ಪವನ್‌ ಒಡೆಯರ್‌ ಡೊಳ್ಳು ತೆರೆಗೆ ಸಿದ್ಧ


Team Udayavani, Jun 8, 2022, 2:06 PM IST

ಪವನ್‌ ಒಡೆಯರ್‌ ಡೊಳ್ಳು ತೆರೆಗೆ ಸಿದ್ಧ

ಸದ್ಯ ಚಿತ್ರರಂಗದಲ್ಲಿ ನಿರ್ಮಾಣದ ಹೊಸ ಟ್ರೆಂಡ್‌ ಶುರುವಾಗಿದೆ. ಹೆಸರಾಂತ ನಟ-ನಟಿಯರು, ನಿರ್ದೇ ಶಕರು ತಮ್ಮದೇ ಆದ ನಿರ್ಮಾಣ ಸಂಸ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ವೇದಿಕೆಯಾಗುತ್ತಿದ್ದಾರೆ. ಈ ಸಾಲಿಗೆ ಗೂಗ್ಲಿ ಖ್ಯಾತಿಯ ನಿರ್ದೇಶಕ ಪವನ್‌ ಒಡೆಯರ್‌ ಕೂಡಾ ಸೇರಿದ್ದಾರೆ.

ಪವನ್‌ ಒಡೆಯರ್‌ ಇದೀಗ ನಿರ್ಮಾಣದತ್ತ ಹೆಜ್ಜೆ ಹಾಕಿದ್ದು, ತಮ್ಮದೇ “ಒಡೆಯರ್‌ ಮೂವೀಸ್‌’ ಸಂಸ್ಥೆಯ ಮೂಲಕ ಅಪೇಕ್ಷಾ ಹಾಗೂ ಪವನ್‌ ಒಡೆಯರ್‌ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ. ಒಡೆಯರ್‌ ಮೂವೀಸ್‌ ಮೂಲಕ ಡೊಳ್ಳು ಚಿತ್ರವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ. “ಮಹಾ ಹುತಾತ್ಮ’ ಕಿರು ಚಿತ್ರ ಖ್ಯಾತಿಯ ಸಾಗರ್‌ ಪುರಾಣಿಕ್‌ “ಡೊಳ್ಳು’ ಚಿತ್ರದ ನಿರ್ದೇಶನದ ಮೂಲಕ ಹಿರಿತೆರೆಗೆ ಕಾಲಿಡುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಪವನ್‌ ಒಡೆಯರ್‌, “ಕರ್ಮಷಿಯಲ್‌ ಚಿತ್ರಗಳಿಗಿಂತ ಭಿನ್ನವಾಗಿ ಕಂಟೆಂಟ್‌ ಚಿತ್ರವನ್ನು ಮಾಡುವ ಆಸೆ ಇತ್ತು. ಆ ಥರಹದ ಕಥೆಗಳನ್ನು ನಾನು ಬರೆಯಲು ಕಷ್ಟಪಟ್ಟೆ. ಆದರೆ ಸಾಗರ್‌ ಅವರ ಕಥೆ ತುಂಬಾ ಹಿಡಿಸಿತು. ನಮ್ಮ ನಿರ್ಮಾಣ ಸಂಸ್ಥೆಯ ಮೊದಲ ಚಿತ್ರ ಒಳ್ಳೆಯ ಕಂಟೆಂಟ್‌ ಸಿನಿಮಾ ಆಗಿರಬೇಕು ಆಸೆ ಇತ್ತು. ಹಾಗೆ ಅಂದು ಚಿತ್ರರಂಗದಲ್ಲಿ ನನ್ನ ಮೇಲೆ ನಂಬಿಕೆ ಇಟ್ಟು ಚಿತ್ರ ನಿರ್ಮಿಸಿದ್ದರು ನಿರ್ಮಾಪಕರು. ಈಗ ನಾನು ಚಿತ್ರ ನಿರ್ಮಿಸುವ ಹಂತಕ್ಕೆ ಬಂದಿದ್ದೇನೆ. ಅದಕ್ಕೆ ಅವರ ನಂಬಿಕೆ ಕಾರಣ. ಹಾಗೇ ನಾವು ಚಿತ್ರರಂಗದಲ್ಲಿ ಮತ್ತಷ್ಟು ಹೊಸ ಪ್ರತಿಭೆಗಳಿಗೆ ವೇದಿಕೆ ನೀಡಬೇಕು ಎಂಬ ಕಾರಣಕ್ಕೆ ನಮ್ಮ ನಿರ್ಮಾಣದ ಮೊದಲ ಚಿತ್ರವಾಗಿ “ಡೊಳ್ಳು’ ನಿರ್ಮಾಣ ಮಾಡಿದ್ದೇವೆ’ ಎಂದರು.

ಇದನ್ನೂ ಓದಿ: ಏಳು ಭಾಷೆಗಳಲ್ಲಿ ಡಬ್ಬಿಂಗ್‌ ಶುರು: ಅಖಾಡಕ್ಕೆ ಕಬ್ಜ

ಚಿತ್ರ ನಿರ್ದೇಶಕ ಸಾಗರ್‌, “ನಾನು ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಡೊಳ್ಳು ಕುಣಿತ ನೋಡಿದ್ದೆ. ಅದರ ಸೌಂಡ್‌, ರಿಧಮ್‌ ಬಹಳ ಇಷ್ಟವಾಗಿತ್ತು. ಇದನ್ನೇ ಒಂದು ಸಂಪೂರ್ಣ ಸಿನಿಮಾವಾಗಿ ಮಾಡಬೇಕು ಎಂಬ ಯೋಚನೆಯೊಂದಿಗೆ ಈ ಚಿತ್ರ ಆರಂಭಿಸಿದೆವು. ಚಿತ್ರಕ್ಕೆ ತಯಾರಿ ಸಾಕಷ್ಟು ಬೇಕಿತ್ತು. ಹಲವಾರು ವೃತ್ತಿ ಪರ ಡೊಳ್ಳು ಕುಣಿತಗಾರರು, ಹಾಗೂ ದಶಕಗಳಿಂದ ಇಂದಿಗೂ ಡೊಳ್ಳು ಕುಣಿತವನ್ನು ಕುಲ ಕಸುಬಾಗಿಸಿರುವವರ ಬಳಿ ಹೋಗಿ ಮಾತನಾಡಿ ಕಥೆ ತಯಾರಿಸಿದ್ದೇವೆ’ ಎಂದರು.

ಚಿತ್ರ ಕಥೆ, ಸಂಭಾಷಣೆಗಾರ ಶ್ರೀನಿಧಿ ಡಿ.ಎಸ್‌ “ಚಿತ್ರದಲ್ಲಿ ಡೊಳ್ಳು ಕುಣಿತದ ಜೊತೆಯಲ್ಲಿ ಆ ಕಲಾವಿದನ ಬದುಕು ಹಾಗೂ ಅವನ ಸುತ್ತಲಿನ ಸಂಘರ್ಷ, ಹಳ್ಳಿ, ನಗರೀಕರಣ ಈ ಸಮಸ್ಯೆಗಳೇನು ಎನ್ನುವು ದನ್ನು ತೋರಿಸಿದ್ದೇವೆ’ ಎಂದು ಚಿತ್ರದ ಕುರಿತು ಮಾತನಾಡಿದರು. ಚಿತ್ರವನ್ನು ಶಿವಮೊಗ್ಗ, ಸೊರಬ, ಶಿಕಾರಿಪುರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷವಾಗಿ ಚಿತ್ರಕ್ಕಾಗಿ ವೃತ್ತಿಪರ ಡೊಳ್ಳು ಕುಣಿತಗಾರ ರಿಂದಲೇ ಹೆಜ್ಜೆ ಹಾಕಿಸಲಾಗಿದೆ.

ಚಿತ್ರದಲ್ಲಿ ಕಾರ್ತಿಕ್‌ ಮಹೇಶ್‌ ನಾಯಕ ನಟನಾಗಿದ್ದು, ನಿಧಿ ಹೆಗ್ಡೆ ನಾಯಕ ನಟಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್‌, ಶರಣ್ಯ ಸುರೇಶ್‌ ಮುಂತಾದ ತಾರಾಬಳಗವಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.