ರಾಧಿಕಾ ಹೆಚ್ಚು ಸಿನಿಮಾ ಒಪ್ಪಿಕೊಳ್ಳದಿರಲು ಕಾರಣವೇನು ಗೊತ್ತಾ?


Team Udayavani, Oct 9, 2018, 11:39 AM IST

radhika.jpg

ಒಂದು ಸಮಯದಲ್ಲಿ ವರ್ಷಕ್ಕೆ ರಾಧಿಕಾ ಅವರ ಮೂರ್‍ನಾಲ್ಕು ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ, ಈಗ ವರ್ಷಕ್ಕೆ ಒಂದು ಸಿನಿಮಾ ಕೂಡಾ ಬಿಡುಗಡೆಯಾಗುವುದು ಕಷ್ಟ. ಸಹಜವಾಗಿಯೇ ಒಂದು ಪ್ರಶ್ನೆ ಮೂಡುತ್ತದೆ. ಚಿತ್ರರಂಗದಲ್ಲಿ ಅಷ್ಟೊಂದು ಆ್ಯಕ್ಟೀವ್‌ ಆಗಿದ್ದ ನಟಿ ಯಾಕೆ ಸಿನಿಮಾಗಳಿಂದ ದೂರವಾಗುತ್ತಿದ್ದಾರೆ, ವರ್ಷಕ್ಕೆ ಒಂದು ಸಿನಿಮಾ ಬಿಡುಗಡೆಯಾಗದಷ್ಟು ಬಿಝಿಯಾದರಾ ಎಂದು. ಈ ಪ್ರಶ್ನೆಗೆ ಸ್ವತಃ ರಾಧಿಕಾ ಉತ್ತರಿಸುತ್ತಾರೆ. 

ರಾಧಿಕಾ ಹೇಳುವಂತೆ ಅವರಿಗೆ ವರ್ಷಕ್ಕೆ ಒಂದೆರಡು ಸಿನಿಮಾವಾದರೂ ಬಿಡುಗಡೆಯಾಗಬೇಕೆಂಬ ಆಸೆ ಇದೆಯಂತೆ. ಆದರೆ, ಅವರದೇ ಆದ ಕಮಿಟ್‌ಮೆಂಟ್‌ಗಳಿಂದ ಸಿನಿಮಾಕ್ಕೆ ಸಮಯ ಮೀಸಲಿರಿಸಲು ಸಾಧ್ಯವಾಗುತ್ತಿಲ್ಲವಂತೆ. “ನಾನು 14ನೇ ವರ್ಷಕ್ಕೆ ಚಿತ್ರರಂಗಕ್ಕೆ ಬಂದಾಗ ಸಿನಿಮಾನೇ ನನ್ನ ಲೈಫ್. ಸಿನಿಮಾ ಬಿಟ್ಟು ಬೇರೇನೂ ಯೋಚನೆ ಮಾಡುತ್ತಿರಲಿಲ್ಲ. ಈಗ ಸಿನಿಮಾ ಒಂದು ಭಾಗವಾಗಿದೆ ಅಷ್ಟೇ. ಪ್ಯಾಶನ್‌ಗಾಗಿ ಸಿನಿಮಾ ಮಾಡುತ್ತಿದ್ದೇನೆ.

ಈಗ ಮೊದಲಿನ ತರಹ ಸಿನಿಮಾ ಒಪ್ಪಿಕೊಳ್ಳೋದು ಕಷ್ಟ. ಕನ್ನಡವಷ್ಟೇ ಅಲ್ಲದೇ, ಮಲಯಾಳಂ, ತಮಿಳಿನಿಂದಲೂ ಆಫ‌ರ್‌ ಬರುತ್ತಿವೆ. ಆದರೆ, ಡೇಟ್ಸ್‌ ಹೊಂದಿಸಲು ಸಾಧ್ಯವಾಗುತ್ತಿಲ್ಲ. ನನ್ನ ಮಗಳಿಗೂ ಸಮಯಕೊಡಬೇಕು. ಸಹಜವಾಗಿಯೇ ತಡವಾಗುತ್ತಾ ಹೋಗುತ್ತದೆ. ಮುಂದೆ ವರ್ಷಕ್ಕೆ ಎರಡು ಸಿನಿಮಾವಾದರೂ ಮಾಡಬೇಕೆಂದು ನಿರ್ಧರಿಸಿದ್ದೇನೆ’ ಎನ್ನುತ್ತಾರೆ ರಾಧಿಕಾ. ಜೊತೆಗೆ ಈ ಮೂಲಕ ಗಾಸಿಪ್‌ಗಳಿಗೆ ಉತ್ತರಿಸಬೇಕೆಂದು ಅವರು ನಿರ್ಧರಿಸಿದ್ದಾರೆ. 

ಯಾವ ಗಾಸಿಪ್‌, ಏನು ಉತ್ತರ ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ರಾಧಿಕಾ ಅವರು ಬೆಂಗಳೂರು ಬಿಟ್ಟು, ಮಂಗಳೂರಿನಲ್ಲಿ ಸೆಟ್ಲ ಆಗಿದ್ದಾರಂತೆ, ಮುಂದೆ ಸಿನಿಮಾ ಮಾಡೋದಿಲ್ವಂತೆ ಎಂಬೆಲ್ಲಾ ಗಾಸಿಪ್‌ಗಳು ಕೇಳಿಬಂದಿದ್ದವು. ಇದಕ್ಕೆ ರಾಧಿಕಾ ಸಿನಿಮಾ ಮೂಲಕ ಉತ್ತರ ಕೊಡಲು ನಿರ್ಧರಿಸಿದ್ದಾರೆ. “ಜನ ನಾನು ಇಲ್ಲಿ ಇಲ್ಲ ಎಂದು ಭಾವಿಸಿದ್ದಾರೆ. ಎಲ್ಲರಿಗೂ ಉತ್ತರ ಕೊಟ್ಟು ಸುಸ್ತಾಗಿ ಹೋಯಿತು.

ಇನ್ನು ನಾನು ಮಾತನಾಡುವುದರಲ್ಲಿ ಅರ್ಥವಿಲ್ಲ. ಸಿನಿಮಾ ಮೂಲಕ ಉತ್ತರಿಸಬೇಕು. ವರ್ಷಕ್ಕೆರಡು ಸಿನಿಮಾ ಬಿಡುಗಡೆಯಾದಾಗ ನಾನೆಲ್ಲಿದ್ದೇನೆ ಎಂಬುದು ಜನರಿಗೆ ಗೊತ್ತಾಗುತ್ತದೆ’ ಎಂದು ಸ್ಪಷ್ಟವಾಗಿ ಹೇಳುತ್ತಾರೆ ರಾಧಿಕಾ. ನೀವು ಸೂಕ್ಷ್ಮವಾಗಿ ಗಮನಿಸಿದರೆ, ರಾಧಿಕಾ ಇತ್ತೀಚೆಗೆ ಬೇರೆ ಬ್ಯಾನರ್‌ನ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿಲ್ಲ. ಯಾವುದಾದರೂ ಕಥೆ ಇಷ್ಟವಾದರೆ, ಅದನ್ನು ತಮ್ಮ ಬ್ಯಾನರ್‌ನಲ್ಲೇ ನಿರ್ಮಿಸಿ, ನಟಿಸುತ್ತಾರೆ.

ಯಾಕೆ ಈ ನಿರ್ಧಾರ ಎಂದರೆ,  ತನ್ನಿಂದ ಬೇರೆ ನಿರ್ಮಾಪಕರಿಗೆ ತೊಂದರೆಯಾಗಬಾರದು ಎಂಬ ಉತ್ತರ ಅವರಿಂದ ಬರುತ್ತದೆ. “ನಾನು ಒಮ್ಮೆ ಡೇಟ್‌ ಕೊಟ್ಟ ನಂತರ ಅವರು ಹೇಳಿದಾಗ ಚಿತ್ರೀಕರಣಕ್ಕೆ ಹೋಗಬೇಕು. ನನ್ನಿಂದ ಯಾವ ನಿರ್ಮಾಪಕರಿಗೂ ತೊಂದರೆಯಾಗಬಾರದು. ಅದೇ ಕಾರಣದಿಂದ ನನಗೆ ಬೇರೆ ಬ್ಯಾನರ್‌ಗಳಿಂದ ಅವಕಾಶ ಬಂದರೂ ತುಂಬಾ ಆಲೋಚಿಸಿ ಒಪ್ಪಿಕೊಳ್ಳುತ್ತೇನೆ. ಒಮ್ಮೆ ಕಮಿಟ್‌ ಆದ ನಂತರ ನಮ್ಮಿಂದ ಯಾರಿಗೂ  ತೊಂದರೆಯಾಗಬಾರದು’ ಎನ್ನುತ್ತಾರೆ.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.