ಭಾರತಿ ವಿಷ್ಣುವರ್ಧನ್‌ ಕುರಿತು ಸಾಕ್ಷ್ಯಚಿತ್ರ


Team Udayavani, Aug 16, 2018, 11:56 AM IST

bharathi.jpg

ಬುಧವಾರ ಸ್ವಾತಂತ್ರ್ಯೋತ್ಸವದ ದಿನ ಭಾರತಿ ವಿಷ್ಣುವರ್ಧನ್‌ ಅವರು ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡಿದ್ದಾರೆ. ಈ ಬಾರಿಯ ವಿಶೇಷತೆಯೆಂದರೆ, ಅವರ ಸಾಕ್ಷ್ಯಚಿತ್ರವೊಂದು ಪ್ರಾರಂಭವಾಗಿದ್ದು. ಈ ಡಾಕ್ಯುಮೆಂಟರಿಯನ್ನು ನಟ ಅನಿರುದ್ಧ್ ನಿರ್ದೇಶಿಸುತ್ತಿದ್ದು, ಈ ಸಾಕ್ಷ್ಯಚಿತ್ರದ ಮುಹೂರ್ತ ಭಾರತಿ ಅವರ ಜಯನಗರದ ಮನೆಯಲ್ಲಿ ನಡೆಯಿತು.

ಅನಿರುದ್ಧ್ ಅವರು ಈಗಾಗಲೇ ಕೀರ್ತಿ ಇನ್ನೋವೇಷನ್ಸ್‌ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಅದರಡಿ ಆರು ಕಿರುಚಿತ್ರಗಳನ್ನು ಮಾಡಿದ್ದಾರೆ. ಆ ಕಿರುಚಿತ್ರಗಳು ಇದೀಗ ವಿವಿಧ ಹಂತಗಳಲ್ಲಿದ್ದು, ಮುಂದಿನ ತಿಂಗಳು ಬಿಡುಗಡೆಯಾಗುವ ಸಾಧ್ಯತೆ. ಈ ಮಧ್ಯೆ, ಭಾರತಿ ವಿಷ್ಣುವರ್ಧನ್‌ ಕುರಿತ ಸಾಕ್ಷ್ಯಚಿತ್ರಕ್ಕೆ ಅನಿರುದ್ಧ್ ಕೈ ಹಾಕಿದ್ದಾರೆ. “ಅಮ್ಮನ ಬಗ್ಗೆ ಒಂದು ಸಾಕ್ಷ್ಯಚಿತ್ರ ಮಾಡಬೇಕು ಎಂದು ಬಹಳ ದಿನಗಳಿಂದ ಆಸೆಯಿತ್ತು. ಅದೀಗ ಕೈಗೂಡಿದೆ.

“ಅವರದ್ದು ಚಿತ್ರರಂಗದಲ್ಲಿ ಸುದೀìಘವಾದ ಜರ್ನಿ.ಐದು ದಶಕಗಳಲ್ಲಿ ಆರು ಭಾಷೆಗಳಲ್ಲಿ ನಟಸಿರುವ ಅವರು, ಮಗಳಾಗಿ, ಅಕ್ಕನಾಗಿ, ಸ್ನೇಹಿತೆಯಾಗಿ, ಗಾಯಕಿಯಾಗಿ, ಕಲಾವಿದೆಯಾಗಿ, ಅರ್ಧಾಂಗಿಯಾಗಿ, ತಾಯಿಯಾಗಿ, ಅಜ್ಜಿಯಾಗಿ, ಪದ್ಮಶ್ರೀ ಪುರಸ್ಕೃತರಾಗಿ, ಸಮಾಜಮುಖೀಯಾಗಿ ಹಲವಾರು ಅವತಾರಗಳನ್ನು ಎತ್ತಿದ್ದಾರೆ. ಇದೆಲ್ಲವನ್ನೂ ಎತ್ತಿಹಿಡಿಯುವ ಒಂದು ಸಾಕ್ಷ್ಯಚಿತ್ರ ಮಾಡಬೇಕು ಎಂಬುದು ನಮ್ಮ ಆಸೆ.

ಅವರನ್ನು ಬಹಳ ವರ್ಷಗಳಿಂದ ನೋಡಿಕೊಂಡು ಬಂದಿರುವ ನನಗೆ, ಅವರ ಕುರಿತು 100ಕ್ಕೂ ಹೆಚ್ಚು ಪ್ರಶ್ನೆಗಳಿವೆ. ಇನ್ನು ಕುಟುಂಬವರ್ಗ, ಸ್ನೇಹಿತರು, ಸಹಕಲಾವಿದರು ಹೀಗೆ ಸಾಕಷ್ಟು ಜನರನ್ನು ಮಾತನಾಡಿಸಬೇಕಿದೆ. ಹಾಗಾಗಿ ಈಗಲೇ ಇದು ಎಷ್ಟು ನಿಮಿಷದ ಸಾಕ್ಷ್ಯಚಿತ್ರವಾಗಬಹುದು ಎಂದು ನನಗೆ ಗೊತ್ತಿಲ್ಲ. ಈ ಸಾಕ್ಷ್ಯಚಿತ್ರಕ್ಕೆ “ಬಾಳ ಬಂಗಾರ’ ಎಂಬ ಹೆಸರಿಡಬೇಕು ಎಂದು ಯೋಚಿಸಿದ್ದೇನೆ’ ಎನ್ನುತ್ತಾರೆ ಅನಿರುದ್ಧ್.

ಮೈರಾ ಚಿತ್ರದಲ್ಲಿ ಭಾರತಿ ವಿಷ್ಣುವರ್ಧನ್‌-ಅನಿರುದ್ಧ್ ನಟನೆ: ಈ ಹಿಂದೆ “ರಾಜಾಸಿಂಹ’ ಚಿತ್ರದಲ್ಲಿ ತಾಯಿ ಮಗನಾಗಿ ಕಾಣಿಸಿಕೊಂಡಿದ್ದ ಭಾರತಿ ವಿಷ್ಣುವರ್ಧನ್‌ ಮತ್ತು ಅನಿರುದ್ಧ್, ಈಗ ಮತ್ತೆ ಇನ್ನೊಂದು ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಹೆಸರು “ಮೈರಾ’. ಈ ಚಿತ್ರವನ್ನು “ಅಭಯಹಸ್ತ’ ಚಿತ್ರವನ್ನು ನಿರ್ದೇಶಿಸಿರುವ ನವೀನ್‌ ನಿರ್ದೇಶಿಸುತ್ತಿದ್ದಾರೆ.

“ಅಭಯಹಸ್ತ’ ಚಿತ್ರದಲ್ಲಿ ಅನಿರುದ್ಧ್ ನಟಿಸಿದ್ದು, ಆ ಚಿತ್ರ 24ರ ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗುತ್ತಿದೆ. ಅದರ ಬೆನ್ನಲ್ಲೇ “ಮೈರಾ’ ಎಂಬ ಇನ್ನೊಂದು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ನವೀನ್‌. “ಮೈರಾ’ ಎಂಬುದು ಸಂಸ್ಕೃತದ ಪದವಾಗಿದ್ದು, ಸಾಮಾನ್ಯ ಮನುಷ್ಯನ ಕುರಿತಾದ ಚಿತ್ರವಾಗಿರುತ್ತದಂತೆ. ಭಾರತಿ ವಿಷ್ಣುವರ್ಧನ್‌, ಅನಿರುದ್ಧ್ ಮುಂತಾದವರು ನಟಿಸುತ್ತಿರುವ ಈ ಚಿತ್ರವು ಮೂರು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವುದು ವಿಶೇಷ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.