![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Kannada Cinema; ಹೊಸ ಗೆಟಪ್ನಲ್ಲಿ ನಿರ್ದೇಶಕ ದಿನಕರ್
Team Udayavani, Dec 3, 2023, 11:06 AM IST
![ಹೊಸ ಗೆಟಪ್ನಲ್ಲಿ ನಿರ್ದೇಶಕ ದಿನಕರ್](https://www.udayavani.com/wp-content/uploads/2023/12/dinakar-620x342.jpg)
ದಿನಕರ್ ತೂಗುದೀಪ ಅವರು ನಿರ್ದೇಶಕರಾಗಿ ಚಿತ್ರರಂಗದಲ್ಲಿ ತಮ್ಮದೇ ಸ್ಥಾನ ಪಡೆದಿರುವುದು ನಿಮಗೆ ಗೊತ್ತೇ ಇದೆ. “ಸಾರಥಿ’, “ನವಗ್ರಹ’, “ಜೊತೆ ಜೊತೆಯಲಿ’ ಸಿನಿಮಾ ಮೂಲಕ ನಿರ್ದೇಶಕರಾಗಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿಕೊಂಡಿರುವ ದಿನಕರ್ಗೆ ಈಗ ನಟರಾಗಿಯೂ ಬೇಡಿಕೆ ಇದೆ. ಹಾಗೆ ನೋಡಿದರೆ ನಟನೆಯಲ್ಲಿ ಮಿಂಚಿ, ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿರುವುದು ಅವರ ಸಹೋದರ ದರ್ಶನ್. ಈಗ ದಿನಕರ್ ಕೂಡಾ ನಟನೆಯತ್ತ ವಾಲುತ್ತಿದ್ದಾರೆ. ಅದರಲ್ಲೂ ಹಳೆಯ ಡಾನ್ ಗೆಟಪ್ನಲ್ಲಿ ಅವರ ತಂದೆಯನ್ನೇ ಹೋಲುತ್ತಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಝಿಯಾಗುವ ಲಕ್ಷಣ ಕಾಣುತ್ತಿದೆ.
ಸದ್ಯ ದಿನಕರ್ “ಕೈವ’ ಸಿನಿಮಾದಲ್ಲಿ ನಟಿಸಿದ್ದು, ಅವರ ಲುಕ್ ಬಿಡುಗಡೆಯಾಗಿದೆ. ಅವರ ಹೊಸ ಗೆಟಪ್ ನೋಡಿದವರು ಫಿದಾ ಆಗಿದ್ದಾರೆ. “ನಿಮ್ಮ ತಂದೆಯನ್ನೇ ನೋಡಿದಂತಾಗುತ್ತಿದೆ’ ಎಂಬ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಇದು ದಿನಕರ್ಗೆ ಖುಷಿ ಕೊಟ್ಟಿದೆ.
“ಅಪ್ಪನ ಲುಕ್ ನನಗೆ ಬಂದರೆ, ನಟನೆ ದರ್ಶನ್ಗೆ ಬಂದಿದೆ. ಇವತ್ತು ನಾನು ನಟಿಸಲು ಕಾರಣ “ಕೈವ’ ಸಿನಿಮಾದ ನಿರ್ದೇಶಕ ಜಯತೀರ್ಥ ಅವರು. ಅವರು ಹೇಳಿದ್ದನ್ನಷ್ಟೇ ಮಾಡಿದ್ದೀನಿ. ಎಲ್ಲಾ ಕ್ರೆಡಿಟ್ ಅವರಿಗೆ ಸಲ್ಲಬೇಕು’ ಎನ್ನುತ್ತಾರೆ ದಿನಕರ್.
ಸದ್ಯ ದಿನಕರ್ “ರಾಯಲ್’ ಎಂಬ ಸಿನಿಮಾವನ್ನು ನಿರ್ದೇಶಿಸಿ ದ್ದಾರೆ. ಈ ಹಿಂದೆ ಪುನೀತ್ ರಾಜ್ಕುಮಾರ್ ಅವರ ಸಿನಿಮಾ ಮಾಡಲು ಎಲ್ಲಾ ಸಿದ್ಧತೆಗಳು ನಡೆದಿತ್ತು. ಆದರೆ, ಪುನೀತ್ ನಿಧನದ ನಂತರ ಆ ಪ್ರಾಜೆಕ್ಟ್ ಡ್ರಾಪ್ ಆಗಿತ್ತು. ಈಗ “ಕಿಸ್’ ಹೀರೋ ವಿರಾಟ್ ನಾಯಕರಾಗಿರುವ “ರಾಯಲ್’ ಸಿನಿಮಾವನ್ನು ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.