ಕಳಪೆಯಾಗಿ ನೋಡಬೇಡಿ, ಸಿನಿಮಾ ಗೆದ್ದರೆ ಯೋಗ್ಯತೆ ಬರುತ್ತದೆ


Team Udayavani, Mar 12, 2019, 5:51 AM IST

ayogya-birbal.jpg

ಸಾಮಾನ್ಯವಾಗಿ ಯಾವುದೇ ಚಿತ್ರವಿರಲಿ, ಅದು ಗೆದ್ದರೆ ಅಥವಾ ಸೋತರೆ ಅದರ ಮೊದಲ ಕ್ರೆಡಿಟ್‌ ಹೋಗುವುದು ಅದರ ನಾಯಕ ನಟನಿಗೆ. ಇದು ಆರಂಭದಿಂದಲೂ ಚಿತ್ರರಂಗದಲ್ಲಿ ನಡೆದುಕೊಂಡು ಬಂದಿರುವ ರೂಢಿ. ಒಂದು ಸಿನಿಮಾದ ಗೆಲುವು ಅಥವಾ ಸೋಲು ಅದರ ನಾಯಕ ನಟನನ್ನು ಯಾವ ಹಂತಕ್ಕೆ ಬೇಕಾದರೂ ಕರೆದುಕೊಂಡು ಹೋಗುತ್ತದೆ. ಇದಕ್ಕೆ ಚಿತ್ರರಂಗದಲ್ಲೂ ಕೂಡ ಹತ್ತಾರು, ಸಾಕ್ಷಾತ್‌ ನಿದರ್ಶನಗಳು ಸಿಗುತ್ತವೆ.

ಕೆಲವು ನಾಯಕ ನಟರು ಈ ವಾಸ್ತವವನ್ನು ಅರ್ಥ ಮಾಡಿಕೊಂಡು ಸಿನಿಮಾ ಮಾಡುತ್ತಾರೆ. ಇನ್ನು ಕೆಲವರಿಗೆ ಇದು ಅರ್ಥವಾಗುವುದಿಲ್ಲ. ಮತ್ತೆ ಕೆಲವರು ಅರ್ಥವಾದ್ರೂ ಅರ್ಥವಾಗದಂತೆ ಇರುತ್ತಾರೆ. ಈಗ ಯಾಕೆ ಈ ವಿಷಯ ಅಂತೀರಾ? ಅದಕ್ಕೊಂದು ಕಾರಣವಿದೆ. ಕನ್ನಡ ಚಿತ್ರರಂಗದಲ್ಲಿ ಹಲವು ನಾಯಕರ ಜೊತೆ ಸಹ ನಟನಾಗಿ, ಹಾಸ್ಯ ನಟನಾಗಿ ಅನೇಕ ಪಾತ್ರಗಳಲ್ಲಿ ಅಭಿನಯಿಸಿ, ನಂತರ ನಾಯಕ ನಟನಾಗಿ ಬಡ್ತಿ ಪಡೆದವರು ನೀನಾಸಂ ಸತೀಶ್‌.

ಚಿತ್ರರಂಗದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿರುವ ಸತೀಶ್‌ ಕೇವಲ ನಟನಾಗಿ ಮಾತ್ರವಲ್ಲದೆ, ನಿರ್ಮಾಪಕನಾಗಿ, ಇದೀಗ ನಿರ್ದೇಶಕನಾಗಿಯೂ ಗುರುತಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸತೀಶ್‌ ತಮ್ಮೊಳಗಿರುವ ನಾಯಕ ನಟನ ಮನದಾಳದ ನೋವನ್ನು ಹಂಚಿಕೊಂಡಿದ್ದಾರೆ. ಸತೀಶ್‌ ಮೊದಲ ಬಾರಿಗೆ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಂಡಿದ್ದ “ಟೈಗರ್‌ ಗಲ್ಲಿ’ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು.

ಆದರೆ, ಆ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಸೋಲು ಕಂಡಿತು. ಆ ಚಿತ್ರ ಸೋತರೂ ಅದೇ ದಿನ “ಅಯೋಗ್ಯ’ ಸಿನಿಮಾ ಶುರು ಮಾಡಿದ್ದರು. ಆ ಚಿತ್ರ ಶುರುವಾದ ನಂತರ ಹತ್ತಾರು ಸಮಸ್ಯೆಗಳು ಎದುರಾಯಿತು. ಕೊನೆಗೆ ಈ ಎಲ್ಲ ಸಮಸ್ಯೆಗಳನ್ನು ಎದುರಿಸಿದ್ದ ಚಿತ್ರ ಅಂತಿಮವಾಗಿ ಜನರ ಮುಂದೆ ಗೆಲುವಿನ ನಗೆ ಬೀರಿತ್ತು. ಇದರ ಹಿಂದಿನ ನೋವನ್ನು ತೆರೆದಿಟ್ಟ ಸತೀಶ್‌, “ಯಾವ ಹೀರೋನು ಕಳಪೆಯಾಗಿ ನೋಡಬೇಡಿ.

ಆತ ಒಂದೇ ಒಂದು ಅವಕಾಶ, ಒಂದೇ ಸಿನಿಮಾದಿಂದ ಎದ್ದು ಬರುತ್ತಾನೆ. ಯಾರು ಏನು ಬೇಕಾದರೂ ಆಗಬಹುದು. ಅದಕ್ಕೆ ಯಾವ ಕಲಾವಿದರ ಬಗ್ಗೆ ಏನು ಹೇಳಬೇಡಿ. ಅಂದು ನೋವು ತಿಂದು, ನಾವು ಇವತ್ತು ಸಿನಿಮಾದ ಸಂಭ್ರಮಾಚರಣೆ ಮಾಡುತ್ತಿದ್ದೇವೆ. ಇದರ ಹಿಂದೆ ತುಂಬ ದುಃಖಗಳು ಇವೆ’ ಎಂದರು. “ಸಿನಿಮಾ ಗೆದ್ದರೇ ಎಲ್ಲ ನನ್ನಿಂದ, ನಂದೇ ಸಿನಿಮಾ ಎನ್ನುತ್ತಾರೆ. ಆದರೆ, ಸಿನಿಮಾ ಸೋತರೇ ಹೀರೋ ಮೇಲೆ ಹಾಕುತ್ತಾರೆ.

ಆ ಹೀರೋಗೆ ಓಪನಿಂಗ್‌ ಇಲ್ಲ, ಕಲೆಕ್ಷನ್‌ ಇಲ್ಲ, ಟಿವಿ ರೈಟ್ಸ್‌ ಸೇಲ್‌ ಆಗಲ್ಲ, ಕೈ ಇಲ್ಲ, ಕಾಲ್‌ ಇಲ್ಲ.. ಅದು ಇಲ್ಲ.. ಇದು ಇಲ್ಲ.. ಹೀಗೆ ಏನೇನೋ ಹೇಳುತ್ತಾರೆ. ಆದರೆ ಸಿನಿಮಾವೊಂದು ದೊಡ್ಡ ಮಟ್ಟದಲ್ಲಿ ಹಿಟ್‌ ಆದ್ರೆ ಆ ಎಲ್ಲಾ ಮಾತುಗಳು ನಿಂತು ಹೋಗುತ್ತದೆ’ ಎಂದರು. ಅಂದಹಾಗೆ, ಸತೀಶ್‌ ಅವರ ಈ ಮನದಾಳದ ಮಾತುಗಳಿಗೆ ವೇದಿಕೆಯಾಗಿದ್ದು, ಅವರೇ ಅಭಿನಯಿಸಿ, ಕಳೆದ ವರ್ಷ ಯಶಸ್ವಿ ಪ್ರದರ್ಶನ ಕಂಡಿದ್ದ “ಅಯೋಗ್ಯ’ ಚಿತ್ರದ ಶತದಿನೋತ್ಸವ ಮತ್ತು ಶ್ರೀನಿ ನಿರ್ದೇಶಿಸಿ, ನಟಿಸಿರುವ “ಬೀರ್‌ಬಲ್‌’ ಚಿತ್ರದ ಐವತ್ತನೇ ದಿನದ ಸಮಾರಂಭ.

ಇದೇ ವೇಳೆ “ಅಯೋಗ್ಯ’ ಸಿನಿಮಾವನ್ನು ಗೆಲ್ಲಿಸಿ, ತಮಗೆ ಮರಳಿ ಫಾರ್ಮ್ ಕಂಡುಕೊಳ್ಳುವಂತೆ ಮಾಡಿದ ಜನರಿಗೆ ಧನ್ಯವಾದ ಹೇಳಲು ಮರೆಯಲಿಲ್ಲ ಸತೀಶ್‌. ಈ ಎರಡೂ ಚಿತ್ರಗಳನ್ನು ಟಿ.ಆರ್‌.ಚಂದ್ರಶೇಖರ್‌ ತಮ್ಮ ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ನಡಿ ನಿರ್ಮಿಸಿದ್ದಾರೆ. 100 ಹಾಗೂ 50ರ ಸಂಭ್ರಮದಲ್ಲಿ ಚಿತ್ರಕ್ಕೆ ದುಡಿದ ಎಲ್ಲರನ್ನು ಚಿತ್ರತಂಡ ಸನ್ಮಾನಿಸಿತು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.