ಡಾ.ವಿಷ್ಣುವರ್ಧನ್‌ 8 ನೇ ಪುಣ್ಯಸ್ಮರಣೆ


Team Udayavani, Dec 31, 2017, 10:58 AM IST

vishnu.jpg

ಡಾ.ವಿಷ್ಣುವರ್ಧನ್‌ ಇಲ್ಲದ ಎಂಟು ವರ್ಷಗಳು ಕಳೆದು ಹೋಗಿವೆ. ಅವರಿಲ್ಲದಿದ್ದರೂ ಅವರ ಆದರ್ಶ ಮಾತ್ರ ಇಂದಿಗೂ ಜೀವಂತವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳು ಅಭಿಮಾನ್‌ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿ ಬಳಿ ಪುಣ್ಯಸ್ಮರಣೆ ಮಾಡುವ ಮೂಲಕ ಪ್ರೀತಿಯ ಹೀರೋಗೆ ಪುಷ್ಪನಮನ ಸಲ್ಲಿಸಿ, ಅಭಿಮಾನ ಮೆರೆದಿದ್ದಾರೆ. ಶನಿವಾರ ಡಾ.ವಿಷ್ಣುವರ್ಧನ್‌ ಅವರ ಕುಟುಂಬದವರು ಮನೆಯಲ್ಲೇ ವಿಷ್ಣುವರ್ಧನ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ವಿಶೇಷ ಪೂಜೆ ಮಾಡುವ ಮೂಲಕ ಎಂಟನೇ ಪುಣ್ಯಸ್ಮರಣೆ ಮಾಡಿದ್ದಾರೆ.

ಡಾ.ಭಾರತಿ ವಿಷ್ಣುವರ್ಧನ್‌, ಅನಿರುದ್ಧ, ಕೀರ್ತಿ ಅನಿರುದ್ಧ ಸೇರಿದಂತೆ ವಿಷ್ಣುವರ್ಧನ್‌ ಅವರ ಕುಟುಂಬದವರೆಲ್ಲರೂ ಚಾಮರಾಜಪೇಟೆಯಲ್ಲಿರುವ ಬಾಸ್ಕೋ ಅನಾಥಾಶ್ರಮ ಮಕ್ಕಳಿಗೆ ಪುಕಸ್ತಕ, ಪೆನ್ಸಿಲ್‌ ಹಾಗು ಇತರೆ ಶಿಕ್ಷಣಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ವಿತರಿಸಿದರು. ನಂತರ ಮನೆಯಲ್ಲೇ ಅನ್ನಸಂತರ್ಪಣೆ ನಡೆಸಲಾಯಿತು. ನೂರಾರು ಅಭಿಮಾನಿಗಳು ವಿಷ್ಣುವರ್ಧನ್‌ ಅವರ ಮನೆಯ ಮುಂದೆ ಬೆಳಗ್ಗೆಯಿಂದಲೇ ಜಮಾಯಿಸಿ, ಪುಷ್ಪ ನಮನ ಸಲ್ಲಿಸಿದರು.

ಆ ಬಳಿಕ ಪ್ರಸಾದ ಸ್ವೀಕರಿಸಿ, ಪ್ರೀತಿಯ ನಟನಿಗೆ ಜೈಕಾರ ಹಾಕಿದರು. ಮೈಸೂರು ಸಮೀಪ ವಿಷ್ಣುವರ್ಧನ್‌ ಅವರ ಸ್ಮಾರಕಕ್ಕೆ ಸಂಬಂಧಿಸಿದಂತೆ “ಉದಯವಾಣಿ’ ಜತೆ ಮಾತನಾಡಿದ ನಟ ಅನಿರುದ್ಧ, ಸರ್ಕಾರಕ್ಕೆ ಪ್ರತಿ ಸಲವೂ ಮನವಿ ಮಾಡುತ್ತಲೇ ಇದ್ದೇವೆ. ಜಾಗ ವಿವಾದ ವಿಷಯ ಈಗ ಕೋರ್ಟ್‌ನಲ್ಲಿ ಚರ್ಚೆ ನಡೆಯುತ್ತಿದ್ದು, ಇಷ್ಟರಲ್ಲೇ ಅದು ಬಗೆಹರಿಯುವ ವಿಶ್ವಾಸವಿದೆ.

ಸರ್ಕಾರಕ್ಕೆ ಡಿಸೆಂಬರ್‌ 30ರ ಒಳಗೆ ಸಮಸ್ಯೆ ಇತ್ಯರ್ಥಪಡಿಸಿ ಎಂದು ಕೇಳಿಕೊಳ್ಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಜನವರಿ 15 ರ ಒಳಗಾಗಿ ಜಾಗದ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದೆ. ಮುಂದಿನ ವರ್ಷದಲ್ಲಿ ಸ್ಮಾರಕ ಆಗುವ ನಂಬಿಕೆ ಇದೆ. ಈಗಾಗಲೇ ಅಭಿಮಾನಿಗಳಿಗೆ ಸಾಕಷ್ಟು ಗೊಂದಲವಿದೆ. ಹಾಗಾಗಿ, ಅದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಅವರು.

ಮೂರು ಕಡೆ ಪ್ರತಿಮೆ ಅನಾವರಣ: ಎಂಟನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಮೂರು ಕಡೆ ಡಾ.ವಿಷ್ಣುವರ್ಧನ್‌ ಅವರ ಪ್ರತಿಮೆ ಅನಾವರಣ ಮಾಡಲಾಯಿತು. ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ನೇತೃತ್ವದಲ್ಲಿ ಗಾಂಧಿನಗರ, ಮೈಸೂರು ಸ್ಯಾಟಲೆಟ್‌ ಬಸ್‌ ನಿಲ್ದಾಣ ಮತ್ತು ಕುಂಬಳಗೋಡು ಬಳಿ ಡಾ.ವಿಷ್ಣುವರ್ಧನ್‌ ಅವರ ಮೂರು ಪ್ರತಿಮೆಗಳನ್ನು ಅನಾವರಣಗೊಳಿಸಲಾಯಿತು.

ಸಚಿವ ದಿನೇಶ್‌ ಗುಂಡುರಾವ್‌ ಅವರು ಗಾಂಧಿನಗರದಲ್ಲಿ ಪ್ರತಿಮೆ ಆನಾವರಣ ಮಾಡಿದರೆ, ಶಿಲ್ಪಾಗಣೇಶ್‌ ಮೈಸೂರು ಸ್ಯಾಟಲೆಟ್‌ ಬಸ್‌ ನಿಲ್ದಾಣದಲ್ಲಿ ಪ್ರತಿಮೆ ಅನಾವರಣಗೊಳಿಸಿದರು. ಕುಂಬಳಗೋಡು ಬಳಿ ವೀರಕಪುತ್ರ ಶ್ರೀನಿವಾಸ್‌ ಅವರು ಅಭಿಮಾನಿಗಳ ಸಮ್ಮುಖದಲ್ಲಿ ವಿಷ್ಣುವರ್ಧನ್‌ ಪ್ರತಿಮೆ ಅನಾವರಣಗೊಳಿಸಿದ್ದಾರೆ.

ಇದೇ ಸಂದರ್ಭದಲ್ಲಿ “ಕೋಟಿಗೊಬ್ಬ’ ಹೆಸರಿನಲ್ಲಿ ವಿಷ್ಣುವರ್ಧನ್‌ ಅವರ ಭಾವಚಿತ್ರ ಹೊಂದಿರುವ 2018 ರ ಕ್ಯಾಲೆಂಡರ್‌ ಅನ್ನು ಬಿಡುಗಡೆ ಮಾಡಲಾಯಿತು. ನಂತರ ಅಭಿಮಾನ್‌ ಸ್ಟುಡಿಯೋದಲ್ಲೂ ಅಭಿಮಾನಿಗಳು ಅನ್ನ ಸಂತರ್ಪಣೆ ಏರ್ಪಡಿಸಿ, ರಕ್ತದಾನ ಶಿಬಿರ ನಡೆಸಿದ್ದಾರೆ. ಡಾ.ವಿಷ್ಣುವರ್ಧನ್‌ ಅವರ ಎಂಟನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಅನೇಕ ಸಮಾಜಮುಖೀ ಕಾರ್ಯಕ್ರಮ ನಡೆಸುವ ಮೂಲಕ ವಿಶೇಷವಾಗಿ ಸ್ಮರಣೆ ಮಾಡಿದ್ದಾರೆ.

ಅಭಿಮಾನ್‌ ಸ್ಟುಡಿಯೋದಲ್ಲಿ ಅಭಿಮಾನಿಗಳು ಅನ್ನದಾನದ ಜೊತೆಗೆ ರಕ್ತದಾನ ಕೂಡ ನೆರವೇರಿಸಿದ್ದಾರೆ. ಇನ್ನು, ಪುಣ್ಯಸ್ಮರಣೆ ಅಂಗವಾಗಿ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಇಂದು ಬೆಳಗ್ಗೆಯೇ ಪೂಜೆ ಸಲ್ಲಿಸಲಾಯಿತು. ಸಾವಿರಾರು ಅಭಿಮಾನಿಗಳು ಬೆಳಗ್ಗೆಯಿಂದಲೇ ಅಭಿಮಾನ್‌ ಸ್ಟುಡಿಯೋಗಿ ಆಗಮಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.