ಟಾಲಿವುಡ್‌ ಕಡೆಗೆ ಸಲಗ ಸಂಚಾರ: ಬಾಲಕೃಷ್ಣ ಚಿತ್ರದಲ್ಲಿ ವಿಜಯ್ ನಟನೆ


Team Udayavani, Jan 4, 2022, 11:28 AM IST

ಟಾಲಿವುಡ್‌ ಕಡೆಗೆ ಸಲಗ ಸಂಚಾರ: ಬಾಲಕೃಷ್ಣ ಚಿತ್ರದಲ್ಲಿ ವಿಜಯ್ ನಟನೆ

ಕನ್ನಡ ಚಿತ್ರರಂಗದ ಅನೇಕ ನಟರು ಆಗಾಗ್ಗೆ ತೆಲುಗು ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಟಾಲಿವುಡ್‌ನ‌ಲ್ಲೂ ಸೈ ಎನಿಸಿಕೊಂಡಿದ್ದಾರೆ. ಹಲವು ನಟರು ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುವಲ್ಲೂ ಯಶಸ್ವಿಯಾಗಿದ್ದಾರೆ. ಈಗ ಟಾಲಿವುಡ್‌ನ‌ಲ್ಲಿ ಅಕೌಂಟ್‌ ಒಪನ್‌ ಮಾಡುತ್ತಿರುವ ಸರದಿ ದುನಿಯಾ ವಿಜಯ್‌ ಅವರದ್ದು.

ಸದ್ಯ “ಸಲಗ’ ಚಿತ್ರದ ಸೂಪರ್‌ ಹಿಟ್‌ ಯಶಸ್ಸಿನಲ್ಲಿರುವ ದುನಿಯಾ ವಿಜಯ್‌ ಮುಂದೆ ಯಾವ ಸಿನಿಮಾ ಮಾಡುತ್ತಾರೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಸದ್ಯದ ಮಾಹಿತಿ ಪ್ರಕಾರ ದುನಿಯಾ ವಿಜಯ್‌ ಶೀಘ್ರದಲ್ಲಿಯೇ ತೆಲುಗು ಸಿನಿಮಾವೊಂದರಲ್ಲಿ ಬಣ್ಣ ಹಚ್ಚುವ ಮೂಲಕ ಟಾಲಿವುಡ್‌ ಅಂಗಳಕ್ಕೆ ಎಂಟ್ರಿಯಾಗುತ್ತಿದ್ದಾರೆ.

ಹೌದು, ನಟ ದುನಿಯಾ ವಿಜಯ್‌ ಅವರು ನಂದಮೂರಿ ಬಾಲಕೃಷ್ಣ ಜೊತೆ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ಬಹುತೇಕ ಪಕ್ಕಾ ಆಗಿದೆ. ಈ ಹಿಂದೆ ಕೂಡ ತೆಲುಗು ಸ್ಟಾರ್‌ ನಟ ಬಾಲಕೃಷ್ಣ ಜೊತೆ ವಿಜಯ್‌ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಮತ್ತು ಒಂದಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ್ಗೆ ಹರಿದಾಡುತ್ತಿದ್ದರೂ, ಆದರೆ ಈ ಬಗ್ಗೆ ದುನಿಯಾ ವಿಜಯ್‌ ಅವರಾಗಲೀ, ಚಿತ್ರತಂಡವಾಗಲಿ ಎಲ್ಲೂ ಮಾಹಿತಿ ಬಿಟ್ಟುಕೊಂಡಿರಲಿಲ್ಲ. ಇದೀಗ ಚಿತ್ರತಂಡವೇ ಅಧಿಕೃತವಾಗಿ ದುನಿಯಾ ವಿಜಯ್‌ ತೆಲುಗು ಸಿನಿಮಾದಲ್ಲಿ ಅಭಿನಯಿಸುತ್ತಿರುವ ವಿಷಯವನ್ನು ಹಂಚಿಕೊಂಡಿದೆ.

ಇದನ್ನೂ ಓದಿ:ಜೋಹಾನ್ಸ್ ಬರ್ಗ್ ಟೆಸ್ಟ್: ರಬಾಡಾ, ಅಂಪೈರ್ ಗೆ ಕ್ಷಮೆ ಕೇಳಿದ ಕೆ.ಎಲ್.ರಾಹುಲ್

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ “ಮೈತ್ರಿ ಮೂವೀ ಮೇಕರ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ದುನಿಯಾ ವಿಜಯ್‌ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಸುದ್ದಿಯನ್ನು ಖಚಿತಪಡಿಸಿದೆ.

ಇನ್ನು ನೈಜ ಘಟನೆಗಳನ್ನು ಆಧರಿಸಿ ಮಾಡಲಾಗುತ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ಗೋಪಿಚಂದ್‌ ಮಲಿನೇನಿ ಆ್ಯಕ್ಷನ್‌-ಕಟ್‌ ಹೇಳಲಿದ್ದಾರೆ. ಈಗಾಗಲೇ ನಿರ್ದೇಶಕರು, ಪೋಸ್ಟರ್‌ ಬಿಡುಗಡೆ ಮಾಡಿ ವಿಜಿಯನ್ನು ಸ್ವಾಗತಿಸಿದ್ದಾರೆ.

ಅಂದಹಾಗೆ, ಈ ಸಿನಿಮಾ ತೆಲುಗು ನಟ ಬಾಲಕೃಷ್ಣ ಅಭಿನಯದ 107ನೇ ಸಿನಿಮಾವಾಗಿದ್ದು, ಸದ್ಯಕ್ಕೆ ಈ ಸಿನಿಮಾದ ಟೈಟಲ್‌ ಇನ್ನೂ ಅಂತಿಮವಾಗಿಲ್ಲ. ಈ ಸಿನಿಮಾಕ್ಕಾಗಿ ದುನಿಯಾ ವಿಜಯ್‌ ಈಗಾಗಲೇ ತಮ್ಮ ಹೇರ್‌ ಸ್ಟೈಲ್‌ ಮತ್ತು ಲುಕ್‌ ಬದಲಾಯಿಸಿಕೊಂಡಿದ್ದಾರೆ. ಆದರೆ ಸದ್ಯಕ್ಕೆ ದುನಿಯಾ ವಿಜಯ್‌ ಬಾಲಕೃಷ್ಣ ಅವರ ಸಿನಿಮಾದಲ್ಲಿ ಯಾವ ಪಾತ್ರ ಮಾಡಲಿದ್ದಾರೆ ಎಂಬ ಗುಟ್ಟನ್ನು ಮಾತ್ರ ಸದ್ಯಕ್ಕೆ ಚಿತ್ರತಂಡವಾಗಲಿ, ದುನಿಯಾ ವಿಜಯ್‌ ಅವರಾಗಲಿ ಇನ್ನೂ ಬಿಟ್ಟುಕೊಟ್ಟಿಲ್ಲ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.