ಮಾದಕ ವಸ್ತು ಪ್ರಕರಣ; CCBಗೆ ಇಂದ್ರಜಿತ್ ಲಂಕೇಶ್ ಏನೆಲ್ಲಾ ಸಾಕ್ಷ್ಯ, ಮಾಹಿತಿ ಕೊಟ್ಟಿದ್ದಾರೆ?

ಡ್ರಗ್ಸ್ ಜಾಲದೊಂದಿಗೆ ಕನ್ನಡ ಚಲನಚಿತ್ರರಂಗದ ಕೆಲವರಿಗೆ ನಂಟಿದೆ. ಈ ಬಗ್ಗೆ ನನ್ನ ಬಳಿ ವಿವರ ಇದೆ.

Team Udayavani, Aug 31, 2020, 5:51 PM IST

ಮಾದಕ ವಸ್ತು ಪ್ರಕರಣ; CCBಗೆ ಇಂದ್ರಜಿತ್ ಲಂಕೇಶ್ ಏನೆಲ್ಲಾ ಸಾಕ್ಷ್ಯ, ಮಾಹಿತಿ ಕೊಟ್ಟಿದ್ದಾರೆ?

ಬೆಂಗಳೂರು:ಸ್ಯಾಂಡಲ್ ವುಡ್ ನಲ್ಲಿಯೂ ಡ್ರಗ್ಸ್ ಜಾಲ ಇದ್ದಿದ್ದು, ಈ ಚಟಕ್ಕೆ ಬಿದ್ದವರ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಸೋಮವಾರ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿ ಬಲವಾದ ಸಾಕ್ಷ್ಯಾಧಾರಗಳನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಸ್ಯಾಂಡಲ್ ವುಡ್ ನ ನಟ, ನಟಿಯರು ಹಾಗೂ ಸಂಗೀತಗಾರರ ಡ್ರಗ್ಸ್ ಪೂರೈಕೆ ಪ್ರಕರಣವನ್ನು ಕೇಂದ್ರ ಮಾದಕ ವಸ್ತು ನಿಗ್ರಹ ದಳ (ಎನ್ ಸಿಬಿ) ತನಿಖೆಯ ಬಳಿಕ ರಾಜ್ಯ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದರು.

ಸಾಕ್ಷ್ಯ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ: ಇಂದ್ರಜಿತ್

ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾದ ಇಂದ್ರಜಿತ್ ಲಂಕೇಶ್ ಅವರು ತಮ್ಮ ಲ್ಯಾಪ್ ಟ್ಯಾಪ್ ನಲ್ಲಿದ್ದ ನಟರ ಹೆಸರು, ಫೋಟೋಗಳು ಹಾಗೂ ವಿಡಿಯೋಗಳನ್ನು ಹಸ್ತಾಂತರಿಸಿದ್ದಾರೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿಸಂತೆ ನನ್ನ ಬಳಿ ಇದ್ದ ಎಲ್ಲಾ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಸುಮಾರು 10ರಿಂದ 15 ಮಂದಿಯ ಹೆಸರು ಮತ್ತು ಅದಕ್ಕೆ ಸಂಬಂಧಿಸಿದ ಮಾಹಿತಿ ನೀಡಿದ್ದೇನೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ನಾನು ನೀಡಿರುವ ವಿಡಿಯೋ ಸಾಕ್ಷ್ಯ ಕಂಡು ಪೊಲೀಸರು ಕೂಡಾ ಶಾಕ್ ಆಗಿದ್ದಾರೆ. ಇದರಲ್ಲಿ ಓರ್ವ ನಟಿ ಪಾರ್ಟಿಯೊಂದರಲ್ಲಿ ನಶೆಯೊಂದಿಗೆ ಅಸಭ್ಯವಾಗಿ ನೃತ್ಯ ಮಾಡುತ್ತಿರುವ ವಿಡಿಯೋ ಇದ್ದಿದ್ದು, ಅದನ್ನು ಸಿಸಿಬಿ ವಶಕ್ಕೆ ಒಪ್ಪಿಸಿರುವುದಾಗಿ ಇಂದ್ರಜಿತ್ ವಿವರಿಸಿದ್ದಾರೆ.

ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಾನು ಅಧಿಕಾರಿಗಳಿಗೆ ನೀಡಿರುವ ಮಾಹಿತಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲಾರೆ. ಯಾಕೆಂದರೆ ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಎಲ್ಲ ವಿವರವನ್ನು ಸಿಸಿಬಿ ಅಧಿಕಾರಿಗಳೇ ನಿಮಗೆ ನಂತರ ನೀಡುತ್ತಾರೆ ಎಂದು ಇಂದ್ರಜಿತ್ ಹೇಳಿದರು. ಡ್ರಗ್ಸ್ ಜಾಲದ ವಿಚಾರದಲ್ಲಿ ಯಾರ ತೇಜೋವಧೆ ಮಾಡುವುದು ನನ್ನ ಉದ್ದೇಶವಲ್ಲ. ಸಮಾಜದ ಒಳಿತಿಗಾಗಿ ಇದು ಅನಿವಾರ್ಯ ಎಂದರು.

ಚಿರಂಜೀವಿ ಸರ್ಜಾ ಬಗ್ಗೆ ನಾನು ಅವರ ಕುಟುಂಬಕ್ಕೆ ನೋವು ನೀಡಬೇಕೆಂಬ ಅರ್ಥದಲ್ಲಿ ಮಾತನಾಡಿಲ್ಲ. ನನಗೆ ಗೊತ್ತಿರುವ ವಿಷಯದ ಬಗ್ಗೆ ಮಾತನಾಡಿದ್ದೇನೆ ಅಷ್ಟೇ ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

ಡ್ರಗ್ಸ್ ಜಾಲದೊಂದಿಗೆ ಕನ್ನಡ ಚಲನಚಿತ್ರರಂಗದ ಕೆಲವರಿಗೆ ನಂಟಿದೆ. ಈ ಬಗ್ಗೆ ನನ್ನ ಬಳಿ ವಿವರ ಇದೆ. ನನಗೆ ರಕ್ಷಣೆ ನೀಡಿದರೆ ಎಲ್ಲವನ್ನೂ ಅಧಿಕಾರಿಗಳ ಮುಂದೆ ಇಡುತ್ತೇನೆ ಎಂದು ಇಂದ್ರಜಿತ್ ಹೇಳಿದ್ದರು. ಈ ನಿಟ್ಟಿನಲ್ಲಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಇಂದು ಇಂದ್ರಜಿತ್ ಅವರು ಸಾಕ್ಷ್ಯ ಸಮೇತ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿ ಬರೋಬ್ಬರಿ ಆರು ಪುಟಗಳ ಹೇಳಿಕೆಯನ್ನು ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.