ವಿಕಲಚೇತನ ವಿಶ್ವಾಸ್‌ ಈಗ ಹೀರೋ

ಅರಬ್ಬೀ ಚಿತ್ರಕ್ಕೆ ಚೈತ್ರಾರಾವ್‌ ನಾಯಕಿ

Team Udayavani, Nov 9, 2019, 6:00 AM IST

Arabbi

ಕನ್ನಡದಲ್ಲಿ ಈಗಾಗಲೇ ರಿಯಲ್‌ ಲೈಫ್ ಸ್ಟೋರಿ ಕುರಿತ ಚಿತ್ರಗಳು ಸಾಕಷ್ಟು ಬಂದಿವೆ. ಆ ಸಾಲಿಗೆ ಈಗ “ಅರಬ್ಬೀ’ ಸೇರಿದೆ. ಈ ಚಿತ್ರದ ವಿಶೇಷವೆಂದರೆ, ಚಿಕ್ಕ ವಯಸ್ಸಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಈಜು ಸ್ಫರ್ಧೆಯಲ್ಲಿ ಬೆಳ್ಳಿ ಹಾಗೂ ಕಂಚು ಪದಕ ಪಡೆದು ಹಲವು ಪ್ರಶಸ್ತಿ, ಪುರಸ್ಕಾರಕ್ಕೆ ಪಾತ್ರವಾಗಿರುವ ಅಪ್ಪಟ ಕನ್ನಡಿಗ ಕೆ.ಎಸ್‌.ವಿಶ್ವಾಸ್‌ ಅವರ ಕುರಿತ ಸಿನಿಮಾ ಎಂಬುದು ವಿಶೇಷ. ಕೆ.ಎಸ್‌.ವಿಶ್ವಾಸ್‌ ತಮ್ಮ ಎರಡೂ ಕೈಗಳನ್ನು ಕಳೆದುಕೊಂಡರೂ ಅವರ ಸಾಧನೆ ಮಾತ್ರ ದೊಡ್ಡದು.

“ಅರಬ್ಬೀ’ ಚಿತ್ರದ ವಿಶ್ವಾಸ್‌ ಅವರ ರಿಯಲ್‌ ಸ್ಟೋರಿ ಒಳಗೊಂಡಿದ್ದು, ಆ ಚಿತ್ರದಲ್ಲಿ ಅವರೇ ನಾಯಕರಾಗುತ್ತಿರುವುದು ವಿಶೇಷ. ಎರಡೂ ಕೈಗಳಿಲ್ಲದಿದ್ದರೂ ವಿಶ್ವಾಸ್‌, ಈಜು, ಕರಾಟೆ, ಡ್ಯಾನ್ಸ್‌ ಎಲ್ಲವನ್ನೂ ಕರಗತ ಮಾಡಿಕೊಂಡಿದ್ದಾರೆ. ಹಲವು ರಿಯಾಲಿಟಿ ಷೋಗಳಲ್ಲಿ ಡ್ಯಾನ್ಸ್‌ ಕಾರ್ಯಕ್ರಮ ಕೊಟ್ಟು ಸೈ ಎನಿಸಿಕೊಂಡಿದ್ದಾರೆ. ಕುಂಗ್‌ಫ‌ೂ ಮಾರ್ಷಲ್‌ ಆರ್ಟ್ಸ್ನಲ್ಲಿ ರೆಡ್‌ ಬೆಲ್ಟ್ ಪಡೆದಿದ್ದಾರೆ. ಸಾಗರದಾಚೆಗೂ ಹೋಗಿ ದೇಶದ ಪರ ಆಡಿ ಈಜುಸ್ಫರ್ಧೆಯಲ್ಲಿ ಎರಡು ಬೆಳ್ಳಿ ಪದಕ ಪಡೆದು ಕೀರ್ತಿ ತಂದಿದ್ದಾರೆ.

ಈಗ ವಿಶ್ವಾಸ್‌ ಅವರನ್ನು ಹೀರೋ ಮಾಡಿ ಸಿನಿಮಾ ಮಾಡುತ್ತಿರುವುದು ರಾಜ್‌ಕುಮಾರ್‌. ರಾಜ್‍ಕುಮಾರ್‌ಗೆ ಇದು ಮೊದಲ ನಿರ್ದೇಶನದ ಚಿತ್ರ. ಒಂದು ದಶಕದಿಂದಲೂ ಚಿತ್ರರಂಗದಲ್ಲಿದ್ದು ಅನುಭವ ಪಡೆದಿದ್ದಾರೆ. ಈ ಹಿಂದೆಯೇ ಇವರು ವಿಶ್ವಾಸ್‌ಗೆ “ಚಾಂಪಿಯನ್‌’ ಎಂಬ ಹೆಸರಿನ ಚಿತ್ರ ಮಾಡುವುದಾಗಿ ಹೇಳಿದ್ದರು. ಆದರೆ, ಅದು ಸೆಟ್ಟೇರಲಿಲ್ಲ. ಈಗ ಇಬ್ಬರ ಕಾಂಬಿನೇಷನ್‌ನಲ್ಲಿ “ಅರಬ್ಬೀ’ ಚಿತ್ರ ಮೂಡಿಬರುತ್ತಿದೆ. ಈ ಚಿತ್ರವನ್ನು ಚೇತನ್‌ ಸಿ.ಎಸ್‌. ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರಕ್ಕೆ “ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ಚೈತ್ರಾ ರಾವ್‌ ನಾಯಕಿಯಾಗಿದ್ದಾರೆ. “ಮಾಯಬಜಾರ್‌’ ಬಳಿಕ ಒಪ್ಪಿದ ಚಿತ್ರವಿದು. ಚಿತ್ರಕ್ಕೆ ಆನಂದ್‌ ಛಾಯಾಗ್ರಹಣವಿದೆ. ಆಯುಷ್‌ ಮಂಜು ಸಂಗೀತವಿದೆ. “ಅರಬ್ಬೀ’ ಶೀರ್ಷಿಕೆ ಸಂಬಂಧಿಸಿದಂತೆ, ಕಥೆ ಸಮುದ್ರ ದಂಡೆಯಲ್ಲೇ ಸಾಗುವುದರಿಂದ ಉಡುಪಿ ಸುತ್ತಮುತ್ತ ಹಾಗು ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ನವೆಂಬರ್‌ ಅಂತ್ಯಕ್ಕೆ “ಅರಬ್ಬೀ’ ಚಿತ್ರಕ್ಕೆ ಚಾಲನೆ ಸಿಗಲಿದೆ ಎಂಬುದು ನಿರ್ದೇಶಕರ ಮಾತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.