ಬ್ರಾಹ್ಮಣರ ಕ್ಷಮೆ ಕೋರಿದ ಕಿಶೋರ್:ಪೊಗರು ಚಿತ್ರದ 14 ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಗೆ
Team Udayavani, Feb 23, 2021, 3:32 PM IST
ಬೆಂಗಳೂರು : ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿರುವ ನಿರ್ದೇಶಕ ನಂದಕಿಶೋರ್, ಆಕ್ಷೇಪಾರ್ಹ ದೃಶ್ಯಗಳನ್ನು ಚಿತ್ರದಿಂದ ತೆಗೆಯಲು ಒಪ್ಪಿಕೊಂಡಿದ್ದಾರೆ.
ಇಂದು ( ಫೆ.23) ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರ ಜತೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ನಿರ್ದೇಶಕ, ನಮಗೆ ಯಾವುದೇ ಸಮುದಾಯವನ್ನು ಅವಮಾನಗೊಳಿಸುವ ಹಾಗೂ ಯಾರಿಗೂ ವೈಯಕ್ತಿಕವಾಗಿ ನೋವು ಮಾಡುವ ಉದ್ದೇಶ ಇರಲಿಲ್ಲ. ಸನ್ನಿವೇಶಕ್ಕೆ ಅಗತ್ಯವೆಂದು ಆ ದೃಶ್ಯಗಳನ್ನು ಶೂಟ್ ಮಾಡಲಾಗಿತ್ತು. ಒಬ್ಬರನ್ನು ನೋಯಿಸಿ ಹಣ ಗಳಿಕೆ ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಆ ದೃಶ್ಯಗಳಿಂದ ನೋವಾಗಿದ್ದರೆ ನಾನು ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೋರುತ್ತೇನೆ ಎಂದರು.
ವಿವಾದಿತ ದೃಶ್ಯಗಳನ್ನು ಡಿಲೀಟ್ ಮಾಡಲು ಎರಡು ದಿನ ಕಾಲಾವಕಾಶ ಕೇಳಿರುವ ನಂದ ಕಿಶೋರ್, ಇವತ್ತಿನಿಂದಲೇ ಕಾರ್ಯೋನ್ಮುಖರಾಗುವುದಾಗಿ ಭರವಸೆ ನೀಡಿದರು. ಜತೆಗೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇನೆ ಎಂದರು.
ಇದೇ ವೇಳೆ ಮಾತಾಡಿದ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಪೊಗರು ಚಿತ್ರದಲ್ಲಿ ನಮ್ಮ ಸಮುದಾಯಕ್ಕೆ ಅಪಮಾನ ಮಾಡಿರುವಂತಹ ದೃಶ್ಯಗಳನ್ನು ನೋಡಿ ನೋವಾಯಿತು. ನಿರ್ದೇಶಕರು ಚಿತ್ರದಲ್ಲಿಯ ವಿವಾದಿತ 14 ದೃಶ್ಯಗಳನ್ನು ತೆಗೆಯುವಂತೆ ನಾವು ಮಾಡಿರುವ ಮನವಿಗೆ ಒಪ್ಪಿಕೊಂಡಿದ್ದಾರೆ. ಇನ್ಮುಂದೆ ಬ್ರಾಹ್ಮಣರನ್ನು ಕೆಣಕಲು ಹೋಗಬೇಡಿ, ನಮ್ಮ ಸಮಾಜಕ್ಕೆ ಅವಮಾನ ಮಾಡದಿರಿ ಎಂದು ರಾಜಕಾರಣಿಗಳಿಗೆ ಹಾಗೂ ಚಿತ್ರರಂಗಕ್ಕೆ ಪತ್ರಿಕಾಗೋಷ್ಟಿ ಮೂಲಕ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು