ಚಿತ್ರೀಕರಣ ಮುಗಿಸಿದ ದೃಶ್ಯ -2


Team Udayavani, Aug 26, 2021, 11:06 AM IST

ಚಿತ್ರೀಕರಣ ಮುಗಿಸಿದ ದೃಶ್ಯ -2

ಸಾಮಾನ್ಯವಾಗಿ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರಿಗೆ ತಾವು ಒಪ್ಪಿಕೊಂಡಿರುವ ಸಿನಿಮಾಗಳ ಶೂಟಿಂಗ್‌ ಮತ್ತಿತರ ಕೆಲಸಗಳು ಮುಗಿದರೆ ಖುಷಿಯಾಗುತ್ತದೆ. ಕೆಲಸ ಮುಗಿಸಿದ ಖುಷಿಯಲ್ಲಿ ಅನೇಕರು ರಿಲ್ಯಾಕ್ಸ್‌ ಮೂಡ್‌ಗೆ ಜಾರುತ್ತಾರೆ. ಆದರೆ “ದೃಶ್ಯ-2′ ಚಿತ್ರದ ಶೂಟಿಂಗ್‌ ಮುಗಿದಿದ್ದು ನಟ ಕ್ರೇಜಿಸ್ಟಾರ್‌ ಬೇಸರಕ್ಕೆ ಕಾರಣವಾಗಿದೆಯಂತೆ!

ಹೌದು, ಸ್ವತಃ ರವಿಚಂದ್ರನ್‌ ಅವರೇ ಈ ಮಾತನ್ನು ಹೇಳಿದ್ದಾರೆ. ಅದಕ್ಕೆ ಕಾರಣ “ದೃಶ್ಯ-2′ ಚಿತ್ರತಂಡದ ಜೊತೆಗಿದ್ದ ಒಡನಾಟ. “ಅನೇಕರಿಗೆ ಗೊತ್ತಿರುವಂತೆ ಇದು ಫ್ಯಾಮಿಲಿ ಸ್ಟೋರಿ ಇರುವ ಸಿನಿಮಾ. ಈ ಫ್ಯಾಮಿಲಿ ಸ್ಟೋರಿಯನ್ನು ನಮ್ಮ ಸಿನಿಮಾ ತಂಡ ಕೂಡ ಒಂದುಕುಟುಂಬವಾಗಿ, ಒಬ್ಬರಿಗೊಬ್ಬರು ಬೆಂಬಲಿಸುತ್ತಾ, ಸಹಾಯ ಮಾಡುತ್ತಾ ಮಾಡಿದ್ದೇವೆ. ಸ್ಕ್ರೀನ್‌ ಮೇಲೆ ಹೇಗೋ ಸ್ಕ್ರೀನ್‌ ಹೊರಗೂ “ದೃಶ್ಯ’ ಚಿತ್ರತಂಡ ಒಂದು ಕುಟುಂಬದಂತೆ ಆಗಿಬಿಟ್ಟಿದೆ. ನನ್ನ ಹೃದಯಕ್ಕೆ ಹತ್ತಿರವಾದ ಚಿತ್ರತಂಡ ಇದಾಗಿತ್ತು. ನಮಗೆ ಗೊತ್ತಿಲ್ಲದಂತೆ ಸಿನಿಮಾದ ಶೂಟಿಂಗ್‌ ಮುಗಿದು ಹೋಯ್ತು. ಇಷ್ಟು ಬೇಗ ಶೂಟಿಂಗ್‌ ಮುಗಿಯಿತಲ್ಲ, ಇನ್ನು ನಾವುಗಳು ಒಬ್ಬರನ್ನೊಬ್ಬರು ನಾಳೆಯಿಂದ ಭೇಟಿ ಆಗುವುದಿಲ್ಲ ಅಂಥ ಬೇಸರವಾಗುತ್ತಿದೆ’ ಎಂದರು.

ಕೆಲ ದಿನಗಳ ಹಿಂದಷ್ಟೇ ಕ್ರೇಜಿಸ್ಟಾರ್‌ ರವಿಚಂದ್ರನ್‌ ನಾಯಕನಾಗಿ ಅಭಿನಯಿಸುತ್ತಿರುವ “ದೃಶ್ಯ-2′ ಸಿನಿಮಾ ಸೆಟ್ಟೇರಿದ್ದು ನಿಮಗೆ ಗೊತ್ತಿರಬಹುದು. ಇದೀಗ ಸದ್ದಿಲ್ಲದೆ ಆ ಸಿನಿಮಾದ ಚಿತ್ರೀಕರಣ ಕೂಡ ಪೂರ್ಣಗೊಂಡಿದೆ. ರವಿಚಂದ್ರನ್‌ ಅವರ ಬಳಿಕ ಚಿತ್ರದ ಬಗ್ಗೆ ಮಾತನಾಡಿದ ನಟಿ ನವ್ಯಾ ನಾಯರ್‌ ತಮ್ಮ ಅನುಭವ ಹಂಚಿಕೊಂಡರು.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಪಿ. ವಾಸು, “ನಮ್ಮ ಪ್ಲಾನ್‌ ಪ್ರಕಾರ ಸಿನಿಮಾದ ಶೂಟಿಂಗ್‌ ಕಂಪ್ಲೀಟ್‌ ಆಗಿದ್ದು, ಶೀಘ್ರದಲ್ಲಿಯೇ ಪೋಸ್ಟ್‌ ಪ್ರೊಡಕ್ಷನ್‌ ವರ್ಕ್‌ ಕೂಡ ಶುರುವಾಗಲಿದೆ. ಕನ್ನಡದ ನೇಟಿವಿಟಿಕೆ ತಕ್ಕಂತೆ ಒಂದಷ್ಟು ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಸಿನಿಮಾ ಬಂದಿದೆ. ಆದಷ್ಟು ಬೇಗ “ದೃಶ್ಯ-2’ನ್ನು ತೆರೆಗೆ ತರಲಿದ್ದೇವೆ. ಏಳು ವರ್ಷದ ಬಳಿಕ ಸೀಕ್ವೆಲ್‌ ಸಿದ್ಧವಾಗಿದ್ದು, ಅಂದು ರವಿಚಂದ್ರನ್‌ ಹೇಗಿದ್ದರೋ, ಇಂದೂ ಹಂಗೇ ಇದ್ದಾರೆ. ಇದನ್ನ ಸೀಕ್ವೆಲ್‌ ಅನ್ನೋದಕ್ಕಿಂತ ಪ್ರೀಕ್ವೆಲ್‌ ಎನ್ನಬಹುದು’ ಎಂದರು

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.