‘ಡಾಲರ್ಸ್‌ ಪೇಟೆ’ ಚಿತ್ರದಲ್ಲಿ ಬ್ಯಾಂಕ್ ಕಥಾನಕ


Team Udayavani, May 25, 2023, 4:31 PM IST

dollars pete kannada movie

ಡಾಲರ್ಸ್‌ ಪೇಟೆ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಮೋಹನ್‌ ಎನ್‌ ಮುನಿನಾರಾಯಣಪ್ಪ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ದರೋಡೆ ಹಿಂದಿನ ರೋಚಕ ಕಥೆಯನ್ನು ಬಿಚ್ಚಿಡುವ ಟೀಸರ್‌ನಲ್ಲಿ ಬುಲೆಟ್‌ ಗಳ ಆರ್ಭಟ, ಹೊಡೆದಾಟ-ಬಡಿದಾಟ, ಹಣ, ವಿಲನ್‌ ಅಬ್ಬರ ಎಲ್ಲವನ್ನು ಟೀಸರ್‌ ನಲ್ಲಿ ನೀಡಲಾಗಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಟೀಸರ್‌ ರಿಲೀಸ್‌ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮೋಹನ್‌, “ಡಾಲರ್ಸ್‌ ಪೇಟೆ ಸತ್ಯ ಘಟನೆಯಾಧಾರಿತ ಚಿತ್ರ. ತಮಿಳುನಾಡಿನ ಬ್ಯಾಂಕ್‌ ಒಂದರಲ್ಲಿ ಬ್ಯಾಂಕ್‌ ಮ್ಯಾನೇಜರ್‌ನಿಂದ 13 ಕೋಟಿ ಹಣ 100 ಜನಕ್ಕೆ ಮಿಸ್‌ ಆಗಿ ಡೆಪೋಸಿಟ್‌ ಆಗುತ್ತದೆ. ಅದು ಹೇಗೆ ಏನು ಅನ್ನೋದರ ಸುತ್ತ ಸಿನಿಮಾ ಸಾಗುತ್ತದೆ. ಇಡೀ ಸಿನಿಮಾವನ್ನು ಒಂದು ಪಾತ್ರದ ಮೇಲೆ ಡೆವಲಪ್‌ ಮಾಡಿಲ್ಲ. ಇದೊಂದು ಹೈಪರ್‌ ಲಿಂಕ್‌ ಹಾಗೂ ಡಾರ್ಕ್‌ ಕಾಮಿಡಿ ಥ್ರಿಲ್ಲರ್‌. ನಾಲ್ಕು ಐದು ಪಾತ್ರಗಳು ಒಂದು ಜಾಗದಲ್ಲಿ ಹೇಗೆ ಕ್ರಾಸ್‌ ಓವರ್‌ ಆಗುತ್ತೆ ಅನ್ನೋದು ಚಿತ್ರದ ಹೈಲೆಟ್. 50ರಷ್ಟು ಸಿನಿಮಾ ಬ್ಯಾಂಕ್‌ ನಡೆಯಲಿದೆ’ ಎಂದರು.

ಚಿತ್ರದಲ್ಲಿ ನಟಿಸಿರುವ ಸೌಮ್ಯ ಮಾತನಾಡಿ, “ನಾನು ಪೂಜಾ ಎಂಬ ಪಾತ್ರದಲ್ಲಿ ನಟಿಸಿದ್ದೇನೆ. ಈ ಸಿನಿಮಾದ ಭಾಗವಾಗಿರುವುದು ನನಗೆ ಖುಷಿಕೊಟ್ಟಿದೆ. ನಿರ್ಮಾಪಕಿ ಪೂಜಾ ಬೆನ್ನೆಲುಬಾಗಿ ನಿಂತು ಯಾವುದೇ ಕುಂದುಕೊರೆತೆ ಬಾರದೆ ನೋಡಿಕೊಂಡಿದ್ದಾರೆ. ನಿರ್ದೇಶಕರು ನನಗೆ ಕಥೆ ಹೇಳಿದಾಗ ತಕ್ಷಣ ಸಿನಿಮಾ ಮಾಡಲು ಒಪ್ಪಿಕೊಂಡೆ. ಥ್ರಿಲ್ಲರ್‌ ಜಾನರ್‌ ಆದರೂ ಪಾತ್ರಗಳು ಅಳುತ್ತಿದ್ದರೂ ಪ್ರೇಕ್ಷಕರು ನಗುವಂತೆ ಮಾಡುವ ಸನ್ನಿವೇಶ ಚಿತ್ರದಲ್ಲಿದೆ’ ಎಂದರು.

ನಟ ವೆಂಕಟ್‌ ರಾಜು ಮಾತನಾಡಿ, “ಡಾನ್‌ ಪಾತ್ರದಲ್ಲಿ ನಟಿಸಿದ್ದು, ನನ್ನ ಸ್ನೇಹಿತನಿಂದ ಈ ಪಾತ್ರ ಸಿಕ್ಕಿದೆ. ಮೂರು ತಿಂಗಳು ಪಾತ್ರಕ್ಕೆ ತಯಾರಿ ಮಾಡಿಕೊಂಡೆ. ಸೆಟ್‌ ನಲ್ಲಿ ಇಡೀ ಕುಟುಂಬದ ರೀತಿ ಎಲ್ಲರೂ ಟ್ರೀಟ್‌ ಮಾಡುತ್ತಿದ್ದರು’ ಎಂದು ಚಿತ್ರೀಕರಣದ ಅನುಭವ ಹಂಚಿಕೊಂಡರು.

ಈ ಸಿನಿಮಾದಲ್ಲಿ ಲೂಸಿಯಾ ಪವನ್‌ ಪತ್ನಿ ಸೌಮ್ಯ ಜಗನ್‌ ಮೂರ್ತಿ, ಮೆಟ್ರೋ ಸಾಗಾ ಖ್ಯಾತಿಯ ಆಕರ್ಷ್‌ ಕಮಲ, ವೆಂಕಟ್, ರಾಜ್, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ದಿಯಾ ಪೃಥ್ವಿ ಅಂಬರ್‌ ಗೆಸ್ಟ್‌ ಅಪಿಯರೆನ್ಸ್‌ ಚಿತ್ರದಲ್ಲಿದೆ. ಉಳಿದಂತೆ ದತ್ತು ಬಣಕರ್‌, ಕೌಶಿಲ್, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್‌ ಮಹೇಂದ್ರ ಒಳಗೊಂಡ ಕಲಾಬಳಗ ಚಿತ್ರದಲ್ಲಿದೆ.

ಸೂರಜ್‌ ಜೋಯಿಸ್‌ ಸಂಗೀತ ನಿರ್ದೇಶನ, ಆನಂದ್‌ ಸುಂದರೇಶ ಛಾಯಾಗ್ರಹಣ, ಮಹೇಶ್‌ ತೊಗಟ್ಟ ಸಂಕಲನ, ಅರ್ಜುನ್‌ ರಾಜ್‌ ಮತ್ತು ನರಸಿಂಹ ಸಾಹಸ ನಿರ್ದೇಶನವಿದೆ. ಪೂಜಾ ಟಿ.ವೈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.