ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಹದ್ದೂರ್’ ಚೇತನ್ ಕುಮಾರ್
Team Udayavani, Jun 13, 2021, 12:35 PM IST
ಬೆಂಗಳೂರು : ಚಿತ್ರರಂಗದ ಬಹದ್ದೂರು ಸಿನಿಮಾ ಖ್ಯಾತಿಯ ನಿರ್ದೇಶಕ ಚೇತನ್ ಕುಮಾರ್ ಅವರು ಇಂದು (ಜೂ.13) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿ ಮಠದಲ್ಲಿ ಸರಳವಾಗಿ ನಡೆದ ಕಲ್ಯಾಣದಲ್ಲಿ ಮಾನಸಾ ಹಾಗೂ ಚೇತನ್ ಕುಮಾರ್ ಸತಿ ಪತಿಯಾಗಿದ್ದಾರೆ.
ಮಾನಸಾ ಅವರು ಚೇತನ್ಗೆ ಸ್ವಂತ ಅತ್ತೆಯ ಮಗಳು ಎಂಬುದು ವಿಶೇಷ. ಬಹಳ ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ಇಂದು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಇನ್ನು ಈ ಈ ಶುಭ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಕೆಲವು ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ಪುನೀತ್ ರಾಜ್ಕುಮಾರ್, ಧ್ರುವ ಸರ್ಜಾ, ಶ್ರೀಮುರಳಿ, ಉಮಾಪತಿ ಶ್ರೀನಿವಾಸ್ ಗೌಡ, ನಿರ್ದೇಶಕ ಮಹೇಶ್ ಕುಮಾರ್ ಮುಂತಾದವರು ಮದುವೆಗೆ ಆಗಮಿಸಿ ನವ ಜೋಡಿಗೆ ಆಶೀರ್ವಾದ ಮಾಡಿದರು. ಲಾಕ್ಡೌನ್ ಕಾರಣದಿಂದ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ.