ಬೆಳ್ಳಿತೆರೆಯಿಂದ ಕಿರುತೆರೆಗೆ ಹರಡಿದ ಮಾದಕ ಜಾಲ

ಲೂಸ್‌ ಮಾದ, ಪ್ರೇಮಾ ಸಹೋದರ ಅಯ್ಯಪ್ಪ ವಿಚಾರಣೆ

Team Udayavani, Sep 22, 2020, 5:45 AM IST

ಬೆಳ್ಳಿತೆರೆಯಿಂದ ಕಿರುತೆರೆಗೆ ಹರಡಿದ ಮಾದಕ ಜಾಲ

ಸಾಂದರ್ಭಿಕ ಚಿತ್ರ

ಬೆಂಗಳೂರು: ನಟ ಲೂಸ್‌ ಮಾದ ಖ್ಯಾತಿಯ ಯೋಗೀಶ್‌ ಮತ್ತು ಕ್ರಿಕೆಟಿಗ, ನಟಿ ಪ್ರೇಮಾ ಅವರ ಸಹೋದರ ಅಯ್ಯಪ್ಪ ಸೇರಿ ನಾಲ್ವರನ್ನು ಆಂತರಿಕ ಭದ್ರತಾ ದಳದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಇದರೊಂದಿಗೆ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ ಭೇದಿಸಲು ರಾಜ್ಯ ಆಂತರಿಕ ಭದ್ರತಾ ದಳ (ಐಎಸ್‌ಡಿ) ಕೂಡ ಅಖಾಡಕ್ಕಿಳಿದಂತಾಗಿದೆ. ಈಗ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಹಗರಣದ ಜಾಲ ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯನ್ನೂ ಆವರಿ ಸಿರುವುದು ಖಚಿತವಾಗಿದ್ದು, ಹಲವು ಕಿರುತೆರೆ ನಟಿಯರಿಗೆ ವಿಚಾರಣೆಗೆ ನೋಟಿಸ್‌ ನೀಡಲಾಗಿದೆ.

ಡ್ರಗ್ಸ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾವೂ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಈ ಪ್ರಕರಣದಲ್ಲಿ ಹಲವು ನಟರು ಮತ್ತಿತರರನ್ನು ವಿಚಾರಣೆಗೆ ಒಳಪಡಿಸುತ್ತಿದ್ದೇವೆ ಎಂದು ಐಎಸ್‌ಡಿ ಮುಖ್ಯಸ್ಥ ಭಾಸ್ಕರ ರಾವ್‌ ತಿಳಿಸಿದ್ದಾರೆ.

ನಟ ಯೋಗೀಶ್‌ ವಿಚಾರಣೆ
ನಟ ಯೋಗೀಶ್‌ ಮತ್ತು ಖಾಸಗಿ ವಾಹಿನಿಯ ಸಿಬಂದಿ ಯೊಬ್ಬರನ್ನು ಸೋಮವಾರ ವಿಚಾರಣೆ ನಡೆಸ ಲಾಗಿದೆ ಎಂದು ತಿಳಿದು ಬಂದಿದೆ. ಕೆಲವು ವರ್ಷ ಗಳ ಹಿಂದೆ ಸಿನೆಮಾಗಳಲ್ಲಿ ಅವಕಾಶ ಕಡಿಮೆ ಯಾಗಿದ್ದಾಗ ಕೆಲವು ದುಶ್ಚಟಗಳ ದಾಸನಾಗಿದ್ದೆ. ಆದರೆ ಡ್ರಗ್ಸ್‌ ಮಾರಾಟ ವ್ಯಕ್ತಿಗಳ ಜತೆ ಸಂಪರ್ಕ ಹೊಂದಿಲ್ಲ. ಮುಖ್ಯವಾಗಿ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ವಿಚಾರಣೆ ಸಂದರ್ಭದಲ್ಲಿ ನಟ ಯೋಗೀಶ್‌ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೂಂದೆಡೆ ನಟ ಯೋಗೀಶ್‌ ಮತ್ತು ಸ್ಯಾಂಡಲ್‌ವುಡ್‌ ಪ್ರಕರಣದ ಎರಡನೇ ಆರೋಪಿ ರಾಗಿಣಿ ಸ್ನೇಹಿತರಾಗಿದ್ದು, ಇಬ್ಬರು ಜತೆಯಾಗಿ ಕೆಲವು ಪಾರ್ಟಿಗಳಿಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು.

ಕಿರುತೆರೆ ಕಲಾವಿದರಾದ ಅಭಿಷೇಕ್‌ ಮತ್ತು ಗೀತಾ ಎಂಬವ ರಿಗೂ ನೋಟಿಸ್‌ ಜಾರಿ ಮಾಡಲಾಗಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸೆ. 19ರಂದು ನಟಿ ಪ್ರೇಮಾ ಅವರ ಸಹೋದರ, ಕ್ರಿಕೆಟಿಗ ಅಯ್ಯಪ್ಪ ಮತ್ತು ಕೊಡಗು ಮೂಲದ ಕಿರುತೆರೆ ನಟಿಯೊಬ್ಬರನ್ನು ಐಎಸ್‌ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರನ್ನೂ ಶನಿವಾರ ಬೆಳಗ್ಗಿನಿಂದ ಸಂಜೆವರೆಗೂ ವಿಚಾರಣೆಗೆ ಒಳಪಡಿಸಲಾಗಿತ್ತು.
ಇದುವರೆಗೆ 9 ಕೇಸು
ಐಎಸ್‌ಡಿ ಅಧಿಕಾರಿಗಳು ಇದುವರೆಗೆ ಮಾದಕವಸ್ತು ಮಾರಾಟ ಜಾಲಕ್ಕೆ ಸಂಬಂಧಿಸಿ 9 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಡ್ರಗ್ಸ್‌ ಪೆಡ್ಲರ್‌ಗಳ ಜತೆ ಸಂಪರ್ಕದಲ್ಲಿದ್ದ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈತನ ಮಾಹಿತಿ ಮತ್ತು ಆರೋಪಿಯ ಕರೆ ವಿವರ ಪರಿಶೀಲಿಸಿದಾಗ ಕೆಲವು ನಟ, ನಟಿಯರು ಮತ್ತು ಕಿರುತೆರೆ ಕಲಾವಿದರು ಸಂಪರ್ಕದಲ್ಲಿರುವುದು ಪತ್ತೆಯಾಗಿತ್ತು. ಈ ಸಾಕ್ಷ್ಯ ಆಧರಿಸಿ ಮೂರು ದಿನಗಳಲ್ಲಿ ನಾಲ್ವರ ವಿಚಾರಣೆ ನಡೆಸಲಾಗಿದೆ ಎಂದು ಐಎಸ್‌ಡಿ ಮೂಲಗಳು ತಿಳಿಸಿವೆ.

ಹೊಟೇಲ್‌ಗ‌ಳಲ್ಲಿ ಶೋಧ
ಡ್ರಗ್ಸ್‌ ಪ್ರಕರಣದಲ್ಲಿ ಆರೋಪಿ “ತಾರೆ’ಯರನ್ನು ಬೇಟೆಯಾಡಿದ್ದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಈಗ ಸ್ಟಾರ್‌ ನಟ-ನಟಿಯರು ಹೋಗಿದ್ದ ತಾರಾ ಹೊಟೇಲ್‌ಗ‌ಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ನಗರದ 3 ಪ್ರತಿಷ್ಠಿತ ಹೊಟೇಲ್‌ಗ‌ಳಿಗೆ ನೋಟಿಸ್‌ ಜಾರಿ ಮಾಡಿದ್ದು, ಲಾಕ್‌ಡೌನ್‌ ಮತ್ತು ಅದಕ್ಕೂ ಹಿಂದೆ ನಡೆದ ಕೆಲವು ಪಾರ್ಟಿಗಳ ಸಿಸಿಟಿವಿ ದೃಶ್ಯಾವಳಿ ನೀಡುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ.
ಪ್ರಕರಣದ ಕಿಂಗ್‌ಪಿನ್‌ ವೀರೇನ್‌ ಖನ್ನಾ ವಿಚಾರಣೆ ಸಂದರ್ಭ ಕೆಲವು ಮಾಹಿತಿ ನೀಡಿದ್ದಾನೆ. ಮೂರು ಹೊಟೇಲ್‌ಗ‌ಳಿಗೆ ಮಾತ್ರ ನೋಟಿಸ್‌ ನೀಡಲಾಗಿದೆ. ಹೊಟೇಲ್‌ ಮಾಲಕರು ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಿದರೆ ಪ್ರಕರಣಕ್ಕೆ ಪುಷ್ಟಿ ಸಿಕ್ಕಂತಾಗಲಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.