚಿತ್ರವಾಗಿದ್ದು, ರೆಗ್ಯುಲರ್‌ ಪ್ಯಾಟ್ರನ್‌ ಸಿನಿಮಾಗಳಿಗಿಂತಲೂ ಹೊಸತನದಿಂದ ಕೂಡಿರುತ್ತೆ. ಇನ್ನು “ಪೂರ್ಣ ಸತ್ಯ’ ಕಥೆ ಬಗ್ಗೆ ಹೇಳುವುದಾದರೆ, ಇಲ್ಲಿ ಮೂರು ಪ್ರಮುಖ ಪಾತ್ರಗಳೇ ಹೈಲೈಟ್‌.

ನಮ್ಮನ್ನು ನಾವು ನೋಡಿಕೊಳ್ಳುವ ಪ್ರಯತ್ನ ಇಲ್ಲಿದೆ. ಅವರು ಸರಿ ಇಲ್ಲ, ಇವರು ಸರಿ ಇದ್ದಾರೆ, ನಾವೇ ಶ್ರೇಷ್ಠ ಅಂತ ಅಂದುಕೊಳ್ಳುತ್ತೇವೆ. ನಮ್ಮ ಅನುಕೂಲಕ್ಕೆ ತಕ್ಕಂತೆಯೇ ನಾವು ಬದಲಾಗುತ್ತೀವಿ. ಆಸ್ಪತ್ರೆಗೆ ಹೋದರೆ, ಬದುಕಿನ ಬಗ್ಗೆ ಕಾಳಜಿ ಬರುತ್ತೆ, ಸ್ಮಶಾನ ಕಡೆ ಹೋದರೆ, ಬದುಕು ಇಷ್ಟೇನಾ ಎಂಬ ವೈರಾಗ್ಯ ಬರುತ್ತೆ, ವಾಸ್ತವತೆಯ ಮಗ್ಗಲು ಬದಲಿಸಿದಾಗ ಮಾತ್ರ ಸತ್ಯದ ಅರಿವಾಗುತ್ತೆ. ಇವೆಲ್ಲವೂ ಈ ಚಿತ್ರದಲ್ಲಿರುತ್ತೆ. ಈ ವಿಷಯ ಇಟ್ಟುಕೊಂಡು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡುತ್ತೇನೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಯತಿರಾಜ್‌.

ಚಿತ್ರಕ್ಕೆ ಯತಿರಾಜ ಜೊತೆಗೆ ಶ್ರೀಕಾಂತ್‌ ಎಂಬುವವರು ಮಾತುಗಳನ್ನು ಪೋಣಿಸುತ್ತಿದ್ದಾರೆ. ಅರುಣ್‌ ಸಹ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿ.ಎಲ್‌.ಬಾಬು ಕ್ಯಾಮೆರಾ ಹಿಡಿದರೆ, ಮಾರುತಿ ಮೀರಜ್‌ಕರ್‌ ಎರಡು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ತೀರ್ಥಹಳ್ಳಿ, ಸಕಲೇಶಪುರ ಸುತ್ತಮುತ್ತ ಸುಮಾರು 25 ದಿನಗಳ ಕಾಲ ಚಿತ್ರೀಕರಿಸುವ ಯೋಜನೆ ನಿರ್ದೇಶಕರಿಗಿದೆ. ಸೆಪ್ಟೆಂಬರ್‌ನಲ್ಲಿ “ಪೂರ್ಣಸತ್ಯ’ ಶುರುವಾಗಲಿದೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.