ದಿವಾಕರನ ಸಾಹಸಗಳು


Team Udayavani, Feb 2, 2018, 12:31 PM IST

Bell-Bottom.jpg

“ಬೆಲ್‌ ಬಾಟಮ್‌’ ಎನ್ನುವ ಚಿತ್ರವನ್ನು ಜಯತೀರ್ಥ ನಿರ್ದೇಶಿಸುತ್ತಿರುವುದು ಗೊತ್ತಿದ್ದೇ. ಪ್ರತಿ ಚಿತ್ರದಲ್ಲೂ ಒಂದೊಂದು ಹೊಸ ಜಾನರ್‌ ಪ್ರಯತ್ನಿಸುವ ಜಯತೀರ್ಥ ಈ ಬಾರಿ ಏನು ಮಾಡುತ್ತಿರಬಹುದು ಎಂಬ ಕುತೂಹಲ ಎಲ್ಲರಿಗೂ ಇತ್ತು. ಈಗ ಕೊನೆಗೂ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. “ಬೆಲೆ ಬಾಟಮ್‌’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದ್ದು, ಈ ಸಂದರ್ಭದಲ್ಲಿ ತಮ್ಮ ಹೊಸ ಸಾಹಸದ ಬಗ್ಗೆ ಜಯತೀರ್ಥ ಹೇಳಿಕೊಂಡಿದ್ದಾರೆ.

ಈ ಬಾರಿ ಜಯತೀರ್ಥ ಒಂದು ಪತ್ತೇದಾರಿ ಸಿನಿಮಾ ಮಾಡುತ್ತಿದ್ದಾರೆ. ಪತ್ತೇದಾರಿ ದಿವಾಕರನ ಸಾಹಸಗಳನ್ನು ಈ ಚಿತ್ರದಲ್ಲಿ ಅವರು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. “ಇದೊಂದು ಜೇಮ್ಸ್‌ ಬಾಂಡ್‌ನಿಂದ ಸ್ಫೂರ್ತಿ ಪಡೆದ ಚಿತ್ರ. 80ರ ದಶಕದ ಕಾಲಘಟ್ಟದಲ್ಲಿ ದಿವಾಕರ ಎಂಬ ಕಾಲ್ಪನಿಕ ಪತ್ತೇದಾರನೊಬ್ಬನ ಕಥೆ ಇದು. ಮೊಬೈಲ್‌-ಟಿವಿ-ಸಿಸಿಟಿವಿ ಇಲ್ಲದ ಕಾಲಘಟ್ಟ, ಪೊಲೀಸರ ತನಿಖೆ, ಪತ್ತೇದಾರಿ ತಂತ್ರಗಳು ….

ಇವೆಲ್ಲಾ ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಶೂಟಿಂಗ್‌ ಮಾತ್ರ ಡಿಜಿಟಲ್‌ನಲ್ಲಿ ಮಾಡುತ್ತಿದ್ದೇವೆ ಎನ್ನುವುದು ಬಿಟ್ಟರೆ, ಮಿಕ್ಕಿದ್ದೆಲ್ಲಾ 80ರ ದಶಕವೇ. ಅಂತಹದ್ದೊಂದು ಪರಿಸರ ಕಟ್ಟಿಕೊಡುವ ಸಲುವಾಗಿ ಬನವಾಸಿ, ಜೋಗ, ಶಿವಮೊಗ್ಗ, ಉಡುಪಿ, ಹಿರಿಯಡ್ಕ, ಹೆಬ್ರಿ ಮುಂತಾದ ಕಡೆ ಚಿತ್ರೀಕರಣ ಮಾಡುತ್ತಿದ್ದೇವೆ’ ಎನ್ನುತ್ತಾರೆ ಜಯತೀರ್ಥ.

ಇಲ್ಲಿ ರಿಷಭ್‌ ಶೆಟ್ಟಿ, ಪತ್ತೇದಾರಿ ದಿವಾಕರನ ಪಾತ್ರ ಮಾಡಿದರೆ, ಕುಸುಮಾ ಎಂಬ ಪಾತ್ರದಲ್ಲಿ ಹರಿಪ್ರಿಯಾ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ನಟ-ನಿರ್ದೇಶಕ ಶಿವಮಣಿ ಇಲ್ಲೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರಂತೆ. ವಿಶೇಷವೆಂದರೆ, ಚಿತ್ರದಲ್ಲಿ ಒಬ್ಬೊಬ್ಬರದ್ದು ಒಂದೊಂದು ವಿಭಿನ್ನ ಹೆಸರುಗಳು. ಜೋಡಿ ನಂಜಪ್ಪ, ಗೂಬೆ ಖಾನ್‌, ಸಗಣಿ ಪಿಂಟೋ, ರೇಡಿಯೋ ರಾಜ, ಮರಕುಟುಕ … ಹೀಗೆ ಒಂದೊಂದು ಪಾತ್ರಕ್ಕೂ ಒಂದೊಂದು ವಿಭಿನ್ನ ಹೆಸರಿಡಲಾಗಿದೆಯಂತೆ.

ಚಿತ್ರಕ್ಕೆ ಟಿ.ಕೆ. ದಯಾನಂದ್‌ ಅವರು ಕಥೆ ಬರೆದಿದ್ದು, ಮಾಭಿಷೇ, ನರಸಿಂಹಯ್ಯ, ಜಿಂದೆ ನಂಜುಂಡಸ್ವಾಮಿ ಮುಂತಾದ ಕಾದಂಬರಿಕಾರರ ಕಾದಂಬರಿಗಳನ್ನು ನೆನಪಿಸುವ ಕಥೆ ಇದಾಗಲಿದೆಯಂತೆ. ಒಂಥರಾ ಆ ಕಾದಂಬರಿಗಳಿಗೆ ಮತ್ತು ಪತ್ತೆದಾರರಿಗೆ ಇದೊಂದು ಚಿಕ್ಕ ಟ್ರಿಬ್ಯೂಟ್‌ ಎಂದು ಹೇಳಲು ಚಿತ್ರತಂಡ ಮರೆಯುವುದಿಲ್ಲ. ಈ ಚಿತ್ರವನ್ನು ಗೋಲ್ಡನ್‌ ಹಾರ್ಸ್‌ ಸಿನಿಮಾಸ್‌ನಡಿ ಸಂತೋಷ್‌ ಕುಮಾರ್‌ ಎನ್ನುವವರು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.