“ದೃಶ್ಯ’ ಆಯ್ತು ಈಗ “ಆ.. ದೃಶ್ಯ’

ಹೊಸ ಗೆಟಪ್‌ನಲ್ಲಿ ರವಿಚಂದ್ರನ್‌ ಎಂಟ್ರಿ

Team Udayavani, Aug 15, 2019, 3:04 AM IST

Aa-Drishya

ಕ್ರೇಜಿಸ್ಟಾರ್‌ ರವಿಚಂದ್ರನ್‌ ಅಭಿನಯದ “ದೃಶ್ಯ’ ಚಿತ್ರ ನಿಮಗೆ ನೆನಪಿರಬಹುದು. 2014ರಲ್ಲಿ ತೆರೆಗೆ ಬಂದ ಸಸ್ಪೆನ್ಸ್‌, ಕ್ರೈಂ-ಥ್ರಿಲ್ಲರ್‌ ಕಥಾಹಂದರದ “ದೃಶ್ಯ’ ಚಿತ್ರ ರವಿಚಂದ್ರನ್‌ ಅವರಿಗೂ ಹೊಸ ಇಮೇಜ್‌ ತಂದುಕೊಟ್ಟಿತ್ತು. ಈಗ ಅದೇ ಹೆಸರಿನಲ್ಲಿ “ಆ… ದೃಶ್ಯ’ ಎನ್ನುವ ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲೂ ರವಿಚಂದ್ರನ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ “ಆ… ದೃಶ್ಯ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ.

“ಕೆ. ಮಂಜು ಸಿನಿಮಾಸ್‌’ ಬ್ಯಾನರ್‌ನಲ್ಲಿ ಕೆ. ಮಂಜು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಹಿಂದೆ “ತ್ರಾಟಕ’, “ಜಿಗರ್‌ಥಂಡ’ ಚಿತ್ರಗಳನ್ನು ನಿರ್ದೇಶಿಸಿದ್ದ ಶಿವಗಣೇಶ್‌ “ಆ… ದೃಶ್ಯ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಂದಹಾಗೆ, “ಆ… ದೃಶ್ಯ’ ಚಿತ್ರ ಕೆಲವರ್ಷಗಳ ಹಿಂದೆ ತಮಿಳಿನಲ್ಲಿ ಬಂದಿದ್ದ “ಧ್ರುವಂಗಳ್‌ 16′ ಚಿತ್ರದ ಕನ್ನಡ ರಿಮೇಕ್‌. ತಮಿಳು ಚಿತ್ರದ ಮೂಲ ಕಥೆಯನ್ನು ಇಟ್ಟುಕೊಂಡು ಅದನ್ನ ಕನ್ನಡದ ನೇಟಿವಿಟಿಗೆ ತಕ್ಕಂತೆ ತೆರೆಗೆ ತಂದಿದ್ದೇವೆ.

“ಆ… ದೃಶ್ಯ’ ಚಿತ್ರ ಕೂಡ ಈ ಹಿಂದೆ ರವಿಚಂದ್ರನ್‌ ಅಭಿನಯಿಸಿದ್ದ “ದೃಶ್ಯ’ ಚಿತ್ರದಂತೆ ಸಸ್ಪೆನ್ಸ್‌, ಕ್ರೈಂ-ಥ್ರಿಲ್ಲರ್‌ ಜಾನರ್‌ನ ಚಿತ್ರ ಎನ್ನುವುದು ಚಿತ್ರತಂಡದ ಮಾತು. ಇನ್ನು “ದೃಶ್ಯ’ ಚಿತ್ರದಲ್ಲಿ ಪೊಲೀಸರಿಂದ ಟಾರ್ಚರ್‌ ಅನುಭವಿಸಿದ್ದ ರಾಜೇಂದ್ರ ಪೊನ್ನಪ್ಪ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರವಿಚಂದ್ರನ್‌, “ಆ… ದೃಶ್ಯ’ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಅಪರಾಧಿಗಳಿಗೆ ಟಾರ್ಚರ್‌ ನೀಡುತ್ತಾರಂತೆ. ಇನ್ನು “ಆ… ದೃಶ್ಯ’ ಚಿತ್ರದ ಬಗ್ಗೆ ನಟ ರವಿಚಂದ್ರನ್‌ ಕೂಡ ಸಾಕಷ್ಟು ಭರವಸೆಯ ಮಾತುಗಳನ್ನಾಡುತ್ತಾರೆ.

“ಇತ್ತೀಚೆಗೆ ವಿಭಿನ್ನ ಬಗೆಯ ಪಾತ್ರಗಳು ಬರುತ್ತಿವೆ. “ಕುರುಕ್ಷೇತ್ರ’ದಲ್ಲಿ ಕೃಷ್ಣನಾಗಿದ್ದೆ, ಇನ್ನೊಂದು ಹೊಸ ಚಿತ್ರದಲ್ಲಿ ಸೀನಿಯರ್‌ ಸಿಟಿಜನ್‌ ಆಗಿದ್ದೇನೆ. ಈ ಚಿತ್ರದಲ್ಲಿ ತನಿಖಾಧಿಕಾರಿಯಾಗಿದ್ದೇನೆ. ನಿರ್ದೇಶಕರು ಇದರಲ್ಲಿ 30 ವರ್ಷ ವಯಸ್ಸಿನವನಂತೆ ನನ್ನಿಂದ ನಟನೆ ತೆಗೆಸಿದ್ದಾರೆ. ಪ್ರತಿ ಹೊಸ ಚಿತ್ರವನ್ನು ಮಾಡುವಾಗಲೂ ಅದರ ನಿರ್ದೇಶಕ ಬಳಿ ಬಂದಾಗ ನಾನು ಕೂಡ ಹೊಸಬನಾಗಿರುತ್ತಾನೆ.

ಚಿತ್ರದಲ್ಲಿ ಕೇವಲ ಒಂದೇ ಹಾಡಿದ್ದು, ಅದು ಕೊನೆಯಲ್ಲಿ ಬರುತ್ತದೆ. ಹಿನ್ನಲೆ ಸಂಗೀತಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಇದರಲ್ಲಿರುವ ಸೌಂಡ್‌ ಜನರ ಮನಸ್ಸಿಗೆ ತಟ್ಟಿದರೆ, ಚಿತ್ರ ಗ್ಯಾರಂಟಿ ಹಿಟ್‌ ಆಗುತ್ತದೆ’ ಎನ್ನುವುದು ರವಿಮಾಮನ ಭರವಸೆಯ ಮಾತು. ಉಳಿದಂತೆ “ಆ… ದೃಶ್ಯ’ ಚಿತ್ರದಲ್ಲಿ ರವಿಚಂದ್ರನ್‌ ಅವರೊಂದಿಗೆ ಚೈತ್ರಾ ಆಚಾರ್‌, ಅಜಿತ್‌ ಜಯರಾಜ್‌, ನಿಸರ್ಗ, ಗಿರೀಶ್‌, ರಕ್ಷಿತ್‌, ಯಶ್‌ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ವಿನೋದ್‌ ಭಾರತಿ, ಸತೀಶ್‌ ಬಿಲ್ಲಾಡಿ ಛಾಯಾಗ್ರಹಣ ಮತ್ತು ಸುರೇಶ್‌ ಆರ್ಮುಗಂ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಗೌತಂ ಶ್ರೀವತ್ಸ ಸಂಗೀತ ಸಂಯೋಜನೆಯಿದ್ದು, ವಿ. ನಾಗೇಂದ್ರ ಪ್ರಸಾದ್‌ ಸಾಹಿತ್ಯವನ್ನು ಒದಗಿಸಿದ್ದಾರೆ. ಮೃಗಶಿರ ಶ್ರೀಕಾಂತ್‌ ಸಂಭಾಷಣೆ, ಕುಂಗ್‌ಫ‌ು ಚಂದ್ರು ಸಾಹಸ ಚಿತ್ರದಲ್ಲಿದೆ. ಸದ್ಯ ಬಿಡುಗಡೆಯಾಗಿರುವ “ಆ… ದೃಶ್ಯ’ ಚಿತ್ರದ ಟ್ರೇಲರ್‌ ನಿಧಾನವಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದ್ದು, ಇದೇ ದಸರಾ ಹಬ್ಬದ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.