ಫೆ.24; ಸಿನಿಮಾಗಳ ಬಿಡುಗಡೆ ಅಬ್ಬರ ಬಲು ಜೋರು; ಡಜನ್ ಚಿತ್ರಗಳು ರೆಡಿ


Team Udayavani, Feb 20, 2023, 1:18 PM IST

ಫೆ.24; ಸಿನಿಮಾಗಳ ಬಿಡುಗಡೆ ಅಬ್ಬರ ಬಲು ಜೋರು; ಡಜನ್ ಚಿತ್ರಗಳು ರೆಡಿ

ಜನವರಿ ತಿಂಗಳಿನಿಂದ ಪ್ರತಿವಾರ ನಿಧಾನಗತಿಯಲ್ಲಿ ಏರಿಕೆ ಕಾಣುತ್ತಿದ್ದ ಕನ್ನಡ ಸಿನಿಮಾಗಳ ಬಿಡುಗಡೆಯ ಸಂಖ್ಯೆ ಫೆಬ್ರವರಿ ತಿಂಗಳಿನಲ್ಲಿ ಮತ್ತಷ್ಟು ಏರಿಕೆ ಕಂಡಿದೆ. ಸದ್ಯದ ಪರಿಸ್ಥಿತಿ ಗಮನಿಸಿದರೆ, ಬಿಡುಗಡೆಯ ವಿಷಯದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಕನ್ನಡ ಚಿತ್ರರಂಗ ಮತ್ತೂಂದು ದಾಖಲೆ ಬರೆದೂ ಅಚ್ಚರಿಯಿಲ್ಲ ಎಂಬುದು ಸಿನಿಮಾ ಮಂದಿಯ ಮಾತು.

ಇನ್ನು ಫೆಬ್ರವರಿ ಕೊನೆಯವಾರ ಸಮೀಪಿಸುತ್ತಿದ್ದಂತೆ, ಸ್ಯಾಂಡಲ್‌ ವುಡ್‌ ನಲ್ಲಿ ಸಿನಿಮಾಗಳ ಬಿಡುಗಡೆಯ ಭರಾಟೆ ಕೂಡ ಜೋರಾಗುತ್ತಿದೆ. ಸದ್ಯ ಫೆ. 24ಕ್ಕೆ ಕನ್ನಡದಲ್ಲಿ ಬರೋಬ್ಬರಿ 11 ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿದ್ದು, ಈ ಸಂಖ್ಯೆ ಮುಂದಿನ ಎರಡು – ಮೂರು ದಿನಗಳಲ್ಲಿ, ಇನ್ನಷ್ಟು ಹೆಚ್ಚಾದರೂ ಆಗಬಹುದು.

ಒಟ್ಟಾರೆ ಸಿನಿಮಾಗಳ ಸಂಖ್ಯೆ ಹೆಚ್ಚಾದಷ್ಟೂ ತಮ್ಮ ಅಭಿರುಚಿಗೆ ತಕ್ಕಂತೆ ವಿಭಿನ್ನ ಸಿನಿಮಾಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಪ್ರೇಕ್ಷಕ ಪ್ರಭುಗಳ ಮುಂದಿರುತ್ತದೆ. ಆದರೆ, ಇಷ್ಟೊಂದು ವೆರೈಟಿ ಸಿನಿಮಾಗಳ ಪೈಕಿ ಯಾವ ಸಿನಿಮಾಕ್ಕೆ ಪ್ರೇಕ್ಷಕರು ಜೈಕಾರ ಹಾಕಿ ಕೈ ಹಿಡಿಯುತ್ತಾರೆ ಎಂಬ ಕುತೂಹಲದ ಪ್ರಶ್ನೆಗೆ ಇದೇ ಫೆಬ್ರವರಿ ತಿಂಗಳಾಂತ್ಯಕ್ಕೆ ಉತ್ತರ ಸಿಗಬೇಕಾಗಿದೆ. ಹಾಗಾದರೆ, ಈ ವಾರ ಯಾವೆಲ್ಲ ಸಿನಿಮಾಗಳು ತೆರೆ ಕಾಣುತ್ತಿವೆ ಅವುಗಳ ಹೈಲೈಟ್ಸ್ ಏನೇನು ಎಂಬುದರ ಸಣ್ಣ ಝಲಕ್‌ ಇಲ್ಲಿದೆ.

ಗೌಳಿ

ಶ್ರೀನಗರ ಕಿಟ್ಟಿ, ಪಾವನಾ ಗೌಡ, ರಂಗಾಯಣ ರಘು, ಶರತ್‌ ಲೋಹಿತಾಶ್ವ, ಯಶ್‌ ಶೆಟ್ಟಿ, ಬೇಬಿ ನಮನ, ಕಾಕ್ರೊಚ್‌ ಸುಧಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಗೌಳಿ’ ಸಿನಿಮಾ ಕೂಡ ಈ ವಾರ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ – ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಗೌಳಿ’ ಸಿನಿಮಾಕ್ಕೆ ರಘು ಸಿಂಗಂ ನಿರ್ಮಾಣ ಮತ್ತು ಸೂರ ನಿರ್ದೇಶನವಿದೆ. ಈಗಾಗಲೇ ಬಿಡುಗಡೆಯಾಗಿರುವ “ಗೌಳಿ’ ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳು ಸೋಶಿಯಲ್‌ ಮೀಡಿಯಾದಲ್ಲಿ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದೆ. ಸುಮಾರು ನೂರಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ “ಗೌಳಿ’ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಯೋಚನೆ ಹಾಕಿಕೊಂಡಿದೆ. ಸುಮಾರು ಐದಾರು ವರ್ಷಗಳ ನಂತರ ಬಿಡುಗಡೆಯಾಗುತ್ತಿರುವ ತಮ್ಮ ಅಭಿನಯದ ಸಿನಿಮಾದ ಬಗ್ಗೆ ನಾಯಕ ನಟ ಶ್ರೀನಗರ ಕಿಟ್ಟಿ ಅವರಿಗೂ ಸಾಕಷ್ಟು ನಿರೀಕ್ಷೆಯಿದೆ.

ಸೌತ್‌ ಇಂಡಿಯನ್‌ ಹೀರೋ

ಈಗಾಗಲೇ ತನ್ನ ಟೈಟಲ್, ಫ‌ಸ್ಟ್ ಲುಕ್‌, ಟ್ರೇಲರ್‌ ಮತ್ತು ಹಾಡುಗಳ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ “ಸೌತ್‌ ಇಂಡಿಯನ್‌ ಹೀರೋ’ ಈ ವಾರ ತೆರೆ ಕಾಣುತ್ತಿದೆ. ರಾಜ್ಯಾದ್ಯಂತ ಸುಮಾರು 150ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಸೌತ್‌ ಇಂಡಿಯನ್‌ ಹೀರೋವನ್ನು ತೆರೆಗೆ ತರಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ನರೇಶ್‌ ಕುಮಾರ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಸೌತ್‌ ಇಂಡಿಯನ್‌ ಹೀರೋ ಸಿನಿಮಾದಲ್ಲಿ ಸಾರ್ಥಕ್‌, ಕಾಶಿಮಾ, ಊರ್ವಶಿ, ವಿಜಯ ಚೆಂಡೂರ್‌, ಅಮಿತ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

ಸಂಭ್ರಮ

ಯುವನಟ ಅಭಯ ವೀರ್‌ ನಾಯಕನಾಗಿ ಅಭಿನಯಿಸಿರುವ ಪ್ರೇಮ ಕಥಾ ಹಂದರದ ಸಂಭ್ರಮ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. “ಫೀನಿಕ್ಸ್ ಪ್ರೊಡಕ್ಷನ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾಕ್ಕೆ ಶ್ರೀ ನಿರ್ದೇಶನವಿದೆ. ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಸಂಭ್ರಮ’ ಸಿನಿಮಾವನ್ನು ರಾಜ್ಯಾದ್ಯಂತ ಸುಮಾರು ಮೂವತ್ತಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ

ಜ್ಯುಲಿಯೆಟ್‌ 2

ಬೃಂದಾ ಆಚಾರ್ಯ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ನಾಯಕಿ ಪ್ರದಾನ ಕಥಾಹಂದರದ ಜ್ಯೂಲಿಯೆಟ್-2′ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಸುಮಾರು ನೂರಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಲಿಖೀತ್‌ ಆರ್‌. ಕೋಟ್ಯಾನ್‌ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಚಿತ್ರಕ್ಕೆ ವಿರಾಟ್‌ ನಿರ್ದೇಶನವಿದೆ. ಈಗಾಗಲೇ ಬಿಡುಗಡೆಯಾಗಿರುವ “ಜ್ಯೂಲಿಯೆಟ್‌ 2′ ಸಿನಿಮಾದ ಟ್ರೇಲರ್‌ ಸಿನಿ ಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಸಿನಿಮಾ ಥಿಯೇಟರಿನಲ್ಲೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ. ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ, ಮಲೆಯಾಳಂ ಭಾಷೆಗಳಲ್ಲೂ ಈ ಸಿನಿಮಾ ನಿರ್ಮಾಣವಾಗಿದೆ.

ಕ್ಯಾಂಪಸ್‌ ಕ್ರಾಂತಿ

ಆರ್ಯ, ಅಲಂಕಾರ್‌, ಆರತಿ, ಇಶಾನ ನಾಯಕ – ನಾಯಕಿಯರಾಗಿರುವ, ಹಿರಿಯ ನಟ ಕೀರ್ತಿರಾಜ್, ಹನುಮಂತೇಗೌಡ ಮತ್ತಿತರರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ “ಕ್ಯಾಂಪಸ್‌ ಕ್ರಾಂತಿ’ ಸಿನಿಮಾ ಈ ವಾರ ಸುಮಾರು 50 ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ಬರುತ್ತಿದೆ. ಲವ್‌, ಆ್ಯಕ್ಷನ್‌ ಕಥಾಹಂದರದ ಈ ಸಿನಿಮಾಕ್ಕೆ ಆರ್‌. ಎಸ್‌ ಸಂತೋಷ್‌ ನಿರ್ದೇಶನವಿದೆ.

ಹೊಟ್ಟೆಪಾಡು

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಹೊಟ್ಟೆಪಾಡು’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ವಸಂತ್‌, ಜಾಹ್ನವಿ ವಿಶ್ವನಾಥ್‌, ವಿನಯ ಪ್ರಸಾದ್‌, ಶೋಭರಾಜ್, ಅಪೂರ್ವಾ, ಶೈಲೇಶ್‌ ಮೊದಲಾದವರು ಈ ಸಿನಿಮಾದ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಡಿ. ವಿ ರಾಧಾ ನಿರ್ಮಿಸಿರುವ ಹೊಟ್ಟೆಪಾಡು’ ಸಿನಿಮಾಕ್ಕೆ ವಸಂತ್‌ ನಿರ್ದೇಶನವಿದೆ.

ಪಾಲಾರ್‌

ಕೋಲಾರ ಮತ್ತು ದೇವನಹಳ್ಳಿ ಸುತ್ತಮುತ್ತ ಕೆಲ ವರ್ಷಗಳ ಹಿಂದೆ ನಡೆದ ಶೋಷಿತ ಸಮುದಾಯದ ನೈಜ ಘಟನೆಯನ್ನು ಇಟ್ಟುಕೊಂಡು ತಯಾರಾದ “ಪಾಲಾರ್‌’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಜೀವಾ ನವೀನ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ಪಾಲಾರ್‌’ ಸಿನಿಮಾದಲ್ಲಿ ವೈ.ಜಿ.ಉಮಾ, ತಿಲಕ್‌ ರಾಜ್‌ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.